ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನ ಮೆಣಸೂರು ರಾವೂರು ಕ್ಯಾಂಪಿನ ಜನ, ಸ್ಮಶಾನವಿಲ್ಲದೇ ಮೃತದೇಹವನ್ನು ತೆಪ್ಪದಲ್ಲಿ ಕೊಂಡೊಯ್ದು ಭದ್ರಾ ಹಿನ್ನೀರಿನ ನಡುಗಡ್ಡೆಯಲ್ಲಿ ಶವಸಂಸ್ಕಾರ ನಡೆಸಿದ್ದಾರೆ.
ರಾವೂರು ಕ್ಯಾಂಪಿನಲ್ಲಿ ಶಿಳ್ಳೆಕ್ಯಾತ ಜನಾಂಗಕ್ಕೆ ಸೇರಿದ 150ಕ್ಕೂ ಹೆಚ್ಚು ಕುಟುಂಬಗಳಿವೆ. ಇಲ್ಲಿ 600ಕ್ಕೂ ಹೆಚ್ಚು ಜನರಿದ್ದಾರೆ. ರಾವೂರಿನ ವ್ಯಕ್ತಿಯೊಬ್ಬರು ಭಾನುವಾರ ಮೃತಪಟ್ಟಿದ್ದರು.
ಅವರ ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲದೆ ಭದ್ರಾ ಹಿನ್ನೀರಿನ ಮಧ್ಯೆ ಅಂತ್ಯ ಸಂಸ್ಕಾರ ಮಾಡಲಾಗಿದೆ. ಸುಮಾರು 1 ಕಿ.ಮೀ. ನದಿ ಮಧ್ಯೆ ತೆಪ್ಪದಲ್ಲಿ ಕೊಂಡೊಯ್ದು ನದಿ ಮಧ್ಯೆಯ ನಡುಗಡ್ಡೆಯಲ್ಲಿ ಶವಸಂಸ್ಕಾರ ಮಾಡಲಾಗಿದೆ.
ಮೃತದೇಹ ಹೂಳಲು ಗುಂಡಿ ತೆಗೆದಾಗಲೂ ಇಲ್ಲಿ ನೀರು ಬರುತ್ತದೆ. ಆಗ ಗುಂಡಿಯಲ್ಲಿರೋ ನೀರನ್ನ ತೆಗೆದು ಕೆಳಗಡೆ ಸೊಪ್ಪು ಹಾಕಿ ಅಂತ್ಯ ಸಂಸ್ಕಾರ ಮಾಡುತ್ತಾರೆ. ಕೆಲವೊಮ್ಮೆ ಹಿಂದೆ ಮೃತದೇಹ ಅಂತ್ಯಸಂಸ್ಕಾರ ಮಾಡಿದ ಜಾಗದಲ್ಲೇ ಗುಂಡಿ ತೆಗೆದಿರುವಂತಹಾ ಉದಾಹರಣೆಯೂ ಇದೆ. ಮಳೆಗಾಲದಲ್ಲಿ ಭದ್ರಾ ಹಿನ್ನೀರು ಮನೆ ಹಿಂದೆಯೇ ಬರುತ್ತೆ. ಬೇಸಿಗೆಯಲ್ಲಿ ನೀರು ಇರೋದಿಲ್ಲ ಆಗ ಭದ್ರಾ ಹಿನ್ನೀರಿನ ಮಧ್ಯೆಯೇ ಅಂತ್ಯ ಸಂಸ್ಕಾರ ಮಾಡುತ್ತಾರೆ. ಮಳೆಗಾಲದಲ್ಲಿ ಭದ್ರಾ ಹಿನ್ನೀರು ಮನೆಯವರೆಗೂ ಬರುತ್ತದೆ.
ಆಗ ತೆಪ್ಪ ಬಳಸಿ ನಡುಗಡ್ಡೆಗೆ ತೆರಳಿ ಅಂತ್ಯಸಂಸ್ಕಾರ ಮಾಡುತ್ತಾರೆ. ರಾವೂರು ಕ್ಯಾಂಪಿನ ಈ ಸ್ಥಿತಿಗೆ ಎರಡು ದಶಕಗಳ ಇತಿಹಾಸವಿದೆ.
ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...
ByN Raju Chief EditorAugust 10, 2026ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...
ByN Raju Chief EditorAugust 10, 2026ಕಡೂರು: ಪಂಪ್ಸೆಟ್ ಮೋಟಾರ್ ಕೇಬಲ್ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...
ByN Raju Chief EditorAugust 17, 2026ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...
ByN Raju Chief EditorAugust 16, 2026ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು...
ByN Raju Chief EditorAugust 16, 2026ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...
ByN Raju Chief EditorAugust 16, 2026Excepteur sint occaecat cupidatat non proident
Leave a comment