Home namma chikmagalur ಹಂಗರವಳ್ಳಿಯಲ್ಲಿ ಆವತಿ ಹೋಬಳಿ ಮಟ್ಟದ ರೈತ ಸಮಾವೇಶ
namma chikmagalurchikamagalurHomeLatest News

ಹಂಗರವಳ್ಳಿಯಲ್ಲಿ ಆವತಿ ಹೋಬಳಿ ಮಟ್ಟದ ರೈತ ಸಮಾವೇಶ

Share
Share

ಚಿಕ್ಕಮಗಳೂರು: ಜಿಲ್ಲೆಯ ಕಂದಾಯ, ಅರಣ್ಯ ಭೂಮಿ ಸಮಸ್ಯೆ, ಕಾಡಾನೆ, ಶೋಷಿತ, ದುರ್ಬಲರ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಜಿಲ್ಲಾಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪಕ್ಷಾತೀತವಾದ ಸಭೆ ಕರೆಯುವ ಪ್ರಯತ್ನ ಮಾಡುವುದಾಗಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.

ತಾಲೂಕಿನ ಹಂಗರವಳ್ಳಿಯಲ್ಲಿ ಗುರುವಾರ ಏರ್ಪಡಿಸಿದ್ದ ಆವತಿ ಹೋಬಳಿ ಮಟ್ಟದ ರೈತ ಸಮಾವೇಶದಲ್ಲಿ ಅವರು ಮಾತನಾಡಿದರು. ಕಂದಾಯ ಮತ್ತು ಅರಣ್ಯ ಭೂಮಿ ಸಮಸ್ಯೆಗಳು ಕೆಲವು ಕೇಂದ್ರ ಮತ್ತು ರಾಜ್ಯ ಸರಕಾರದ ವ್ಯಾಪ್ತಿಗೆ ಬರುತ್ತದೆ. ಈ ನಿಟ್ಟಿನಲ್ಲಿ ಅಕಾರಿಗಳು, ಜನಪ್ರತಿನಿಗಳು ಒಟ್ಟಾಗಿ ಕುಳಿತು ಮುಂದಿನ ತಲೆಮಾರಿಗೆ ಅನುಕೂಲ ಆಗುವಂತೆ ಯೋಜನೆ ರೂಪಿಸಿ ಅನುಷ್ಠಾನ ಮಾಡಬೇಕು. ಇಲ್ಲದಿದ್ದರೆ ಹಿಂದಿನಿಂದ ಇರುವ ಮೂಲ ಸಮಸ್ಯೆಗಳಿಗೆ ಮುಕ್ತಿ ದೊರೆಯುವುದಿಲ್ಲ ಎಂದು ಹೇಳಿದರು.

ಸರ್ಫೆಸಿ ಕಾಯಿದೆಯಿಂದ ಕಾಫಿ ಹೊರಗಿಡಬೇಕು ಎಂಬ ಪ್ರಯತ್ನ ನಡೆದಿದೆ. ಈಗಾಗಲೇ ಒಂದು ಪ್ಯಾಕೇಜ್ ಕೊಡಿಸುವ ಮೂಲಕ ಅನೇಕ ಬೆಳೆಗಾರರಿಗೆ ಅನುಕೂಲ ಆಗಿದೆ. ಒಟ್ಟಾರೆ ಜಿಲ್ಲೆಯ ಸಮಸ್ಯೆಗಳನ್ನು ಪಕ್ಷಾತೀತವಾಗಿ ಅಕಾರಿ, ಜನಪ್ರತಿನಿಗಳು ಚರ್ಚಿಸಿ ಪರಿಹಾರ ಕಂಡುಕೊಳ್ಳೋಣ ಎಂದರು.

ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವರುಂದ ಮಾತನಾಡಿ, ಕಾಫಿ ಧಾರಣೆ ಮತ್ತಿತರೆ ವಿದ್ಯಾಮಾನಗಳ ಬಗ್ಗೆ ಬೆಳೆಗಾರರು ಮಂಡಳಿ ಆಯೋಜಿಸುವ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅರಿವು ಮೂಡಿಸಿಕೊಳ್ಳಬೇಕು. ಸರ್ಫೆಸಿ ಕಾಯಿದೆಯಿಂದ ಬೆಳೆಗಾರರಿಗೆ ಆಗುತ್ತಿರುವ ತೊಂದರೆ ಬಗ್ಗೆ ಕೇಂದ್ರ ಅರ್ಥ, ವಾಣಿಜ್ಯ ಸಚಿವರ ಬಳಿ ಮಾತಾಡಿದ್ದೇನೆ. ಸಾಲ ವಸೂಲಾತಿಗೆ ಡಿಆರ್‌ಟಿ ಇರಲಿ ಆದರೆ ಸರ್ಫೆಸಿ ಬೇಡ. ಇದರಿಂದ ಲ್ಯಾಂಡ್ ಮಾಫಿಯಾ ಶುರುವಾಗುತ್ತದೆ ಎಂದು ಸಚಿವರಲ್ಲಿ ಮನವರಿಕೆ ಮಾಡಿದ್ದೇವೆ. ಕಾಡಾನೆ ಹಾವಳಿ ಸಮಸ್ಯೆಗೆ ವೈಜ್ಞಾನಿಕವಾದ ಸಂಶೋಧನೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ನಾಗರೀಕ ರೈತ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಎಸ್.ವಿಜಯ್‌ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿನಮೂನೆ ೫೭ ರಲ್ಲಿ ಅರ್ಜಿ ಸಲ್ಲಿಸಿ ಹಕ್ಕುಪತ್ರಕ್ಕಾಗಿ ನೂರಾರು ಮಂದಿ ರೈತರು ಕಾಯುತ್ತಿದ್ದಾರೆ. ಆದರೆ, ನಮೂನೆ ೫೭ ಪ್ಲಾಂಟೇಶನ್ ಭೂಮಿಗೆ ಅನ್ವಯವಾಗುವುದಿಲ್ಲ ಎಂದು ಸರಕಾರ ಹೇಳಿದೆ. ಇದರಿಂದ ನೂರಾರು ಅರ್ಜಿಗಳು ಈಗಾಗಲೇ ವಜಾಗೊಂಡಿವೆ.

ಈ ಸಮಸ್ಯೆಯ ಬಗ್ಗೆ ಸದನದಲ್ಲಿ ದನಿ ಎತ್ತಿ ಸಮಸ್ಯೆಗೆ ಪರಿಹಾರ ಹುಡುಕಬೇಕು ಎಂದು ಮನವಿ ಮಾಡಿದರು. ಆವತಿ ಹೋಬಳಿ ಒಂದರಲ್ಲೇ ಮೂರುವರೆ ಸಾವಿರ ಹೆಕ್ಟೇರ್ ಡೀಮ್ಡ್ ಭೂಮಿ ಇದೆ. ಇಲ್ಲಿಂದ ಹೋದ ಪ್ರತಿ ಬೆಳೆಗಾರನೂ ಹೋರಾಟದ ಕಿಚ್ಚು ಬೆಳೆಸಿಕೊಂಡಲ್ಲಿ ಮಾತ್ರ ನಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದರು.

ಬೈಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಸಂಘದ ಅಧ್ಯಕ್ಷ ಅರುಣ್‌ಕುಮಾರ್, ಜಿಲ್ಲಾ ಬೆಳೆಗಾರರ ಸಂಘದ ಅಧ್ಯಕ್ಷ ರತೀಶ್‌ಕುಮಾರ್, ದಯಾಕರ, ಶ್ರೀಧರ್, ಮಹೇಂದ್ರ, ದೀಪಕ್ ದೊಡ್ಡಯ್ಯ, ಕೆರಮಕ್ಕಿ ಮಹೇಶ್, ತುಳಸೇಗೌಡ, ರಾಜು, ದಿಲೀಪ್, ಮೈಲಿಮನೆ ಪೂರ್ಣೇಶ್‌ಮತ್ತಿತರರಿದ್ದರು.

Avati hobli level farmers’ conference in Hangaravalli

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...