Home namma chikmagalur ಜಿಲ್ಲೆಯಲ್ಲಿ ಮಳೆಯ ಆರ್ಭಟ – ಕಾಫಿಬೆಳೆ ನಾಶ – ರಸ್ತೆ ಹುಡುಕಾಡುವ ಕಾಟ
namma chikmagalurchikamagalurHomeLatest News

ಜಿಲ್ಲೆಯಲ್ಲಿ ಮಳೆಯ ಆರ್ಭಟ – ಕಾಫಿಬೆಳೆ ನಾಶ – ರಸ್ತೆ ಹುಡುಕಾಡುವ ಕಾಟ

Share
Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡ ಬಿಡದೆ ಮಳೆ ಸುರಿಯುತ್ತಿದೆ ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ.

ಮಳೆಯ ಆರ್ಭಟದಿಂದ ಕಾಫಿ ಕೊಳೆಯಲು ಆರಂಭವಾಗಿದೆ ಎಂದು ಕಾಫಿ ಬೆಳೆಗಾರರ ನೋವು ,ಈಗಾಗಲೇ ಅರಬೀಕಾ ಕಾಫಿ ಶೇ.70 ರಷ್ಟು ನಾಶವಾಗಿದೆ.ಇನ್ನೂ ಫರ್ಚ್ಮೆಂಟ್ ಕಾಫಿ ಬೆಳೆ ಶೇ. 50 ನಾಶವಾಗಿವೆ ಇದರಿಂದಾಗಿ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ ಇದರ ಜೊತೆಗೆ ಮುಂದಿನ ವರ್ಷದ ಬೆಳೆ ಕೂಡ ಬರುವುದಿಲ್ಲ ಎಂಬ ಆತಂಕ ಬೆಳೆಗಾರರನ್ನು ಕಾಡುತ್ತಿದೆ.

ಮಲೆನಾಡಿನ ಜನರ ಜೀವನ ಎಂದರೆ ಕಾಫಿ  ಆದರೆ ಕಾಫಿ ಬೆಳೆಗೆ ಕೊಳೆ ರೋಗವಾಗಿ ಬೆಳೆ ನಾಶವಾದರೆ ಇಲ್ಲಿನ ಜನರ ಆರ್ಥಿಕ ಪರಿಸ್ಥಿತಿ ಅಷ್ಟೇ ಅಲ್ಲ ಜನಸಾಮಾನ್ಯರ ಜೀವನಕ್ಕೆ ತೊಂದರೆ ಆಗುವುದು ಗ್ಯಾರಂಟಿ.

ಕರ್ನಾಟಕ ಸರ್ಕಾರದ ಮತ್ತು ಕೇಂದ್ರ ಸರ್ಕಾರದ ಗ್ಯಾರಂಟಿ ಜನಜೀವನ ನಾಶ ಮಾಡುವುದು ಗ್ಯಾರಂಟಿ ,ಅದ್ದರಿಂದ ತಕ್ಷಣವೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾಫಿ ಬೆಳೆಗಾರರ ನೆರವಿಗೆ ಬರ ಬೇಕೆಂದು ಕಾಫಿ ಬೆಳೆಗಾರರು ಒತ್ತಾಯಿಸುತ್ತಿದ್ದಾರೆ.

ಕಾಫಿಬೆಳೆ ಜೊತೆಗೆ ಮೆಣಸು ಮತ್ತು ತರಕಾರಿಗಳು ಕೂಡ ನಾಶವಾಗುತ್ತಿವೆ. ಕಳೆದ ಒಂದುವರೆ ತಿಂಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ರಸ್ತೆಗಳು ಮಾಯವಾಗಿ ಗದ್ದೆಗಳಂತೆ ಆಗಿವೆ.ಯಾವುದೇ ವಾಹನಗಳು ಚಲಿಸುವುದು ದುಸ್ಥರವಾಗಿವೆ.ಸರ್ಕಾರದಿಂದ ಗುಂಡಿ ಮುಚ್ಚುವ ಸಾಮಾನ್ಯ ಕೆಲಸಗಳು ಅಗುತ್ತಿಲ್ಲ ಶೃಂಗೇರಿ ಮತ್ತು ಮೂಡಿಗೆರೆ ಹಾಗೂ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬೆಳೆಯ ಜೊತೆಗೆ ಶಾಸಕರುಗಳು ಕೊಳೆತಿರಬಹುದು ಎಂದು ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನೂ ಬಯಲು ಭಾಗದಲ್ಲಿ ಅರ್ಥಿಕ ಬೆಳೆಯಾದ ಈರುಳ್ಳಿ ಮತ್ತು ತರಕಾರಿ ಬೆಳೆಗಳು ಕೊಳೆಯುತ್ತಿವೆ.ಇದರಿಂದಾಗಿ ರೈತರಿಗೆ ಬರ ಸಿಡಿಲು ಬಡಿದಂತೆ ಆಗಿದೆ.ಇಲ್ಲಿನ ಜನಪ್ರತಿನಿಧಿಗಳು ಜೆಲ್ಲಿ,ಬಾರ್,ಸೈಟ್ ಬ್ಯೂಜಿನೇಸ್ ನಲ್ಲಿ ಬ್ಯೂಜಿಯಾಗಿದ್ದಾರೆ ಎಂದು ಜನಸಾಮಾನ್ಯರ ಗೋಳು.

ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಮಗನ ಮದುವೆ ಬ್ಯೂಸಿ,ಡ್ಯಾನ್ಸ್ ಮಾಡುತ್ತಿದ್ದಾರೆ.ಮೂಡಿಗೆರೆ ಶಾಸಕಿ ನಯನಮೋಟಮ್ಮ ಮಳೆ ಬಂದರೆ ನಾವು ಏನು ಮಾಡಬೇಕು, ಮಳೆ ನಿಲ್ಲಿಸಲು ಸಾಧ್ಯವೇ ಎಂದು ಹೇಳುತ್ತಿದ್ದರೆ,ಚಿಕ್ಕಮಗಳೂರು ಶಾಸಕ ಹೆಚ್.ಡಿ.ತಮ್ಮಯ್ಯ ಐಸಿರಿಯಲ್ಲಿ ಯಡಿಯೂರಪ್ಪ ಮತ್ತು ವಿಜೆಯೇಂದ್ರ ಸ್ವಾಗತ ಮಾಡಲು ಸಮಯ ಕೊಟ್ಟಿದ್ದಾರೆ ಇವರಿಗೆ “ಐಸಿರಿ” ಮುಖ್ಯ ಎಂದು ಜನಸಾಮಾನ್ಯರ ಅಭಿಪ್ರಾಯ.

ಇನ್ನೂ ಜಿಲ್ಲಾಡಳಿತ ಮಳೆಯಲ್ಲಿ ಕರಗಿ ಹೋಗಿದ್ದಾರೆ.ಡಿ.ಕೆ.ಶಿವಕುಮಾರ್ ರೆಸಾರ್ಟ್ ಗೆ ದಾರಿ,ಡಿ.ಸಿ.ಸಿ.ಬ್ಯಾಂಕ್ ಚುನಾವಣೆ ನಡೆಯದಂತೆ ಮಾಡುವುದು ಹೇಗೆ ಎಂಬ ತಲೆಬಿಸಿಯಲ್ಲಿದ್ದಾರೆ .ಮಳೆ,ಬೆಳೆ, ರಸ್ತೆಗಳು ನಾಶವಾದರೆ ನಾವು ಏನು ಮಾಡಲಿ ಎಂಬ ಅಳಲು ಜಿಲ್ಲಾ ಮಂತ್ರಿ ನಾಪತ್ತೆಯಾಗಿರುವಾಗ ಯಾರನ್ನು ಹುಡುಕುವುದು ಎಂದರೆ ಸಂಘಟನೆಗಳು ಮನವಿ ಕೊಡುವುದು ಬಿಟ್ಟರೆ ಚಳುವಳಿಗಳು ಮಳೆಯ ಆರ್ಭಟದಲ್ಲಿ ತೇಲಿ ಹೋಗುತ್ತಿರುವಾಗ ಜನಸಾಮಾನ್ಯರು ಬಾಯಿ ಬಡಿದು ಕೊಳ್ಳುತ್ತಿದ್ದಾರೆ.ಇನ್ನೂ ವಿರೋಧ ಪಕ್ಷದವರು ಜಿಲ್ಲೆಯ ಸಮಸ್ಯೆಗಳನ್ನು ಬಿಟ್ಟು ಧರ್ಮಸ್ಥಳ, ಧರ್ಮಸ್ಥಳ ಎನ್ನುತ್ತಿದ್ದಾರೆ ಜಿಲ್ಲೆಯ ಜನರ ಸಮಸ್ಯೆಗಳನ್ನು ಕೇಳುವವರ ಹುಡುಕಾಟದಲ್ಲಿ ಜನಸಾಮಾನ್ಯರು ಇದ್ದಾರೆ.

Heavy rain in the district – coffee crop destroyed – road hazard

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...