Home Latest News ಆ.24ಕ್ಕೆ ರೋಟರಿ ಹಾಲ್‌ನಲ್ಲಿ ಬೃಹತ್ ರಕ್ತದಾನ ಅಭಿಯಾನ
Latest NewschikamagalurHomenamma chikmagalur

ಆ.24ಕ್ಕೆ ರೋಟರಿ ಹಾಲ್‌ನಲ್ಲಿ ಬೃಹತ್ ರಕ್ತದಾನ ಅಭಿಯಾನ

Share
Share

ಚಿಕ್ಕಮಗಳೂರು:  – ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿ ರಾಜಯೋಗಿನಿ ಬ್ರಹ್ಮಕುಮಾರಿ ದಾದಿ ಡಾ. ಪ್ರಕಾಶ್ ಮಣಿಜೀಯವರ ೧೮ನೇ ಪುಣ್ಯ ಸ್ಮೃತಿ ದಿನದ ಅಂಗವಾಗಿ ಬೃಹತ್ ರಕ್ತದಾನ ಅಭಿಯಾನ-೨೦೨೫ನ್ನು ಆ.೨೪ ರಂದು ಭಾನುವಾರ ಬೆಳಗ್ಗೆ ೯.೩೦ ರಿಂದ ಸಂಜೆ ೪.೩೦ ರವರೆಗೆ ನಗರದ ಟಿಎಂಎಸ್ ಆವರಣದ ರೋಟರಿ ಹಾಲ್‌ನಲ್ಲಿ ಏರ್ಪಡಿಸಲಾಗಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪ್ರಜಾಪಿತಾ ಬ್ರಹ್ಮಕುಮಾರೀಸ್ ಸಂಚಾಲಕಿ ರಾಜಯೋಗಿನಿ ಬಿ.ಕೆ. ಭಾಗ್ಯಕ್ಕ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹೆಚ್.ಡಿ. ತಮ್ಮಯ್ಯ ನೆರೆವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ನಗರಸಭಾಧ್ಯಕ್ಷೆ ಶೀಲಾದಿನೇಶ್ ವಹಿಸಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ, ಜಿಲ್ಲಾ ಸರ್ಜನ್ ಡಾ. ಚಂದ್ರಶೇಖರ್, ರೋಟರಿ ಸಂಸ್ಥೆಯ ಅಧ್ಯಕ್ಷ ಲಿಖಿತ್ ಎನ್.ಪಿ. ಹೋಲಿಕ್ರಾಸ್ ಆಸ್ಪತ್ರೆಯ ಆಡಳಿತಾಧಿಕಾರಿ ಲೂಸೀಜಾನ್, ರೆಡ್‌ಕ್ರಾಸ್ ಸಂಸ್ಥೆ ಅಧ್ಯಕ್ಷ ಪ್ರದೀಪ್‌ಗೌಡ, ಜೆಸಿಐ ಅಧ್ಯಕ್ಷ ಪ್ರದೀಪ್ ಕೋಟೆ, ಜಿಲ್ಲಾಧ್ಯಕ್ಷ ಡಾ. ಕೆ.ಎ. ಅನಿತ್ ಕುಮಾರ್ ಭಾಗವಹಿಸಲಿದ್ದಾರೆಂದು ಹೇಳಿದರು.

ಬ್ರಹ್ಮಕುಮಾರೀಸ್ ಸಂಸ್ಥೆ ಇಂದು ವಿಶ್ವದಾದ್ಯಂತ ೧೪೭ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ವ್ಯಾಪಕವಾಗಿ ತನ್ನ ಸೇವೆಯನ್ನು ವಿಸ್ತರಿಸಿದ್ದು, ೧೯೩೬-೧೯೬೯ ರವರೆಗೆ ಸಂಸ್ಥೆಯನ್ನು ನಡೆಸಿ ೧೮.೦೧.೧೯೬೯ ರಂದು ತಮ್ಮ ಸಂಪೂರ್ಣತೆಯನ್ನು ಪಡೆದು ಡಾ. ದಾದಿ ಪ್ರಕಾಶ್ ಮಣಿಜೀ ಅವರು ಅವ್ಯಕ್ತರಾದರು ಎಂದು ತಿಳಿಸಿದರು.

ದಾದಿಜೀ ಅವರಿಗೆ ವಿಶ್ವಸಂಸ್ಥೆ ೬ ಬಾರಿ ‘ಶಾಂತಿದೂತ’ ಬಿರುದನ್ನು ನೀಡಿ ಗೌರವಿಸಿದೆ. ಉದಯಪುರ ಮೋಹನ್‌ಲಾಲ್ ಸುಕಾಡಿಯಾ ವಿಶ್ವವಿದ್ಯಾಲಯ ಇವರನ್ನು ಗುರುತಿಸಿ ಡಾಕ್ಟರೇಟ್ ನೀಡಿ ಗೌರವಿಸಿದೆ ಎಂದು ಹೇಳಿದರು.

ಆ.೨೨ ರಿಂದ ೨೫ ರವರೆಗೆ ಭಾರತ ಮತ್ತು ನೇಪಾಳದಲ್ಲಿ ಬೃಹತ್ ರಕ್ತದಾನ ಅಭಿಯಾನವನ್ನು ಆಯೋಜಿಸಲಾಗಿದ್ದು, ಅದರ ಭಾಗವಾಗಿ ಜಿಲ್ಲೆಯ ತರೀಕೆರೆಯಲ್ಲಿ ಆ.೨೨ ರಂದು, ಮೂಡಿಗೆರೆಯಲ್ಲಿ ಆ.೨೩, ಚಿಕ್ಕಮಗಳೂರು ನಗರದಲ್ಲಿ ಆ.೨೪ ರಂದು ರಕ್ತದಾನ ಅಭಿಯಾನ ನಡೆಯಲಿದೆ ಎಂದರು.

ರೋಟರಿ, ರೆಡ್‌ಕ್ರಾಸ್, ಜೆಸಿಐ, ಲಯನ್ಸ್, ಹೋಲಿಕ್ರಾಸ್ ಆಸ್ಪತ್ರೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿವೇಕ ಜಾಗೃತಿ ಬಳಗ, ಭೂಮಿಕ ಟಿವಿ, ಕನ್ನಡ ಸೇನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅನುವ್ರತ್ ಸಮಿತಿ, ಕನ್ನಡ ಜಾನಪದ ಪರಿಷತ್ ಇವರುಗಳ ಸಂಯುಕ್ತಾಶ್ರಯದಲ್ಲಿ ಅಭಿಯಾನವನ್ನು ಆಯೋಜಿಸಲಾಗಿದೆ ಎಂದರು.

ವಿದ್ಯಾರ್ಥಿ ಯುವಜನರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬೃಹತ್ ರಕ್ತದಾನ ಅಭಿಯಾನದಲ್ಲಿ ಪಾಲ್ಗೊಂಡು ರಕ್ತದಾನ ಮಾಡುವಂತೆ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಡಾ. ಅನಿತ್‌ಕುಮಾರ್, ಜಿ.ರಮೇಶ್, ನಂದಕುಮಾರ್, ಗೋಪಿಕೃಷ್ಣ, ಬಿ.ಎನ್. ವೆಂಕಟೇಶ್, ಲಿಖಿತ್ ಎನ್.ಪಿ ಮತ್ತಿತರರು ಉಪಸ್ಥಿತರಿದ್ದರು

Massive blood donation drive at Rotary Hall on August 24

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...