Home namma chikmagalur ಖಾಸಗಿ ಸ್ಟೋನ್ ಕ್ರಷರ್ ರದ್ದುಪಡಿಸಲು 15 ದಿನ ಗಡುವು
namma chikmagalurchikamagalurHomeLatest News

ಖಾಸಗಿ ಸ್ಟೋನ್ ಕ್ರಷರ್ ರದ್ದುಪಡಿಸಲು 15 ದಿನ ಗಡುವು

Share
Share

ಚಿಕ್ಕಮಗಳೂರು: ಮರ್ಲೆ ಹೊಸಳ್ಳಿಯಲ್ಲಿ ಕಾನೂನುಬಾಹಿರವಾಗಿ ನಡೆಸುತ್ತಿರುವ ಖಾಸಗಿ ಸ್ಟೋನ್ ಕ್ರಷರ್ ರದ್ದುಪಡಿಸಲು ೧೫ ದಿನ ಗಡುವು ನೀಡಿ ನಂತರ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದ ಕರ್ನಾಟಕ ರಾಜ್ಯ ರೈತ ಸಂಘ ಈಗ ಮೌನವಹಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಮರ್ಲೆ ಹೊಸಳ್ಳಿ ಗ್ರಾಮದ ರೈತ ಮಹಿಳೆ ಕಲ್ಪನಾ ದೂರಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗಣಿಗಾರಿಕೆ ನಿಯಮಗಳಿಗೆ ವಿರುದ್ಧವಾಗಿ ಮರ್ಲೆ ಹೊಸಳ್ಳಿ ಸಮೀಪ ಕಲ್ಲುಗಣಿಗಾರಿಕೆ ನಡಸಲಾಗುತ್ತಿದೆ. ಗ್ರಾಮಸ್ಥರ ಜಮೀನುಗಳು ೫೦ ಮೀಟರ್ ಅಂತರದಲ್ಲಿದ್ದು, ಧೂಳು, ಕಲ್ಲಿನ ಚೂರುಗಳು, ಕಲುಷಿತ ನೀರು ಜಮೀನಿಗೆ ಆವರಿಸುತ್ತಿದೆ ಎಂದು ಆರೋಪಿಸಿದರು.

ಜಮೀನಲ್ಲಿ ಕೆಲಸಮಾಡಲು ಭಯವಾಗುತ್ತಿದೆ. ಕಲ್ಲು ಸ್ಪೋಟಿಸುವ ಶಬ್ದದಿಂದ ಕುರಿ, ಹಸುಗಳು ಗರ್ಭಪಾತವಾಗಿ ಸಾವನ್ನಪ್ಪಿವೆ. ಕೃಷಿ, ಹೈನುಗಾರಿಕೆಯನ್ನೇ ಪ್ರಧಾನವಾಗಿ ಮಾಡಿಕೊಂಡು ಬದುಕುತ್ತಿರುವ ನಮಗೆ ಗಣಿಗಾರಿಕೆಯಿಂದ ಬದುಕೇ ದುಸ್ತರವಾಗಿದೆ. ಸಾಲಬಾಧೆಯಿಂದ ಕಾಲ ತಳ್ಳುತ್ತಿದ್ದೇವೆ ಎಂದು ನೊಂದು ನುಡಿದರು.

ಈ ಬಗ್ಗೆ ತಾವು ಮತ್ತು ಗ್ರಾಮಸ್ಥರು ಸ್ಟೋನ್ ಕ್ರಷರ್ ಮಾಲೀಕರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದು ವಿಚಾರಣೆಯಲ್ಲಿದೆ ಎಂದು ಹೇಳಿದರು.

ಈ ನಡುವೆ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ನಮ್ಮ ಗ್ರಾಮಕ್ಕೆ ಭೇಟಿ ನೀಡಿ ನ್ಯಾಯಕೊಡಿಸುವುದಾಗಿ ಹೇಳಿ ನಮ್ಮನ್ನು ನಂಬಿಸಿದರು. ನಮ್ಮಿಂದ ಎಲ್ಲ ದಾಖಲೆಗಳನ್ನು ಪಡೆದು ಸ್ಥಳಪರಿಶೀಲನೆ ಮಾಡಿ, ಸ್ಟೋನ್ ಕ್ರಷರ್ ಮಾಲೀಕರ ವಿರುದ್ಧ ಘೋಷಣೆ ಕೂಗಿದರು. ಕಲ್ಲುಗಣಿಗಾರಿಕೆ ಅಕ್ರಮ, ಕಾನೂನುಬಾಹಿರ ಎಂದು ತಿಳಿಸಿ ಸ್ಥಳದಿಂದ ತೆರಳಿದ್ದರು ಎಂದು ತಿಳಿಸಿದರು.

