Home Latest News ಆ.24ಕ್ಕೆ ರೋಟರಿ ಹಾಲ್‌ನಲ್ಲಿ ಬೃಹತ್ ರಕ್ತದಾನ ಅಭಿಯಾನ
Latest NewschikamagalurHomenamma chikmagalur

ಆ.24ಕ್ಕೆ ರೋಟರಿ ಹಾಲ್‌ನಲ್ಲಿ ಬೃಹತ್ ರಕ್ತದಾನ ಅಭಿಯಾನ

Share
Share

ಚಿಕ್ಕಮಗಳೂರು:  – ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿ ರಾಜಯೋಗಿನಿ ಬ್ರಹ್ಮಕುಮಾರಿ ದಾದಿ ಡಾ. ಪ್ರಕಾಶ್ ಮಣಿಜೀಯವರ ೧೮ನೇ ಪುಣ್ಯ ಸ್ಮೃತಿ ದಿನದ ಅಂಗವಾಗಿ ಬೃಹತ್ ರಕ್ತದಾನ ಅಭಿಯಾನ-೨೦೨೫ನ್ನು ಆ.೨೪ ರಂದು ಭಾನುವಾರ ಬೆಳಗ್ಗೆ ೯.೩೦ ರಿಂದ ಸಂಜೆ ೪.೩೦ ರವರೆಗೆ ನಗರದ ಟಿಎಂಎಸ್ ಆವರಣದ ರೋಟರಿ ಹಾಲ್‌ನಲ್ಲಿ ಏರ್ಪಡಿಸಲಾಗಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪ್ರಜಾಪಿತಾ ಬ್ರಹ್ಮಕುಮಾರೀಸ್ ಸಂಚಾಲಕಿ ರಾಜಯೋಗಿನಿ ಬಿ.ಕೆ. ಭಾಗ್ಯಕ್ಕ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹೆಚ್.ಡಿ. ತಮ್ಮಯ್ಯ ನೆರೆವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ನಗರಸಭಾಧ್ಯಕ್ಷೆ ಶೀಲಾದಿನೇಶ್ ವಹಿಸಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ, ಜಿಲ್ಲಾ ಸರ್ಜನ್ ಡಾ. ಚಂದ್ರಶೇಖರ್, ರೋಟರಿ ಸಂಸ್ಥೆಯ ಅಧ್ಯಕ್ಷ ಲಿಖಿತ್ ಎನ್.ಪಿ. ಹೋಲಿಕ್ರಾಸ್ ಆಸ್ಪತ್ರೆಯ ಆಡಳಿತಾಧಿಕಾರಿ ಲೂಸೀಜಾನ್, ರೆಡ್‌ಕ್ರಾಸ್ ಸಂಸ್ಥೆ ಅಧ್ಯಕ್ಷ ಪ್ರದೀಪ್‌ಗೌಡ, ಜೆಸಿಐ ಅಧ್ಯಕ್ಷ ಪ್ರದೀಪ್ ಕೋಟೆ, ಜಿಲ್ಲಾಧ್ಯಕ್ಷ ಡಾ. ಕೆ.ಎ. ಅನಿತ್ ಕುಮಾರ್ ಭಾಗವಹಿಸಲಿದ್ದಾರೆಂದು ಹೇಳಿದರು.

ಬ್ರಹ್ಮಕುಮಾರೀಸ್ ಸಂಸ್ಥೆ ಇಂದು ವಿಶ್ವದಾದ್ಯಂತ ೧೪೭ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ವ್ಯಾಪಕವಾಗಿ ತನ್ನ ಸೇವೆಯನ್ನು ವಿಸ್ತರಿಸಿದ್ದು, ೧೯೩೬-೧೯೬೯ ರವರೆಗೆ ಸಂಸ್ಥೆಯನ್ನು ನಡೆಸಿ ೧೮.೦೧.೧೯೬೯ ರಂದು ತಮ್ಮ ಸಂಪೂರ್ಣತೆಯನ್ನು ಪಡೆದು ಡಾ. ದಾದಿ ಪ್ರಕಾಶ್ ಮಣಿಜೀ ಅವರು ಅವ್ಯಕ್ತರಾದರು ಎಂದು ತಿಳಿಸಿದರು.

