Home namma chikmagalur ಗಣೇಶನ ಮೂರ್ತಿ ತಯಾರಿಸುವ ಸ್ಥಳಕ್ಕೆ ನಗರಸಭೆ ಆಯುಕ್ತರ ಭೇಟಿ
namma chikmagalurLatest News

ಗಣೇಶನ ಮೂರ್ತಿ ತಯಾರಿಸುವ ಸ್ಥಳಕ್ಕೆ ನಗರಸಭೆ ಆಯುಕ್ತರ ಭೇಟಿ

Share
Share

ಚಿಕ್ಕಮಗಳೂರು:  ಪಿಓಪಿ ಗಣೇಶ ಮೂರ್ತಿಗಳನ್ನು ತಯಾರಿಸಬಾರದು, ಮಣ್ಣಿನ ಮೂರ್ತಿಗಳನ್ನೇ ಪೂಜಿಸಬೇಕು ಎಂದು ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಆಯುಕ್ತರು ಮತ್ತು ಸಿಬ್ಬಂದಿಗಳೊಂದಿಗೆ ಗುರುವಾರ ನಗರದ ಬಸವನ ಹಳ್ಳಿ ಕುಂಬಾರ ಬೀದಿ ಬಡಾವಣೆಯ ಗಣೇಶನ ಮೂರ್ತಿಗಳನ್ನು ತಯಾರಿಸುವ ಸ್ಥಳಕ್ಕೆ ಭೇಟಿ ನೀಡಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುತ್ತಿರುವ ಕುರಿತು ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ನಗರದ ಕೋಟೆ ಕೆರೆಯಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ಪ್ರತ್ಯೇಕ ವ್ಯವಸ್ಥೆಗಳನ್ನು ನಗರಸಭೆ ವತಿಯಿಂದ ಮಾಡಲಾಗಿದೆ. ಹೂವು ಮತ್ತು ಪೂಜಾ ಸಾಮಾಗ್ರಿಗಳನ್ನು ನೀರಿಗೆ ಬಿಡಬಾರದು ಅದನ್ನು ಪ್ರತ್ಯೇಕವಾಗಿ ಸಂಗ್ರಹಿಸಲು ಸಹ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ನಗರಸಭೆ ಆಯುಕ್ತ ಬಿ.ಸಿ.ಬಸವರಾಜು ಮಾತನಾಡಿ, ನಗರ ವ್ಯಾಪ್ತಿಯಲ್ಲಿ ಪರಿಶೀಲನೆ ವೇಳೆ ಯಾರೂ ಸಹ ಪಿಓಪಿ ಮೂರ್ತಿಗಳನ್ನು ತಯಾರಿಸುವುದಾಗಲಿ, ಬಳಸುವುದಾಗಲಿ ಕಂಡುಬಂದಿಲ್ಲ. ಈ ಹಿಂದೆಯೂ ಗಣೇಶ ಮತ್ತು ಗೌರಿ ಮೂರ್ತಿಗಳನ್ನು ಮಣ್ಣಿನಿಂದಲೇ ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಇದು ಖುಷಿಯ ವಿಚಾರ ಎಂದರು.

ನಗರದ ಕೊಟೆ ಕೆರೆಯಲ್ಲಿ ಗಣಪತಿಗಳನ್ನು ವಿಸರ್ಜಿಸಲು ಕಲ್ಯಾಣಿಯೊಂದನ್ನು ನಿರ್ಮಾಣ ಮಾಡಲಾಗಿದೆ. ಸಾರ್ವಜನಿಕರು ಅಲ್ಲಿಯೇ ಗಣೇಶ ಮೂರ್ತಿಗಳನ್ನು ವಿಸರ್ಜಿಸಬೇಕು. ಬೇರೆ, ಕರೆ ಕಟ್ಟೆಗಳಲ್ಲಿ ವಿಸರ್ಜಿಸಬಾರದು ಎಂದು ತಿಳಿಸಿದರು.