ಜು.೨೯ ಕ್ಕೆ ಜಿಲ್ಲಾ ಕೇಂದ್ರಕ್ಕೆ ಬಂದು ಸುದ್ದಿಗೋಷ್ಠಿ ನಡೆಸಿ ಕಾನೂನು ಬಾಹಿರವಾಗಿ ನಡೆಸುತ್ತಿರುವ ಕಲ್ಲುಗಣಿಗಾರಿಕೆಯನ್ನು ಮುಂದಿನ ೧೫ ದಿನದೊಳಗೆ ಸ್ಥಗಿತಗೊಳಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದರು.

ಆದರೆ, ಗಣಿಗಾರಿಕೆ ನಿಲ್ಲಲಿಲ್ಲ. ಅವರ ಗಡವೂ ಮುಗಿಯಿತು. ಅವರು ಹೇಳಿದಂತೆ ಆ.೧೨ ರಂದು ಗಣಿಗಾರಿಕೆ ಪ್ರದೇಶಕ್ಕೆ ಬಂದು ಪ್ರತಿಭಟನೆ ನಡೆಸಬೇಕಿತ್ತು. ತಮಗೆ ಬರುವುದಾಗಿ ಹೇಳಿ ೧೦೦ ಮಂದಿಗೆ ಊಟ ಮಾಡಿಸಿ ಎಂದು ಹೇಳಿದ್ದರು. ಆದರೆ ಯಾರೂ ಬರಲಿಲ್ಲ. ಫೋನಾಯಿಸಿದರೆ ಉಡಾಫೆ ಉತ್ತರ ನೀಡಿದ್ದಾರೆ. ರೈತ ಸಂಘದ ಅಧ್ಯಕ್ಷ, ಪದಾಧಿಕಾರಿಗಳ ಈ ನಡೆಯಿಂದ ನಮ್ಮ ಮನಸ್ಸಿಗೆ ತುಂಬಾ ನೋವಾಗಿದೆ ಎಂದರು.

ಜತೆಗೆ ಸ್ಟೋನ್ ಕ್ರಷರ್ ಮಾಲೀಕರು ಮತ್ತು ವಿಧಾನ ಪರಿಷತ್ ಸದಸ್ಯರ ಕೆಂಗಣ್ಣಿಗೆ ಗುರಿಯಾಗುವಂತಾಗಿದೆ. ಈ ರೀತಿ ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸಿ ರೈತ ಸಂಘದವರು ಮೌನವಾಗಿರುವುದರ ಹಿಂದಿನ ಉದ್ದೇಶವಾದರೂ ಏನು ಎಂದು ಪ್ರಶ್ನಿಸಿ, ಗಣಿಗಾರಿಕೆ ಮಾಲೀಕರೊಂದಿಗೆ ಇವರೇನಾದರು ಶಾಮೀಲಾದರೇ ಎಂಬ ಅನುಮಾನ ಮೂಡುತ್ತಿದೆ ಎಂದು ಆರೋಪಿಸಿದರು.

ಮರ್ಲೆ ಹೊಸಳ್ಳಿ ಗ್ರಾಮಸ್ಥರಿಗೆ ನ್ಯಾಯ ಕೊಡಿಸುವ ಇಚ್ಛಾಶಕ್ತಿ ರೈತ ಸಂಘದ ಮುಖಂಡರಿಗೆ ಇದ್ದಲ್ಲಿ ಕೂಡಲೇ ಅವರು ಆಡಿದಂತೆ ಹೋರಾಟ ಮಾಡಿ ತೋರಿಸಬೇಕು. ಇಲ್ಲದಿದ್ದರೆ ಹಸಿರು ಶಾಲು ತೆಗೆದಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

15-day deadline to cancel private stone crusher

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...