ದಾದಿಜೀ ಅವರಿಗೆ ವಿಶ್ವಸಂಸ್ಥೆ ೬ ಬಾರಿ ‘ಶಾಂತಿದೂತ’ ಬಿರುದನ್ನು ನೀಡಿ ಗೌರವಿಸಿದೆ. ಉದಯಪುರ ಮೋಹನ್‌ಲಾಲ್ ಸುಕಾಡಿಯಾ ವಿಶ್ವವಿದ್ಯಾಲಯ ಇವರನ್ನು ಗುರುತಿಸಿ ಡಾಕ್ಟರೇಟ್ ನೀಡಿ ಗೌರವಿಸಿದೆ ಎಂದು ಹೇಳಿದರು.

ಆ.೨೨ ರಿಂದ ೨೫ ರವರೆಗೆ ಭಾರತ ಮತ್ತು ನೇಪಾಳದಲ್ಲಿ ಬೃಹತ್ ರಕ್ತದಾನ ಅಭಿಯಾನವನ್ನು ಆಯೋಜಿಸಲಾಗಿದ್ದು, ಅದರ ಭಾಗವಾಗಿ ಜಿಲ್ಲೆಯ ತರೀಕೆರೆಯಲ್ಲಿ ಆ.೨೨ ರಂದು, ಮೂಡಿಗೆರೆಯಲ್ಲಿ ಆ.೨೩, ಚಿಕ್ಕಮಗಳೂರು ನಗರದಲ್ಲಿ ಆ.೨೪ ರಂದು ರಕ್ತದಾನ ಅಭಿಯಾನ ನಡೆಯಲಿದೆ ಎಂದರು.

ರೋಟರಿ, ರೆಡ್‌ಕ್ರಾಸ್, ಜೆಸಿಐ, ಲಯನ್ಸ್, ಹೋಲಿಕ್ರಾಸ್ ಆಸ್ಪತ್ರೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿವೇಕ ಜಾಗೃತಿ ಬಳಗ, ಭೂಮಿಕ ಟಿವಿ, ಕನ್ನಡ ಸೇನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅನುವ್ರತ್ ಸಮಿತಿ, ಕನ್ನಡ ಜಾನಪದ ಪರಿಷತ್ ಇವರುಗಳ ಸಂಯುಕ್ತಾಶ್ರಯದಲ್ಲಿ ಅಭಿಯಾನವನ್ನು ಆಯೋಜಿಸಲಾಗಿದೆ ಎಂದರು.

ವಿದ್ಯಾರ್ಥಿ ಯುವಜನರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬೃಹತ್ ರಕ್ತದಾನ ಅಭಿಯಾನದಲ್ಲಿ ಪಾಲ್ಗೊಂಡು ರಕ್ತದಾನ ಮಾಡುವಂತೆ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಡಾ. ಅನಿತ್‌ಕುಮಾರ್, ಜಿ.ರಮೇಶ್, ನಂದಕುಮಾರ್, ಗೋಪಿಕೃಷ್ಣ, ಬಿ.ಎನ್. ವೆಂಕಟೇಶ್, ಲಿಖಿತ್ ಎನ್.ಪಿ ಮತ್ತಿತರರು ಉಪಸ್ಥಿತರಿದ್ದರು

Massive blood donation drive at Rotary Hall on August 24

Share

Leave a comment

Leave a Reply

Your email address will not be published. Required fields are marked *

Don't Miss

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

ಇಂದು ಮನೆ-ಮನೆಗೆ ಬಿಎಲ್‍ಒ ಭೇಟಿ-ಮತದಾರರಿಗೆ ಗಣತಿ ನಮೂನೆ ವಿತರಣೆ

ಚಿಕ್ಕಮಗಳೂರು: ಮತದಾರರ ಪಟ್ಟಿಯನ್ನು ಅತ್ಯಂತ ನಿಖರವಾಗಿ ಹಾಗೂ ದೋಷ ರಹಿತವಾಗಿ ರೂಪಿಸುವ ನಿಟ್ಟಿನಲ್ಲಿ ಇದೇ ಜೂನ್ 30 ರಿಂದ ಜುಲೈ 29 ರವರೆಗೆ ಜಿಲ್ಲೆಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-ಎಸ್‍ಐಆರ್-2026...

Related Articles

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ,...