Home namma chikmagalur ರಕ್ಷಣೆ ಮಾಡಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಯುವಕ
namma chikmagalurchikamagalurHomeLatest News

ರಕ್ಷಣೆ ಮಾಡಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಯುವಕ

Share
Share

ಚಿಕ್ಕಮಗಳೂರು: ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಹಳ್ಳ ದಾಟುತ್ತಿದ್ದ ವ್ಯಕ್ತಿಯೋರ್ವನನ್ನು ರಕ್ಷಣೆ ಮಾಡಲು ಹೋದ ಯುವಕನೋರ್ವ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

ಸಾದರಹಳ್ಳಿ ಗ್ರಾಮದ ಯತೀಶ್ (೨೫) ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿರುವ ಯುವಕನಾಗಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಶೋಧ ಮುಂದುವರಿಸಿದ್ದಾರೆ. ಸಖರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿರುವ ಸ್ಮಶಾನದ ಹಳ್ಳ ತುಂಬಿ ರಸ್ತೆ ಮೇಲೆ ಹರಿಯುತ್ತಿದೆ.

ಪೊಲೀಸರು ಬ್ಯಾರಿಕೇಡ್ ಇಟ್ಟು ಸಾರ್ವಜನಿಕರು, ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಮುಂಜಾಗ್ರತಾ ಕ್ರಮಕೈಗೊಂಡಿದ್ದರು.

ಯತೀಶ್ ಹಾಗೂ ಆತನ ಸ್ನೇಹಿತ ಬೈಕ್‌ನಲ್ಲಿ ಈ ರಸ್ತೆಯ ಮೇಲೆ ಹೋಗಿದ್ದು, ರಸ್ತೆಯ ಮೇಲೆ ರಭಸದಿಂದ ಹರಿಯುತ್ತಿದ್ದ ಹಳ್ಳದ ನೀರಿನಲ್ಲಿ ಬೈಕ್ ದಾಟಿಸಲು ಹೋದ ವೇಳೆ ಸವಾರ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದಾನೆ,

ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಸ್ನೇಹಿತನ ರಕ್ಷಣೆ ಮಾಡಲು ಯತೀಶ್ ಮುಂದಾದ ವೇಳೆ ನಿಯಂತ್ರಣ ತಪ್ಪಿಹಳ್ಳಕ್ಕೆ ಬಿದ್ದಿದ್ದು, ಆತ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಯತೀಶ್ ಸುಳಿವು ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕದಳದ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ.

A young man who went to rescue and was swept away in the water

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...