ಇದಲ್ಲದೆ ನಗರದ ಹನುಮಂತಪ್ಪ ಸರ್ಕಲ್, ಆಜಾದ್ ಪಾರ್ಕ್ ಸರ್ಕಲ್, ದಂಡರ ಮಕ್ಕಿ ಕೆರೆ ಬಳಿ, ಟೌನ್ ಕ್ಯಾಂಟೀನ್ ಸರ್ಕಲ್ ಮತ್ತು ಮಲ್ಲಂದುರು ರಸ್ತೆ ಗಳಲ್ಲಿ ಗಣೇಶ ವಿಸರ್ಜನೆಗೆ ಟ್ಯಾಂಕರ್‌ಗಳನ್ನು ನಿಲ್ಲಿಸಲಾಗುವುದು. ಜನತೆ ಚಿಕ್ಕ ಚಿಕ್ಕ ಗಣೇಶ ಮೂರ್ತಿಗಳನ್ನು ಅಲ್ಲಿಯೇ ವಿಸರ್ಜಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಕೋಟೆ ಕೆರೆಯಲ್ಲಿ ವಿಸರ್ಜನೆ ಮಾಡುವುದು ಸೂಕ್ತ ಎಂದರು.

ಗಣೇಶೋತ್ಸವ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಈಗಾಗಲೇ ೨ ಸಭೆಗಳನ್ನು ನಡೆಸಲಾಗಿದೆ. ಹೊರ ಜಿಲ್ಲೆಗಳಿಂದ ಪಿಓಪಿ ಗಣೇಶ ಮೂರ್ತಿಗಳನ್ನು ತರಿಸಬಾರದು ಎನ್ನುವ ಉದ್ದೇಶದಿಂದ ಜಿಲ್ಲೆ ಮತ್ತು ತಾಲ್ಲೂಕಿನ ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ನಿರ್ಮಾಣ ಮಾಡಿ ಪೊಲೀಸರನ್ನು ನೇಮಿಸಿ ಎಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.

ಇದನ್ನು ಮೀರಿ ಪಿಓಪಿ ಮೂರ್ತಿಗಳನ್ನು ಮಾರಾಟ ಮಾಡಿದ್ದು ಕಂಡು ಬಂದಲ್ಲಿ ಸ್ಥಳದಲ್ಲೇ ದಂಡ ವಿಧಿಸಲಾಗುತ್ತದೆ. ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯವಾಗಿರುತ್ತದೆ. ಇದಕ್ಕಾಗಿ ನಗರಸಭೆಯಲ್ಲಿ ಸಿಂಗಲ್ ವಿಂಡೋ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಯೇ ಎಲ್ಲಾ ಇಲಾಖೆಗೆ ಸಂಬಂಧಿಸಿದ ಪರವಾನಗಿಯನ್ನು ಪಡೆಯಬಹುದು ಎಂದು ತಿಳಿಸಿದರು.

ನಗರಸಭಾ ಸದಸ್ಯ ಎ.ಸಿ.ಕುಮಾರ್ ಮಾತನಾಡಿ, ನಗರಸಭೆ ಪ್ಲಾಸ್ಟಿಕ್ ಮುಕ್ತ ಮತ್ತು ಕಸ ಮುಕ್ತ ನಗರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶನನ್ನು ಪೂಜಿಸಿ ಸಹಕರಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಗರಸಭೆ ಪರಿಸರ ಅಭಿಯಂತರರಾದ ತೇಜಸ್ವಿನಿ, ಆರೋಗ್ಯ ನಿರೀಕ್ಷರಾದ ನಾಗಪ್ಪ, ರಂಗಪ್ಪ, ಈಶ್ವರ್, ವೆಂಕಟೇಶ್, ಅಣ್ಣಯ್ಯ ಮತ್ತು ಸಿಬ್ಬಂದಿ ಇದ್ದರು.

Municipal Commissioner visits the place where Ganesha idols are made

Share

Leave a comment

Leave a Reply

Your email address will not be published. Required fields are marked *

Don't Miss

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಶೆಟ್ಟಿ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

Related Articles

ಬಯಲ ಬಂಗಾರದ”ಈರುಳ್ಳಿ” ಬಲು ದೂರ,ದೂರ

ಅಜ್ಜಂಪುರ: ಚಿಕ್ಕಮಗಳೂರು ಜಿಲ್ಲೆಯಲ್ಲಿ “ಬಯಲ ಬಂಗಾರದ ಬೆಳೆ ಬೆಳೆಯುವ ಕಪ್ಪು ಮಣ್ಣು ಅಜ್ಜಂಪುರ ಮತ್ತು ಕಡೂರು...

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ...