Home Crime News ಚಿನ್ನ ಕಳ್ಳಸಾಗಣೆ ಪ್ರಕರಣ: ₹277 ಕೋಟಿ ದಂಡ
Crime NewschikamagalurHomeLatest Newsnamma chikmagalur

ಚಿನ್ನ ಕಳ್ಳಸಾಗಣೆ ಪ್ರಕರಣ: ₹277 ಕೋಟಿ ದಂಡ

Share
Share
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ₹277 ಕೋಟಿ ದಂಡ ಪಾವತಿಸಿ ಎಂದು ರೆವೆನ್ಯು ಗುಪ್ತಚರ ನಿರ್ದೇಶನಾಲಯವು (ಡಿಆರ್‌ಐ) ನಟಿ ರನ್ಯಾ ರಾವ್, ಉದ್ಯಮಿ ತರುಣ್ ಕೊಂಡರಾಜು ಮತ್ತು ಇಬ್ಬರು ಆಭರಣ ವ್ಯಾಪಾರಿಗಳಿಗೆ ನೋಟಿಸ್‌ ನೀಡಿದೆ.

ಈ ನಾಲ್ವರು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 14.2 ಕೆ.ಜಿ.ಯಷ್ಟು ಚಿನ್ನ ಕಳ್ಳಸಾಗಣೆ ಮಾಡಿ, ಮಾರ್ಚ್‌ 3 ರಂದು ಡಿಆರ್‌ಐ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದರು. ಇವರಲ್ಲಿ ನಟಿ ರನ್ಯಾ ರಾವ್‌ಗೆ ಗರಿಷ್ಠ, ₹102 ಕೋಟಿ ದಂಡ ವಿಧಿಸಲಾಗಿದೆ.

ಚಿನ್ನಕಳ್ಳಸಾಗಣೆಯಲ್ಲಿ ಭಾಗಿಯಾದ ಆರೋಪದಲ್ಲಿ ಉದ್ಯಮಿ ತರುಣ್‌ ಕೊಂಡರಾಜು, ಕಳ್ಳಸಾಗಣೆಯ ಚಿನ್ನ ಮಾರಾಟ ಮಾಡಿದ ಮತ್ತು ಹವಾಲಾ ಮೂಲಕ ಹಣ ಕಳುಹಿಸಿದ ಆರೋಪದಲ್ಲಿ ಆಭರಣ ವ್ಯಾಪಾರಿ ಸಾಹಿಲ್‌ ಸಖಾರಿಯಾ ಜೈನ್‌ ಮತ್ತು ಭರತ್‌ ಕುಮಾರ್‌ ಜೈನ್‌ ಅವರನ್ನು ಡಿಆರ್‌ಐ ಬಂಧಿಸಿತ್ತು. ಇವರೆಲ್ಲ ನಗರದ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಡಿಆರ್‌ಐ ಮುಂಬೈ ವಿಭಾಗದ ಅಧಿಕಾರಿಗಳು ಮಂಗಳವಾರ ಕೇಂದ್ರ ಕಾರಾಗೃಹಕ್ಕೆ ತೆರಳಿ, ನಾಲ್ವರು ಅಪರಾಧಿಗಳಿಗೂ ನೋಟಿಸ್‌ ನೀಡಿದ್ದಾರೆ. ಜತೆಗೆ ಅವರ ವಿರುದ್ಧದ ಆರೋಪಗಳು ಮತ್ತು ಅವುಗಳಿಗೆ ಸಂಬಂಧಿಸಿದ ದಾಖಲೆಗಳನ್ನೂ ನೋಟಿಸ್‌ನೊಂದಿಗೆ ನೀಡಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

‘2024ರ ನವೆಂಬರ್‌ನಿಂದ 2025ರ ಫೆಬ್ರುವರಿ ನಡುವೆ ರನ್ಯಾ ನಾಲ್ಕು ಬಾರಿ ಚಿನ್ನ ಕಳ್ಳಸಾಗಣೆ ಮಾಡಿದ್ದು, ಒಟ್ಟು 49.6 ಕೆ.ಜಿ.ಯಷ್ಟು ಚಿನ್ನವನ್ನು ದುಬೈನಿಂದ ಬೆಂಗಳೂರಿಗೆ ತಂದಿದ್ದರು. ಅಷ್ಟೂ ಚಿನ್ನವನ್ನು ಸಾಹಿಲ್‌ ₹40.07 ಕೋಟಿಗೆ ಮಾರಾಟ ಮಾಡಿ, ಅದರಲ್ಲಿ ₹38.35 ಕೋಟಿಯನ್ನು ಹವಾಲಾ ಮೂಲಕ ದುಬೈಗೆ ಕಳುಹಿಸಿದ್ದ. ಚಿನ್ನದ ಮಾರುಕಟ್ಟೆ ಮೌಲ್ಯ, ಆಮದು ತೆರಿಗೆಯನ್ನು ಒಳಗೊಂಡು ದಂಡ ನಿರ್ಧರಿಸಲಾಗಿದೆ’ ಎಂದು ಡಿಆರ್‌ಐ ಮೂಲಗಳು ಮಾಹಿತಿ ನೀಡಿವೆ.

