Home Crime News ಅತ್ತೆ ಕೊಲೆ ಪ್ರಕರಣದ ಆರೋಪಿ ಸೊಸೆ – ಪ್ರಿಯಕರನ ಬಂಧನ
Crime NewsajjampuraHomeLatest Newsnamma chikmagalur

ಅತ್ತೆ ಕೊಲೆ ಪ್ರಕರಣದ ಆರೋಪಿ ಸೊಸೆ – ಪ್ರಿಯಕರನ ಬಂಧನ

Share
Share

ಅಜ್ಜಂಪುರ: ಅತ್ತೆಗೆ ನಿದ್ರೆ ಮಾತ್ರೆ ಹಾಕಿ ಕೊಲೆ ಮಾಡಿದ್ದ ಆರೋಪಿ ಸೊಸೆ ಹಾಗೂ ಆಕೆಯ ಪ್ರಿಯಕರನನ್ನು ಅಜ್ಜಂಪುರ ಪಟ್ಟಣ ಪೊಲೀಸರು ಮಂಗಳವಾರ ಬಂಧಿಸಿದ್ದು, ಆರೋಪಿಗಳಿಂದ ₹36 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಟೆಂಪೊ ಟ್ರಾವಲರ್‌, ಬೈಕ್‌ ವಶಕ್ಕೆ ಪಡೆದಿದ್ದಾರೆ.

ತಾಲ್ಲೂಕಿನ ತಡಗ ಗ್ರಾಮದ ದೇವಿರಮ್ಮ ಕೊಲೆಯಾದವರು. ಅವರ ಸೊಸೆ ಅಶ್ವಿನಿ (34), ಆಕೆಯ ಪ್ರಿಯಕರ ಶಿವನಿ ಗ್ರಾಮದ ಆಂಜನೇಯ ಎಸ್‌.ಎಸ್‌. (30) ಆರೋಪಿಗಳು. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸೊಸೆ ಅಶ್ವಿನಿ ಮತ್ತು ಆಂಜನೇಯ ನಡುವೆ ಅಕ್ರಮ ಸಂಬಂಧವಿತ್ತು. ಇದನ್ನೇ ದುರುಪಯೋಗಪಡಿಸಿಕೊಂಡ ಆಂಜನೇಯ, ಅಶ್ವಿನಿಯಿಂದ ದೇವಿರಮ್ಮ ಅವರಿಗೆ ಸೇರಿದ್ದ ಚಿನ್ನಾಭರಣವನ್ನು ಪಡೆದುಕೊಂಡಿದ್ದ. ಅಶ್ವಿನಿ, ನಕಲಿ ಕೀ ಬಳಸಿ, ಚಿನ್ನಾಭರಣ ತೆಗೆದುಕೊಂಡಿದ್ದರು. ಇದು ಅತ್ತೆ ದೇವಿರಮ್ಮಗೆ ಗೊತ್ತಾಗುತ್ತದೆ ಎಂದು ಭಾವಿಸಿ ಕೊಲೆಗೆ ಸಂಚು ರೂಪಿಸಿ ಆಗಸ್ಟ್ 10ರಂದು ದೇವಿರಮ್ಮ ಅವರಿಗೆ ಊಟದಲ್ಲಿ 20 ನಿದ್ರೆ ಮಾತ್ರೆ ಹಾಕಿದ್ದರು.

ಊಟದ ಬಳಿಕ ದೇವಿರಮ್ಮ ಅವರು ಸುಸ್ತಾದರೂ ಆಸ್ಪತ್ರೆಗೆ ದಾಖಲಿಸಲು ತಡ ಮಾಡಿದ್ದರಿಂದ ಸಕಾಲದಲ್ಲಿ ಚಿಕಿತ್ಸೆ ದೊರೆಯದೆ ಮೃತಪಟ್ಟಿದ್ದರು. ವಿಷಯ ಮರೆಮಾಚಿ ಆ.11ರಂದು ಸಂಬಂಧಿಕರು ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ಅಂತ್ಯಸಂಸ್ಕಾರವನ್ನೂ ಮಾಡಿದ್ದರು. ಈ ಬಗ್ಗೆ ಅನುಮಾನಗೊಂಡ ಮೃತರ ಪುತ್ರಿ ವೀಣಾ ಅವರು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ಭೇದಿಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿ, ₹20.34 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಚಿನ್ನಾಭರಣ ಅಡವಿಟ್ಟು ಖರೀದಿಸಿದ ₹16 ಲಕ್ಷ ಮೌಲ್ಯದ ಟೆಂಪೊ ಟ್ರಾವೆಲರ್ ಮತ್ತು ಬಜಾಜ್ ಪಲ್ಸರ್ ಬೈಕ್ ಅನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸ್ ಇನ್‌ಸ್ಪೆಕ್ಟರ್ ವೀರೇಂದ್ರ, ಪಿಎಸ್ಐ ಗಜೇಂದ್ರ, ಚಂದ್ರಮ್ಮ ಹಾಗೂ ಸಿಬ್ಬಂದಿ ಪ್ರಕರಣ ಭೇದಿಸಿದ್ದಾರೆ. ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ಪೊಲೀಸರಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಕ್ರಮ ಅಮಟೆ ಅವರು ಬಹುಮಾನ ಘೋಷಿಸಿದ್ದಾರೆ.

Daughter-in-law and boyfriend arrested in mother-in-law murder case

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...