Home namma chikmagalur ಭಾರಿ ಮಳೆ ಕರಾವಳಿ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್
namma chikmagalurchikamagalurHomeLatest News

ಭಾರಿ ಮಳೆ ಕರಾವಳಿ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್

Share
Share

ಬೆಂಗಳೂರು: ದೇಶದ ಹಲವು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದ ಭೂಕುಸಿತ, ಪ್ರವಾಹ ಸೃಷ್ಟಿಯಾಗಿದೆ. ಹಲವು ಸಾವು ಸಂಭವಿಸಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಇತ್ತ ಕರ್ನಾಟಕದಲ್ಲೂ ಭಾರಿ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳು, ಮಲೆನಾಡು ಹಾಗೂ ಕೊಡಗು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ.

ಮಳೆ ಬೆನ್ನಲ್ಲೇ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಿದ್ದರೆ,ಬೆಂಗಲೂರು ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾರಿ ಮಳೆ ಪರಿಣಾಮ ರಾಜ್ಯದ 5 ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹೀಗಾಗಿ ರಾಜ್ಯದ 5 ಜಿಲ್ಲೆಯ ಶಾಲಾ ಕಾಲೇಜಿಗೆ ಇಂದು (ಆಗಸ್ಟ್ 28) ರಜೆ ಘೋಷಿಸಲಾಗಿದೆ.

ಈ ಪೈಕಿ ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲ ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಇನ್ನುಳಿದಂತೆ ಉಡುಪಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಯಾದಗಿರಿ ಜಿಲ್ಲೆಯ ಶಾಲಾ ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಯಾದಿಗಿರಿ ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಆದೇಶ ಮಾಡಿದ್ದಾರೆ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು ಆಗದಂತ ಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ವಿದ್ಯಾರ್ಥಿಗಳ‌ ಆರೋಗ್ಯದ ಹಿದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ.

ಭಾರಿ ಮಳೆಯಾಗುತ್ತಿರುವ ಕಾರಣ ಬೀದರ್ ಜಿಲ್ಲೆಯ ಔರಾದ್ ಶಾಲಾ ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ. ತಹಸೀಲ್ದಾರ ಮಹೇಶ ಪಾಟೀಲ್ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಭಾರಿ ಮಳೆಗೆ ಮುನ್ನಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.

Orange alert for coastal districts due to heavy rain

 

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...