Home namma chikmagalur ಹಸು-ಕರು ಕಳ್ಳತನ ವಿರುದ್ಧ ಕಠಿಣ ಕಾನೂನು ಕ್ರಮ ರೈತ ಸಂಘ
namma chikmagalurchikamagalurHomeLatest News

ಹಸು-ಕರು ಕಳ್ಳತನ ವಿರುದ್ಧ ಕಠಿಣ ಕಾನೂನು ಕ್ರಮ ರೈತ ಸಂಘ

Share
Share

ಚಿಕ್ಕಮಗಳೂರು:  ಹಸು-ಕರು ಕಳ್ಳತನ ಮಾಡಿರುವ ಕಳ್ಳರನ್ನು ಮತ್ತು ವಾಹನವನ್ನು ವಶಪಡಿಸಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ಪಾರದರ್ಶಕವಾಗಿ ವಿಚಾರಣೆ ನಡೆಸಿ, ಅವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ವೈ.ಸಿ.ಸುನೀಲ್ ಕುಮಾರ್ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಲ್ಲಹಳ್ಳಿ ಗ್ರಾಮದ ಭುವನೇಶ್ ಎಂಬುವವರಿಗೆ ಸೇರಿದ ಸ.ನಂ ೭೬ ರಲ್ಲಿ ತಮ್ಮ ಜಮೀನಿನಲ್ಲಿ ದನದ ಕೊಟ್ಟಿಗೆಯನ್ನು ನಿರ್ಮಾಣ ಮಾಡಿ ಅಲ್ಲಿಯೇ ಹಸುಗಳನ್ನು ಸಾಕುತ್ತಿದ್ದು, ಆ.೩೦ ರಂದು ದನಗಳನ್ನು ಮೇಯಿಸಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದು, ಅಂದು ರಾತ್ರಿ ಕೊಟ್ಟಿಗೆ ಬೀಗ ಒಡೆದು ಹಸು, ಕರುವನ್ನು ಕಳವು ಮಾಡಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭುವನೇಶ್ ದೂರು ನೀಡಿದ್ದಾರೆ ಎಂದರು.

ಕಲ್ಲಹಳ್ಳಿ ಗ್ರಾಮದ ಪ್ರತೀಶ್ ಎಂಬುವವರ ಕೋಳಿ ಫಾರಂನಲ್ಲಿ ಕೂಲಿ ಕೆಲಸಕ್ಕೆ ಬಂದಿದ್ದ ಭದ್ರಾವತಿಯ ಶೇಖರ್ ಮತ್ತು ಕೃಷ್ಣ ಎಂಬುವವರು ಭದ್ರಾವತಿಯ ವೆಂಕಟೇಶ್ ಜೊತೆಗೂಡಿ ಕಡೂರು ತಾಲ್ಲೂಕಿನ ಲಕ್ಷಿö್ಮಪುರ ಗ್ರಾಮದ ಗಂಗಾಧರ ಮತ್ತು ಅರ್ಜುನ ಇವರು ಬುಲೆರೋ ಪಿಕಪ್ ವಾಹನದಲ್ಲಿ ಹಸು ಕರುಗಳನ್ನು ಕದ್ದು ಸಾಗಿಸಿ ಭದ್ರಾವತಿಯ ಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸಿದ್ದರು ಎಂದು ಹೇಳಿದರು.

ಸಂತೆಯಲ್ಲಿ ಇದ್ದ ಜನರು ಇವರ ವರ್ತನೆಯನ್ನು ಗಮನಿಸಿ ಅನುಮನಗೊಂಡು ಭದ್ರಾವತಿಯ ಹೊಸೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಅದರಂತೆ ಪೊಲೀಸ್ ಅಧಿಕಾರಿಗಳು ಕಳ್ಳರಿಂದ ಮಾಹಿತಿ ಪಡೆದು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದು, ಗ್ರಾಮಾಂತರ ಪೊಲೀಸರು ಭುವನೇಶ್ ಅವರನ್ನು ಕರೆಯಿಸಿ ಎಫ್.ಐ.ಆರ್ ದಾಖಲು ಮಾಡಿ ಕದ್ದ ಹಸು ಮತ್ತು ಕರು ಮತ್ತು ಕಳ್ಳರನ್ನು ಕದ್ದ ದನಗಳ ಸಾಗಾಣಿಕೆಗಾಗಿ ಬಳಸಿದ್ದ ವಾಹನವನ್ನು ವಶಪಡಿಕೊಂಡಿದ್ದಾರೆ ಎಂದರು.

