Home namma chikmagalur ಸೆ.1 ರಿಂದ ಎರಡು ಸ್ಲಾಟ್‌ಗಳಲ್ಲಿ ಪ್ರವಾಸಿ ತಾಣಗಳಿಗೆ ವಾಹನ ವ್ಯವಸ್ಥೆ
namma chikmagalurchikamagalurLatest News

ಸೆ.1 ರಿಂದ ಎರಡು ಸ್ಲಾಟ್‌ಗಳಲ್ಲಿ ಪ್ರವಾಸಿ ತಾಣಗಳಿಗೆ ವಾಹನ ವ್ಯವಸ್ಥೆ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಮುಳ್ಳಯನಗಿರಿ, ಸೀತಾಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ, ಮಾಣಿಕ್ಯಧಾರ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರ ವಾಹನ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಎರಡು ಸ್ಲಾಟ್‌ಗಳಲ್ಲಿ ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದ್ದು. ಸೆಪ್ಟಂಬರ್ ೧ ರಿಂದ ಜಾರಿಗೆ ಬರಲಿದೆ.

ವಾಹನಗಳು ಬೆಳಿಗ್ಗೆ ೬ ರಿಂದ ಮಧ್ಯಾಹ್ನ ೧೨ ಗಂಟೆಯವರೆಗೆ ಮತ್ತು ಮಧ್ಯಾಹ್ನ ೧ ರಿಂದ ಸಂಜೆ ೬ ಗಂಟೆಯವರೆಗೆ- ಹೀಗೆ ಎರಡು ಸ್ಲಾಟ್‌ಗಳಲ್ಲಿ ದಿನವಹಿ ಒಟ್ಟು ೬೦೦ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಇವುಗಳಲ್ಲಿ ದ್ವಿಚಕ್ರ ವಾಹನ ಹಾಗೂ ಆಟೋ ರಿಕ್ಷಾಗಳ ಸಂಖ್ಯೆಯನ್ನು ೧೦೦ಕ್ಕೆ ಮತ್ತು ಸ್ಥಳೀಯ ಹಳದಿ ಬಣ್ಣದ ಬೋರ್ಡ್ ಹೊಂದಿರುವ ಟ್ಯಾಕ್ಸಿಗಳ ಸಂಖ್ಯೆಯನ್ನು ೧೦೦ಕ್ಕೆ ಮಿತಿಗೊಳಿಸಲಾಗಿದೆ.

ಟೆಂಪೊ ಟ್ರಾವೆಲ್ಲರ್‌ಗಳ ಸಂಖ್ಯೆಯನ್ನು ೫೦ಕ್ಕೆ ಹಾಗೂ ೧೦ ಆಸನಗಳ ಟೂಫಾನ್ ವಾಹನಗಳ ಸಂಖ್ಯೆಯನ್ನು ೫೦ಕ್ಕೆ ಮಿತಿಗೊಳಿಸಲಾಗಿದೆ, ಪ್ರವಾಸಿಗರ ಕಾರು, ಜೀಪು ಹಾಗೂ ಎಸ್.ಯು.ವಿ.ಗಳ ಸಂಖ್ಯೆಯನ್ನು ೩೦೦ಕ್ಕೆ ಮಿತಿಗೊಳಿಸಲಾಗಿದೆ.

ಖಾಸಗಿ ಮತ್ತು ಮಿನಿ ಬಸ್ ಅನ್ನು ನಿರ್ಬಂಧಿಸಲಾಗಿದೆ ಮೇಲಿನ ಒಟ್ಟು ವಾಹನಗಳ ಸಂಖ್ಯೆಯು ಪ್ರವಾಸಿ ತಾಣಗಳಿಗೆ ಹೋಂಸ್ಟೇ, ರೆಸಾರ್ಟ್‌ಗಳಿಗೆ ಆಗಮಿಸುವ ಪ್ರವಾಸಿಗರ ವಾಹನ ಸಂಖ್ಯೆಯನ್ನು ಒಳಗೊಂಡಿರುತ್ತದೆ. ಪ್ರವಾಸಿಗರು ಈ ಪ್ರವಾಸಿ ತಾಣಗಳಿಗೆ ತೆರಳಲು ಮುಂಚಿತವಾಗಿ ಆನ್‌ಲೈನ್ ಮೂಲಕ ಪ್ರವೇಶ ಶುಲ್ಕವನ್ನು ಪಾವತಿಸುವುದು ಕಡ್ಡಾಯವಾಗಿದೆ.

ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಅಧಿಕೃತ ವೆಬ್‌ಸೈಟ್ (https://chikkamagaluru.nic.in/en/tourism/)  ಬಳಸಿ ಸಾರ್ವಜನಿಕರು ಹಾಗೂ ಪ್ರವಾಸಿಗರು ಪ್ರವೇಶ ಶುಲ್ಕವನ್ನು ಪಾವತಿಸಿ ಪ್ರವಾಸಿ ತಾಣಗಳಿಗೆ ತೆರಳುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

Vehicle arrangements to tourist destinations in two slots from September 1

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...