Home Latest News ಚಿಕ್ಕಮಗಳೂರು ಎಫ್ ವಲಯ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟ
Latest NewschikamagalurHomenamma chikmagalur

ಚಿಕ್ಕಮಗಳೂರು ಎಫ್ ವಲಯ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟ

Share
Share

ಚಿಕ್ಕಮಗಳೂರು: ಕ್ರೀಡಾ ಕೂಟಗಳು ಜೀವನದ ಉತ್ಸಾಹವನ್ನು ಹೆಚ್ಚಿಸುವ ಸಾಧನ, ಸೋಲು, ಗೆಲುವಿನ ಮೆಟ್ಟಿಲಾಗಬೇಕು. ಕ್ರೀಡಾ ಮನೋಭಾವದಿಂದ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದು ಹೊಸದುರ್ಗದ ಶ್ರೀ ಪುರುಷೋತ್ತಮಾನಂದ ಸ್ವಾಮೀಜಿ, ತಿಳಿಸಿದರು.

ಅವರು ಇಂದು ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿ.ಪಂ, ತಾ.ಪಂ, ಶಾಲಾ ಶಿಕ್ಷಣ ಇಲಾಖೆ ಉಪವೀರ ಜಗದ್ಗುರು ವಿದ್ಯಾಸಂಸ್ಥೆ ಹಾಗೂ ಲಕ್ಯಾ ಗ್ರಾಮದ ಶ್ರೀ ಸಿದ್ದೇಶ್ವರ ಪ್ರೌಢಶಾಲೆ ಇವರುಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಚಿಕ್ಕಮಗಳೂರು ಎಫ್ ವಲಯ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟ-೨೦೨೫-೨೬ರ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.

ಕ್ರೀಡೆಗಳು ಜೀವನೋತ್ಸಾಹದ ಜೊತೆಗೆ ದೈಹಿಕ, ಮಾನಸಿಕ, ಭೌದ್ಧಿಕ ಬೆಳವಣಿಗೆಗೆ ಹೆಚ್ಚು ಸಾಮರ್ಥ್ಯ ಪಡೆಯಲು ಸಾಧ್ಯವಾಗುತ್ತದೆ. ಸೋಲು-ಗೆಲುವು ಸಹಜ, ಪ್ರತಿಯೊಬ್ಬರೂ ಕ್ರೀಡಾ ಮನೋಭಾವದಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ನಿಮ್ಮಲ್ಲಿರುವ ಪ್ರತಿಭೆ ಹೊರಬರಲು ಸಾಧ್ಯ ಎಂದರು

ತೀರ್ಪುಗಾರರು ತಾರತಮ್ಯ ಇಲ್ಲದಂತೆ ನ್ಯಾಯಸಮ್ಮತವಾದ ನಿರ್ಣಯ ಕೈಗೊಳ್ಳಲಿದ್ದಾರೆ. ಜೀವನದಲ್ಲಿ ಸಾಧನೆ ಮಾಡಬೇಕಾದರೆ ದೈಹಿಕವಾಗಿ, ಮಾನಸಿಕವಾಗಿ ಉತ್ತಮ ಸಾಮರ್ಥ್ಯ ಪಡೆಯಲು ಕ್ರೀಡೆಗಳಲ್ಲಿ ಭಾಗವಹಿಸಿ ಜೀವನೋತ್ಸಾಹ ಹೆಚ್ಚಿಸಿಕೊಳ್ಳಿ ಎಂದು ಸಾಂಕೇತಿಕವಾಗಿ ಹೇಳಿದರು.

