Home ಮಟ್ಟು ಔಟ್- ಶಿವಕುಮಾರ್ ಇನ್- ಆರತಿ ಸ್ಟ್ರಾಂಗ್- ಜಕ್ಕಣ್ಣ ಒಕೆ
HomeState News

ಮಟ್ಟು ಔಟ್- ಶಿವಕುಮಾರ್ ಇನ್- ಆರತಿ ಸ್ಟ್ರಾಂಗ್- ಜಕ್ಕಣ್ಣ ಒಕೆ

Share
Share

ಬೆಂಗಳೂರು: ವಿಧಾನ ಪರಿಷತ್ ಗೆ ನಾಲ್ವರನ್ನು ನೇಮಕ ಮಾಡಿ ಎರಡು ತಿಂಗಳ ಹಿಂದೆ ರಾಜ್ಯಪಾಲರ ಬಳಿ ಹೋಗಿದ್ದ ಪಟ್ಟಿಯಲ್ಲಿ ಆರತಿ ಕೃಷ್ಣ ಮತ್ತು ರಮೇಶ್‌ ಬಾಬು ಉಳಿದರೆ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಮತ್ತು ಡಿ.ಜಿ.ಸಾಗರ್ ಪಟ್ಟಿಯಿಂದ ಔಟ್ ಆಗಿದ್ದಾರೆ. ಇವರ ಬದಲು ಪತ್ರಕರ್ತ ಮೈಸೂರು ಮೂಲದ ಶಿವಕುಮಾರ್ ಮತ್ತು ಹುಬ್ಬಳ್ಳಿ ಧಾರವಾಡ ಮೂಲದ ಜಕ್ಕಣ್ಣನವರ ಹೆಸರು ಅಂತಿಮ ಗೊಳಿಸಲಾಗಿದೆ.

ಆರತಿ ಕೃಷ್ಣಗೆ ಫೈಟ್ ಕೊಟ್ಟವರು ಬಿ.ಎಲ್.ಶಂಕರ್ ಜಿಲ್ಲೆಯ ರಾಜಕಾರಣದಲ್ಲಿ ಶಂಕರ್ ಕೈ ತೂರಿಸದಿದ್ದರೆ ಮುಗಿಯುವುದಿಲ್ಲ ಎಂಬ ಜಾಮಾನ ಮುಗಿದಂತೆ ಕಾಣಿಸುತ್ತಿದೆ. ಆರತಿ ಕೃಷ್ಣ ಆಯ್ಕೆ ಹಿಂದೆ ಶ್ಯಾಮ್ ಪಿತ್ರೋಡರವರ ಕೈ ಕೆಲಸ ಮಾಡಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಶಿವಕುಮಾರ್ ಏನೂ ಮಾಡಲಾಗಿಲ್ಲ.

ಆರತಿ ಕೃಷ್ಣ ರಾಷ್ಟ್ರ ಮಟ್ಟದಲ್ಲಿ ಬಲಿಷ್ಠ ರಾಗಿರುವುದು ಶಂಕರ್ ಮನೆ ಸೇರಬಹುದು. ಇಲ್ಲ ಎಂದರೆ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷರಾಗಿ ಧರ್ಮಸ್ಥಳದವರನ್ನು ಮೆಚ್ಚಿಸಲು ಭಾಷಣ ಮಾಡಬಹುದು. ಇಂತಹ ಡಬಲ್ ಸ್ಟ್ಯಾಂಡರ್ಡ್ ರಾಜಕೀಯ ಮುಖವಾಡಗಳು ಇನ್ನೂ ಮುಂದೆ ನಿಂತ ನೀರಾಗಿ ಪಾಚಿ ಕಟ್ಟಬಹುದು. ಕೆಪಿಸಿಸಿ ಮಾಧ್ಯಮದ ಅಧ್ಯಕ್ಷರು ತಮ್ಮ ತಾಕತ್ತು ತೋರಿಸುವ ಜೊತೆಗೆ ಮತ್ತೊಮ್ಮೆ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.

ಖ್ಯಾತ ಪತ್ರಕರ್ತ ಭಾಷಣಕಾರರಾದ ದಿನೇಶ್ ಅಮೀನ್ ಮಟ್ಟು ಮಟ್ಟಾ ಆಗಿದ್ದು ಹೇಗೆ. ಸಿದ್ದರಾಮಯ್ಯ 2013 ರಲ್ಲಿ ಮಾಧ್ಯಮ ಕಾರ್ಯದರ್ಶಿಯಾಗಿದ್ದ ಠೇಂಕಾರ ಮನುಷ್ಯನ ಹೆಸರು ಮೊದಲ ಪಟ್ಟಿಯಲ್ಲಿ ಒಕೆ ಈಗಿನ ಪಟ್ಟಿಯಲ್ಲಿ ಫಿಲ್ಟರ್ ಆಗಿದ್ದು ಏಕೆ? ಪತ್ರಕರ್ತರಿಗೆ ಸ್ಪಂದಿಸುವ ಗುಣಗಳಿಲ್ಲದ ಈತ ಜನಸಾಮಾನ್ಯರಿಗೆ ಹೇಗೆ ಸ್ಪಂದಿಸಲು ಸಾಧ್ಯ ಎಂಬ ಯಕ್ಷ ಪ್ರಶ್ನೆಗೆ ಉತ್ತರ ಸಿಕ್ಕಿದೆ.ಇವರ ಬದಲಿಗೆ ಮೈಸೂರು ಮೂಲದ ಶಿವಕುಮಾರ್ ಎಂಬ ಪತ್ರಕರ್ತ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.

ಡಿ.ಜಿ.ಸಾಗರ್ ದಲಿತ ಸಂಘಟನೆಯ ಮುಖಂಡ ಖರ್ಗೆ ಕುಟುಂಬಕ್ಕೆ ಕಂಟಕವಾಗಬಾರದು ಎಂಬ ಹಿನ್ನೆಲೆಯಲ್ಲಿ ಮೊದಲ ಪಟ್ಟಿಯಲ್ಲಿ ಹೆಸರು ಸೇರಿತ್ತು ಆದರೆ ಬದಲಾದ ಪರಿಸ್ಥಿತಿಯಲ್ಲಿ ಹುಬ್ಬಳ್ಳಿ ಧಾರವಾಡ ಮೂಲದ ಕಾಂಗ್ರೆಸ್ ಮುಖಂಡ ಜಕ್ಕಣ್ಣ ಎಂಟ್ರಿ ಕೊಟ್ಟಿದ್ದಾರೆ. ಅಂತೂ ಇಂತೂ ಕೊನೆಗೆ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರಾಗಲು ಗ್ರೀನ್ ಸಿಗ್ನಲ್ ಕೊಟ್ಟಿದೆ

Mattu out- Shivakumar in- Aarti strong- Jakkanna OK

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...