Home namma chikmagalur ಪ್ರವಾಸಿಗರು ಗಿರಿಭಾಗದ ಪ್ರವಾಸ ಮುಂದೂಡಲು ಜಿಲ್ಲಾಡಳಿತ ಮನವಿ
namma chikmagalurchikamagalurHomeLatest News

ಪ್ರವಾಸಿಗರು ಗಿರಿಭಾಗದ ಪ್ರವಾಸ ಮುಂದೂಡಲು ಜಿಲ್ಲಾಡಳಿತ ಮನವಿ

Share
Share

ಚಿಕ್ಕಮಗಳೂರು: ಗಣೇಶ ಚತುರ್ಥಿಯ ಸಂದರ್ಭ ಗಿರಿ ಭಾಗದಲ್ಲಿ ಚಿಕ್ಕಮಗಳೂರು ತಾಲ್ಲೂಕಿನ ಗ್ರಾಮಸ್ಥರು ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ಗಿರಿ ಭಾಗದ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಈ ಪ್ರದೇಶಗಳಿಗೆ ಭೇಟಿ ನೀಡಲು ಉದ್ದೇಶಿಸಿರುವ ಪ್ರವಾಸಿಗರು, ತಮ್ಮ ಪ್ರವಾಸವನ್ನು ಮುಂದೂಡುವಂತೆ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಜಿಲ್ಲಾಡಳಿತ ಮನವಿ ಮಾಡಿದೆ.

ಆಗಸ್ಟ್ ೨೭ರ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಚಿಕ್ಕಮಗಳೂರು ತಾಲ್ಲೂಕಿನ ಕಸಬಾ ಹೋಬಳಿ, ವಸ್ತಾರೆ, ಆವತಿ, ಅಂಬಳೆ ಮತ್ತು ಜಾಗರ ಹೋಬಳಿಯ ೪೦ಕ್ಕೂ ಹೆಚ್ಚು ಗ್ರಾಮಗಳ ಗ್ರಾಮಸ್ಥರು ಶ್ರೀ ಮೇಲು ಗದ್ದುಗೆ ಮುಳ್ಳಯ್ಯನಗಿರಿ, ಶ್ರೀ ಸೀತಾಳಯ್ಯನಗಿರಿ ಮತ್ತು ಶ್ರೀ ಗುರು ನಾರುಕಂತೆ ಮಠಗಳಿಗೆ ತೆರಳಿ ಚೌತಿ ಕಾಯಿ ಒಡೆಸಿ ಹಣ್ಣು ಕಾಯಿ ಮಾಡಿಸಿಕೊಂಡು ಬರುವುದು ನೂರಾರು ವರ್ಷಗಳ ಪಾರಂಪರಿಕ ಆಚರಣೆ.

ಮೇಲ್ಕಾಣಿಸಿದ ದಿನದಲ್ಲಿ ಸಾರ್ವತ್ರಿಕ ರಜೆ ಇರುವ ಕಾರಣ, ಚಿಕ್ಕಮಗಳೂರು ತಾಲ್ಲೂಕಿನ ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಐ.ಡಿ.ಪೀಠ, ಮಾಣಿಕ್ಯಧಾರ ಇತ್ಯಾದಿ ಪ್ರವಾಸಿ ತಾಣಗಳಿಗೆ ಹೊರ ರಾಜ್ಯ, ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುವ ನಿರೀಕ್ಷೆ ಇದೆ.

ಈ ಮಾರ್ಗಗಳಲ್ಲಿ ಕಿರಿದಾದ ರಸ್ತೆಗಳಿದ್ದು, ಜನ ಹಾಗೂ ವಾಹನಗಳ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಆದ್ದರಿಂದ ಈ ಮಾರ್ಗದಲ್ಲಿ ಹೋಂಸ್ಟೇ ಮತ್ತು ರೆಸಾರ್ಟ್‌ಗಳಲ್ಲಿ ಮುಂಗಡವಾಗಿ ಕೊಠಡಿಗಳನ್ನು ಕಾಯ್ದಿರಿಸಿರುವ ಪ್ರವಾಸಿಗರನ್ನು ಹೊರತುಪಡಿಸಿ, ಉಳಿದವರು ತಮ್ಮ ಪ್ರವಾಸವನ್ನು ಮುಂದೂಡುವಂತೆ ಅವರು ಗಮನ ಸೆಳೆದಿದ್ದಾರೆ.

District administration appeals to tourists to postpone hill trips

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...