ಕ್ರೀಡಾಕೂಟವನ್ನು ಉದ್ಘಾಟಿಸಿದ ಶಾಸಕ ಹೆಚ್.ಡಿ. ತಮ್ಮಯ್ಯ ಮಾತನಾಡಿ, ಗ್ರಾಮೀಣ ಕ್ರೀಡೆಗಳು ದೇಶದ ಬಹುದೊಡ್ಡ ಆಸ್ತಿ. ವಿದ್ಯಾರ್ಥಿಗಳು ಹೆಚ್ಚು ಗ್ರಾಮೀಣ ಮಟ್ಟದ ಕ್ರೀಡೆಗಳಲ್ಲಿ ಸ್ಪರ್ಧಿಸುವ ಮೂಲಕ ಪೂರ್ವಿಕರ ಕ್ರೀಡಾಕೂಟವನ್ನು ಉಳಿಸಿ ಬೆಳೆಸ ಬೇಕು ಎಂದರು.

ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿಂದ ನಡೆಯುತ್ತಿರುವ ಕ್ರೀಡಾಕೂಟಗಳು ವಿದ್ಯಾರ್ಥಿಗಳಿಗೆ ಬಹಳಷ್ಟು ಉಪಯೋಗಿಯಾಗಿದೆ ಎಂದ ಅವರು, ಗ್ರಾಮೀಣ ಭಾಗದ ಕ್ರೀಡೆಗಳು ನಶಿಸುತ್ತಿರುವ ಕಾಲದಲ್ಲಿ ವಿದ್ಯಾರ್ಥಿಗಳು ಇಂದಿಗೂ ದೇಹಕ್ಕೆ ಶಕ್ತಿ ತುಂಬುವಂಥ ಕಬ್ಬಡ್ಡಿ ಕ್ರೀಡೆ ಬೆಳೆಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಕ್ರೀಡಾಕೂಟಕ್ಕೆ ಸರ್ಕಾರದ ಜೊತೆಗೆ ಸಾರ್ವಜನಿಕರು, ದಾನಿಗಳು ಹಾಗೂ ಸ್ಥಳೀಯ ಸಹಭಾಗಿತ್ವದಲ್ಲಿ ನಡೆಯುತ್ತಿರುವುದು ಒಳ್ಳೆಯ ಬೆಳವಣಿಗೆ. ಶಿಕ್ಷಕರು ಕೂಡ ಮಕ್ಕಳಲ್ಲಿರುವ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಇದರಿಂದ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ವಿದ್ಯಾರ್ಥಿಗಳು ಮುಂಚೂಣಿಗೆ ಬರಲು ಸಾಧ್ಯ ಎಂದು ಹೇಳಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪ ಮಾತನಾಡಿ, ಕ್ರೀಡೆಗಳು ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿ. ಸ್ಪರ್ಧೆಗಳಲ್ಲಿ ಪ್ರಯತ್ನಗಳಿರಬೇಕು. ಗೆದ್ದರು ಖುಷಿಯಿರಲಿ, ಸೋತರೇ ಮತ್ತೊಮ್ಮೆ ಪ್ರಯ ತ್ನಿಸುವ ಛಲವು ಇದ್ದಲ್ಲಿ, ಭವಿಷ್ಯದಲ್ಲಿ ಎತ್ತರ ಮಟ್ಟಕ್ಕೆ ಕೊಂಡೊಯ್ಯಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ, ಸಂಯೋಜಕ ಕೃಷ್ಣಮೂರ್ತಿ ಅರಸ್, ಲಕ್ಯಾ ಗ್ರಾ.ಪಂ. ಅಧ್ಯಕ್ಷ ಹನೀಫ್, ಉಪಾಧ್ಯಕ್ಷ ಕಾಂತರಾಜ್, ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ವಿವಿಧ ಇಲಾಖೆ ಶಿಕ್ಷಕರು ಉಪಸ್ಥಿತರಿದ್ದರು.ಮೊದಲಿಗೆ ಶಾಲೆಯ ಮುಖ್ಯೋಪಾಧ್ಯಾಯ ನರಸಿಂಹಮೂರ್ತಿ ಸ್ವಾಗತಿಸಿ, ಚಂದ್ರಶೇಖರ್ ನಿರೂಪಿಸಿ, ಕೊನೆಯಲ್ಲಿ ವಂದಿಸಿದರು.

Chikkamagaluru F Zone Level High School Sports Meet

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...