Home Crime News ಅತ್ತೆ ಕೊಲೆ ಪ್ರಕರಣದ ಆರೋಪಿ ಸೊಸೆ – ಪ್ರಿಯಕರನ ಬಂಧನ
Crime NewsajjampuraHomeLatest Newsnamma chikmagalur

ಅತ್ತೆ ಕೊಲೆ ಪ್ರಕರಣದ ಆರೋಪಿ ಸೊಸೆ – ಪ್ರಿಯಕರನ ಬಂಧನ

Share
Share

ಅಜ್ಜಂಪುರ: ಅತ್ತೆಗೆ ನಿದ್ರೆ ಮಾತ್ರೆ ಹಾಕಿ ಕೊಲೆ ಮಾಡಿದ್ದ ಆರೋಪಿ ಸೊಸೆ ಹಾಗೂ ಆಕೆಯ ಪ್ರಿಯಕರನನ್ನು ಅಜ್ಜಂಪುರ ಪಟ್ಟಣ ಪೊಲೀಸರು ಮಂಗಳವಾರ ಬಂಧಿಸಿದ್ದು, ಆರೋಪಿಗಳಿಂದ ₹36 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಟೆಂಪೊ ಟ್ರಾವಲರ್‌, ಬೈಕ್‌ ವಶಕ್ಕೆ ಪಡೆದಿದ್ದಾರೆ.

ತಾಲ್ಲೂಕಿನ ತಡಗ ಗ್ರಾಮದ ದೇವಿರಮ್ಮ ಕೊಲೆಯಾದವರು. ಅವರ ಸೊಸೆ ಅಶ್ವಿನಿ (34), ಆಕೆಯ ಪ್ರಿಯಕರ ಶಿವನಿ ಗ್ರಾಮದ ಆಂಜನೇಯ ಎಸ್‌.ಎಸ್‌. (30) ಆರೋಪಿಗಳು. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸೊಸೆ ಅಶ್ವಿನಿ ಮತ್ತು ಆಂಜನೇಯ ನಡುವೆ ಅಕ್ರಮ ಸಂಬಂಧವಿತ್ತು. ಇದನ್ನೇ ದುರುಪಯೋಗಪಡಿಸಿಕೊಂಡ ಆಂಜನೇಯ, ಅಶ್ವಿನಿಯಿಂದ ದೇವಿರಮ್ಮ ಅವರಿಗೆ ಸೇರಿದ್ದ ಚಿನ್ನಾಭರಣವನ್ನು ಪಡೆದುಕೊಂಡಿದ್ದ. ಅಶ್ವಿನಿ, ನಕಲಿ ಕೀ ಬಳಸಿ, ಚಿನ್ನಾಭರಣ ತೆಗೆದುಕೊಂಡಿದ್ದರು. ಇದು ಅತ್ತೆ ದೇವಿರಮ್ಮಗೆ ಗೊತ್ತಾಗುತ್ತದೆ ಎಂದು ಭಾವಿಸಿ ಕೊಲೆಗೆ ಸಂಚು ರೂಪಿಸಿ ಆಗಸ್ಟ್ 10ರಂದು ದೇವಿರಮ್ಮ ಅವರಿಗೆ ಊಟದಲ್ಲಿ 20 ನಿದ್ರೆ ಮಾತ್ರೆ ಹಾಕಿದ್ದರು.

ಊಟದ ಬಳಿಕ ದೇವಿರಮ್ಮ ಅವರು ಸುಸ್ತಾದರೂ ಆಸ್ಪತ್ರೆಗೆ ದಾಖಲಿಸಲು ತಡ ಮಾಡಿದ್ದರಿಂದ ಸಕಾಲದಲ್ಲಿ ಚಿಕಿತ್ಸೆ ದೊರೆಯದೆ ಮೃತಪಟ್ಟಿದ್ದರು. ವಿಷಯ ಮರೆಮಾಚಿ ಆ.11ರಂದು ಸಂಬಂಧಿಕರು ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ಅಂತ್ಯಸಂಸ್ಕಾರವನ್ನೂ ಮಾಡಿದ್ದರು. ಈ ಬಗ್ಗೆ ಅನುಮಾನಗೊಂಡ ಮೃತರ ಪುತ್ರಿ ವೀಣಾ ಅವರು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ಭೇದಿಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿ, ₹20.34 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಚಿನ್ನಾಭರಣ ಅಡವಿಟ್ಟು ಖರೀದಿಸಿದ ₹16 ಲಕ್ಷ ಮೌಲ್ಯದ ಟೆಂಪೊ ಟ್ರಾವೆಲರ್ ಮತ್ತು ಬಜಾಜ್ ಪಲ್ಸರ್ ಬೈಕ್ ಅನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸ್ ಇನ್‌ಸ್ಪೆಕ್ಟರ್ ವೀರೇಂದ್ರ, ಪಿಎಸ್ಐ ಗಜೇಂದ್ರ, ಚಂದ್ರಮ್ಮ ಹಾಗೂ ಸಿಬ್ಬಂದಿ ಪ್ರಕರಣ ಭೇದಿಸಿದ್ದಾರೆ. ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ಪೊಲೀಸರಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಕ್ರಮ ಅಮಟೆ ಅವರು ಬಹುಮಾನ ಘೋಷಿಸಿದ್ದಾರೆ.

Daughter-in-law and boyfriend arrested in mother-in-law murder case

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...