‘ಕಳ್ಳಸಾಗಣೆಯ ಚಿನ್ನವನ್ನು ವಸೂಲಿ ಮಾಡಬೇಕಿದ್ದು, ಅದು ಲಭ್ಯವಿಲ್ಲದೇ ಇದ್ದರೆ ಆರೋಪಿಗಳಿಂದ ಅದರ ಮೊತ್ತವನ್ನು ವಸೂಲಿ ಮಾಡಬಹುದಾಗಿದೆ. ಇಲ್ಲಿ ಪೂರ್ಣ ಪ್ರಮಾಣದ ಚಿನ್ನ ಲಭ್ಯವಿರದ ಕಾರಣಕ್ಕೆ, ದಂಡ ಪಾವತಿಸುವಂತೆ ನೋಟಿಸ್‌ ನೀಡಲಾಗಿದೆ. ಆರೋಪಿಗಳು ದಂಡ ಪಾವತಿಸಿದರೂ ಅವರ ವಿರುದ್ಧದ ಅಪರಾಧ ಪ್ರಕರಣಗಳು ಮುಂದುವರಿಯಲಿವೆ’ ಎಂದು ಮೂಲಗಳು ವಿವರಿಸಿವೆ.

₹277 crore fine imposed in gold smuggling case
Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮಳೆಯ ಆರ್ಭಟ – ಕಾಫಿಬೆಳೆ ನಾಶ – ರಸ್ತೆ ಹುಡುಕಾಡುವ ಕಾಟ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡ ಬಿಡದೆ ಮಳೆ ಸುರಿಯುತ್ತಿದೆ ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಮಳೆಯ ಆರ್ಭಟದಿಂದ ಕಾಫಿ ಕೊಳೆಯಲು ಆರಂಭವಾಗಿದೆ ಎಂದು ಕಾಫಿ ಬೆಳೆಗಾರರ...

12ನೇ ಶತಮಾನದಲ್ಲೇ ಕನ್ನಡಕ್ಕೆ ವಚನಾಕಾರಿಂದ ಬಹಳ ದೊಡ್ಡ ಕೊಡುಗೆ

ಚಿಕ್ಕಮಗಳೂರು: ವಚನಾಕಾರರು ಕನ್ನಡಕ್ಕೆ ಬಹಳ ದೊಡ್ಡ ಕೊಡುಗೆಯನ್ನು ೧೨ನೇ ಶತಮಾನದಲ್ಲೇ ನೀಡಿದ್ದಾರೆ. ಜಗಜ್ಯೋತಿ ಬಸವಣ್ಣನವರು ಕೊಟ್ಟ ಸಾಂಸ್ಕೃತಿಕ ಚಳುವಳಿ ಬದುಕಿನ ಅನುಭವಗಳು ಅನುಭಾವವಾಗಿ ಜನರ ಆಡುಭಾಷೆಯಲ್ಲಿ ಸಾಹಿತ್ಯ ರಚಿಸಿ ಇಡೀ ಜಗತ್ತಿಗೆ ನೈತಿಕ...

Related Articles

ದೊಡ್ಡ ಮನೆ ಡಿಚ್ಚಿ ಯಾರಿಗೆ – ಕೈ ಕಸರತ್ತು ? ಬಿಜೆಪಿಯಲ್ಲಿ ತಳಮಳ !

ಅಜ್ಜಂಪುರ: ಪಟ್ಟಣ ಪಂಚಾಯತಿ ಚುನಾವಣೆ ನಡೆದು ಇಪ್ಪತ್ತು ದಿನಗಳಾಗಿದೆ ಆದರೆ ಅಧ್ಯಕ್ಷ/ ಉಪಾಧ್ಯಕ್ಷರ ಚುನಾವಣೆ ವಿಳಂಬ...

ಜನರಿಗೆ ವಾಸ್ತವ ಸಂಗತಿ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾದ್ಯಂತ ಪ್ರವಾಸ

ಚಿಕ್ಕಮಗಳೂರು : ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ನೀಡುತ್ತಿರುವ ಜನಪರ ಯೋಜನೆಗಳ ಪ್ರಚಾರ ಕೈಗೊಳ್ಳುವುದರೊಂದಿಗೆ ವಿರೋಧ...

ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕು

ಚಿಕ್ಕಮಗಳೂರು: ‘ಅಲ್ಲಂಪುರ ನಿವಾಸಿ ಓಂಕಾರಮೂರ್ತಿ ಮೇಲಿನ ಹಲ್ಲೆ ಸಂಬಂಧ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ‘ಬಿ’...

ಅಂಬೇಡ್ಕರ್ ಸಂವಿಧಾನದ ತತ್ವ ಹೊಂದಿರುವ ಪಕ್ಷ ಕಾಂಗ್ರೆಸ್

ಚಿಕ್ಕಮಗಳೂರು:  ಅಂಬೇಡ್ಕರ್ ಸಂವಿಧಾನದ ತತ್ವವನ್ನು ಹೊಂದಿರುವ ಪಕ್ಷ ಕಾಂ ಗ್ರೆಸ್. ಚುನಾವಣೆಗೆ ಮಾತ್ರ ಪಕ್ಷ ಸೀಮಿತವಾಗದೇ...