Home Latest News ರೈತರ ಸಂಘದ ಮೇಲೆ ಮಾಡಿರುವ ಆರೋಪ ನಿರಾಧಾರ
Latest NewschikamagalurHomenamma chikmagalur

ರೈತರ ಸಂಘದ ಮೇಲೆ ಮಾಡಿರುವ ಆರೋಪ ನಿರಾಧಾರ

Share
Share

ಚಿಕ್ಕಮಗಳೂರು: ಮರ್ಲೆ ಗ್ರಾಮದಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಗೆ ಸಂಬಂಧಿಸಿದಂತೆ ಮಹಿಳೆ ಕಲ್ಪನಾ ಅವರು ರೈತರ ಸಂಘದ ಮೇಲೆ ಮಾಡಿರುವ ಆರೋಪ ನಿರಾಧಾರವಾಗಿದೆ. ಆರೋಪ ಸಾಬೀತುಪಡಿಸಬೇಕು. ಇಲ್ಲವಾದಲ್ಲಿ ರೈತ ಸಂಘಟನೆಯ ಕ್ಷಮೆ ಕೇಳಬೇಕೆಂದು ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಮಹೇಶ್ ಮತ್ತು ಮಾಜಿ ಅಧ್ಯಕ್ಷ ಗುರುಶಾಂತಪ್ಪ ಒತ್ತಾಯಿಸಿದರು.

ಜಂಟಿಸುದ್ದಿಗೋಷ್ಟಿಯಲ್ಲಿ ಸೋಮವಾರ ಮಾತನಾಡಿ,ಸೈದ್ಧಾಂತಿಕ ಹಿನ್ನಲೆಯಿಂದ ಶಿಸ್ತುಬದ್ಧವಾಗಿ ಕಟ್ಟಿದ ಜನಪರ ಸಂಘಟನೆಯ ಮೇಲೆ ಆರೋಪ ಮಾಡುವಾಗ ಎಚ್ಚರಿಕೆ ಇರಬೇಕು. ಆಧಾರಸಹಿತವಾಗಿರಬೇಕು. ಕೇಳಿದ ತಕ್ಷಣ ನ್ಯಾಯಕೊಡಿಸಲು ಅಂಗಡಿಯಲ್ಲಿ ಮಾರಾಟವಾಗುವ ಸಲಕರಣೆಯಲ್ಲ, ಅನ್ಯಾಯವಾಗಿದ್ದರೆ ಹೋರಾಟದ ಮೂಲಕ ನ್ಯಾಯಪಡೆದುಕೊಳ್ಳಬೇಕಾಗುತ್ತದೆ ಎಂಬ ಸಾಮಾನ್ಯ ತಿಳುವಳಿಕೆ ಇರಬೇಕಾಗುತ್ತದೆ ಎಂದು ಹೇಳಿದರು.

ರೈತ ಸಂಘಟನೆ ಯಾರಹಣ, ಯಾರ ಪ್ರಾಯೋಜಕತ್ವದಲ್ಲಿ ನಡೆಯುವ ಸಂಘಟನೆಯಲ್ಲ, ನಿಮ್ಮ ಮರ್ಜಿಗೆ ಕುಣಿಯಲು ಸಂಘದ ಕಾರ್ಯಕರ್ತರು ನಿಮ್ಮ ಮನೆಯ ಆಳುಗಳಲ್ಲ, ಸಮಸ್ಯೆಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳಿಗಾಗಿ ಜಿಲ್ಲಾಧಿಕಾರಿ ಕಚೇರಿ,ಅರಣ್ಯ ಇಲಾಖೆ,ಮಾಲಿನ್ಯ ನಿಯಂತ್ರಣ ಮಂಡಳಿ,ಭೂ ವಿಜ್ಞಾನ ಇಲಾಖೆಗಳಿಗೆ ರೈತ ಸಂಘ ಪತ್ರ ಬರೆದು ಉತ್ತರಕ್ಕಾಗಿ ಕಾಯುತ್ತಿದೆ. ಗಣಿಗಾರಿಕೆ ನಡೆಯುತ್ತಿರುವ ಸ್ಥಳದಿಂದಲೇ ಹೋರಾಟಕ್ಕೆ ಚಾಲನೆ ನೀಡುವ ಬಗ್ಗೆ ಚಿಂತನೆ ನಡೆಸಲಾಗಿತ್ತು ಅಷ್ಟರೊಳಗೆ ಮಹಿಳೆ ರೈತ ಸಂಘದ ಮೇಲೆ ಆರೋಪಮಾಡಿರುವುದು ಸರಿಯಲ್ಲವೆಂದು ತಿಳಿಸಿದರು.

ಸಮಸ್ಯೆಗೆ ಸಂಬಂಧಿಸಿದಂತೆ ಗ್ರಾಮಪಂಚಾಯಿತಿ ಸದಸ್ಯರು, ಗ್ರಾಮಸ್ಥರನ್ನು ಸಂಪರ್ಕಿಸುವಂತೆ ಮಹಿಳೆಯ ಪತಿಗೆ ತಿಳಿಸಿದ್ದು, ಸರಿಯಾಗಿ ಸ್ಪಂದಿಸಲಿಲ್ಲ,ದಲಿತ ಸಂಘಟನೆಯೊಂದಿಗೆ ಮರ್ಲೆ ಕೊಲ್ಲಾಪುರದಮ್ಮನ ದೇವಾಲಯದಿಂದ ಪಾದಯಾತ್ರೆನಡೆಸಿ ಸಮಸ್ಯೆಯ ಗಂಭೀರತೆಯನ್ನು ಸಂಬಂಧಿಸಿದ ಇಲಾಖೆ ಗಮನ ಸೆಳೆಯಲು ಕಾರ್ಯಕ್ರಮ ರೂಪಿಸಲು ಚರ್ಚಿಸುತ್ತಿರುವಾಗಲೇ ಪಲಾಯನ ಮಾಡಿರುವುದು ಅನುಮಾನಕ್ಕೆ ಎಡೆಮಾಡಿದೆ ಎಂದು ಆರೋಪಿಸಿದರು.

ರೈತ ಸಂಘದ ಜಿಲ್ಲಾ ಪ್ರಧಾನಕಾರ್ಯದರ್ಶಿ ಎಂ.ಬಿ. ಚಂದ್ರಶೇಖರ್, ಜಿಲ್ಲಾಗೌರವಾಧ್ಯಕ್ಷ ಎಂ.ಸಿ.ಬಸವರಾಜ್, ಜಿಲ್ಲಾ ಉಪಾಧ್ಯಕ್ಷ ಡಿ.ಕುಮಾರಸ್ವಾಮಿ, ಮುಖಂಡರಾದ ಪ್ರದೀಪ,. ಎಸ್.ಬಿ.ನಿರಂಜನ ಮೂರ್ತಿ ಇದ್ದರು.

The allegations against the farmers’ association are baseless.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...