ಪ್ರಕರಣ ದಾಖಲಿಸಿಕೊಂಡ ಗ್ರಾಮಾಂತರ ಠಾಣೆಯ ಪೊಲೀಸರು ಹಸು ಮತ್ತು ಕರುಗಳನ್ನು ಯಾವುದೇ ನ್ಯಾಯಾಲಯದ ಆದೇಶವಿಲ್ಲದೆ ಭುವನೇಶ್ ಅವರಿಗೆ ನೀಡಿದ್ದು, ಕಳ್ಳರ ಮೇಲೆ ಕಳ್ಳತನಕ್ಕೆ ಬಳಸಿದ ವಾಹನದ ಮೇಲೆ ಕಾನೂನು ಕ್ರಮ ಜರುಗಿಸಲು ಠಾಣಾಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ದೂರಿದರು.

ಈಗಾಗಲೇ ಸರಣಿ ಹಸು ಕಳ್ಳ ಸಾಗಾಣೆ ನಡೆದಿದ್ದು, ಸಿರಗಾಪುರ ಗ್ರಾಮದಲ್ಲಿ ೬ ಹಸುಗಳು ಕಳ್ಳತನವಾಗಿವೆ. ಇದರ ಬಗ್ಗೆ ಎಪ್ರಿಲ್ ೧೪ ರಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸ್ಥಳ ಮಹಜರು ಮಾಡಿ ಕೇಸು ದಾಖಲಿಸುವುದಾಗಿ ಹೇಳಿ ಎಫ್.ಐ.ಆರ್ ದಾಖಲಿಸದೆ ಕನಿಷ್ಠ ತನಿಖೆಯನ್ನು ಮಾಡದೆ ಠಾಣಾಧಿಕಾರಿಗಳು ಮೌನ ವಹಿಸಿದ್ದಾರೆ ಎಂದು ಹೇಳಿದರು.

ಕಳ್ಳತನವನ್ನು ಮಾಡಿರುವ ಕಳ್ಳರಿಗೂ ಈಗಾಗಲೇ ನಡೆದಿರುವ ಹಸುಗಳ ಕಳ್ಳತನಕ್ಕೂ ಸಂಬAಧವಿರುವುದಾಗಿ ಕಂಡು ಬಂದಿದ್ದು, ಹಸುಗಳನ್ನು ಕಳೆದುಕೊಂಡ ಎಲ್ಲಾ ರೈತರಿಂದ ಹೇಳಿಕೆ ಪಡೆದು ರೈತರಿಗೆ ನ್ಯಾಯ ಕೊಡಿಸಬೇಕು. ಕಳ್ಳರಿಗೆ ಕಾನೂನು ರೀತಿಯ ಶಿಕ್ಷೆಯಾಗುವಂತೆ ಪಾರದರ್ಶಕವಾಗಿ ವಿಚಾರಣೆ ನಡೆಸಬೇಕೆಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಕೆ.ಕೆ.ಕೃಷ್ಣೇಗೌಡ, ಮುಖಂಡರಾದ ಮಲ್ಲುಂಡಪ್ಪ, ಲೋಕೇಶ್, ಪುಟ್ಟಣ್ಣ, ಚಂದ್ರಶೇಖರ್, ಮುಳ್ಳೇಶ್, ಶಂಕರಣ್ಣ, ರಾಮೇಗೌಡ ಉಪಸ್ಥಿತರಿದ್ದರು.

Farmers’ association takes strict legal action against cow and calf theft

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...