Home Latest News ಜನಸಂಖ್ಯೆ ಆಧಾರದಲ್ಲಿ ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆ ಮಾಡಬಾರದು
Latest NewschikamagalurHomenamma chikmagalur

ಜನಸಂಖ್ಯೆ ಆಧಾರದಲ್ಲಿ ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆ ಮಾಡಬಾರದು

Share
Share

ಚಿಕ್ಕಮಗಳೂರು:  ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆಯನ್ನು ಜನಸಂಖ್ಯೆ ಆಧಾರದಲ್ಲಿ ಮಾಡಬಾರದು. ಅದು ಭೌಗೋಳಿಕ ಆಧಾರದಲ್ಲಿ ಮಾಡಿದರೆ ಮಾತ್ರ ದಕ್ಷಿಣ ರಾಜ್ಯಗಳಿಗೆ ನ್ಯಾಯ ಸಿಗಲಿದೆ ಎಂದು ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಪ್ರತಿಪಾದಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲೋಕಸಭೆಯಲ್ಲಿ ಸದ್ಯಕ್ಕೆ ೫೪೩ ಲೋಕಸಭಾ ಕ್ಷೇತ್ರಗಳಿವೆ. ಮುಂದೆ ಕ್ಷೇತ್ರ ಮರುವಿಂಗಡಣೆಯಾದಲ್ಲಿ ೮೪೮ ಲೋಕಸಭಾ ಕ್ಷೇತ್ರಗಳಾಗಲಿವೆ. ಜನಸಂಖ್ಯೆ ಆಧಾರದಲ್ಲಿ ಪುನರ್ ವಿಂಗಡಣೆ ಮಾಡಿದರೆ ಉತ್ತರ ಭಾರತಕ್ಕೆ ಸರಿ ಸುಮಾರು ೫೫೦ ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳು ಲಭಿಸಲಿವೆ. ದಕ್ಷಿಣ ಭಾರತದ ರಾಜ್ಯಗಳು ಕನಿಷ್ಠ ೪೪೦ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಗುತ್ತದೆ. ಹೀಗಾದಲ್ಲಿ ಪ್ರತಿ ಬಾರಿಯೂ ಉತ್ತರ ಭಾರತದವರೇ ಬಹುಮತ ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ಇದರಿಂದ ದಕ್ಷಿಣ ಭಾರತದ ಕಡೆಗಣನೆ ಆಗುವುದು ನಿಶ್ಚಿತ ಎಂದು ಹೇಳಿದರು.

ದಕ್ಷಿಣ ಭಾರತದ ಎಲ್ಲ ತೆರಿಗೆಗಳು ಈಗಾಗಲೇ ಉತ್ತರ ಭಾರತದ ಪಾಲಾಗುತ್ತಿದೆ. ಕರ್ನಾಟಕ ರಾಜ್ಯಕ್ಕೆ ಶೇ.೧೩ ರಷ್ಟು ಜಿಎಸ್‌ಟಿ ಪಾಲು ನೀಡಲಾಗುತ್ತಿದೆ. ರಾಜ್ಯದಿಂದ ೫ ಲಕ್ಷ ಕೋಟಿ ರೂ. ಜಿಎಸ್‌ಟಿ ಕೇಂದ್ರಕ್ಕೆ ಹೋಗುತ್ತದೆ. ಅದರಲ್ಲಿ ನಮಗೆ ಸಿಗುತ್ತಿರುವುದು ಕೇವಲ ೪೦ ಸಾವಿರ ಕೋಟಿ ರೂ. ಮಾತ್ರ ಎಂದು ತಿಳಿಸಿದರು.

ದಕ್ಷಿಣ ಭಾರತದ ತೆರಿಗೆ ಪಾಲು ಉತ್ತರಕ್ಕೆ ಹೋದಲ್ಲಿ ದಕ್ಷಿಣ ರಾಜ್ಯಗಳು ದಿವಾಳಿಯಾಗುತ್ತವೆ. ಉದ್ಯೋಗ ಮತ್ತಿತರೆ ಮೂಲಸೌಕರ್ಯಗಳ ಅಭಿವೃದ್ಧಿ ಯಾವುದೂ ಕೂಡ ನಡೆಯುವುದಿಲ್ಲ. ಉತ್ತರ ಭಾರತದ ಪ್ರಬಲ ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬಂದರೆ ಆ ಭಾಗದ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ವಿನಾಃ ದಕ್ಷಣ ರಾಜ್ಯಗಳೂ ಅವಗಣನೆಗೆ ಒಳಗಾಗುವುದು ಖಚಿತ. ಹೀಗಾಗಿ ಯಾವುದೇ ಕಾರಣಕ್ಕೂ ಜನಸಂಖ್ಯೆ ಆಧಾರದಲ್ಲಿ ಕ್ಷೇತ್ರ ಮರುವಿಂಗಡಣೆ ಮಾಡಬಾರದು. ಭೌಗೋಳಿಕ ಆಧಾರದಲ್ಲಿಯೇ ಕ್ಷೇತ್ರ ಮರುವಿಂಗಡಣೆ ಮಾಡಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದರು.

ಈ ಬಗ್ಗೆ ರಾಜ್ಯದ ಎಲ್ಲ ರಾಜಕೀಯ ಪಕ್ಷಗಳು ಪಕ್ಷಾತೀತವಾಗಿ ದನಿ ಎತ್ತಬೇಕು. ದಕ್ಷಿಣ ಭಾರತದಲ್ಲಿ ಈಗಿರುವ ಒಂದು ಕ್ಷೇತ್ರಗಳು ಕಡಿಮೆಯಾಗಬಾರದು. ಚಿಕ್ಕಮಗಳೂರು ಪ್ರತ್ಯೇಕ ಲೋಕಸಭಾ ಕ್ಷೇತ್ರವಾಗಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಹುಣಸೇಮಕ್ಕಿ ಲಕ್ಷ್ಮಣ್, ಉಮೇಶ್ ಉಪಸ್ಥಿತರಿದ್ದರು.

Lok Sabha constituencies should not be redistributed on the basis of population.

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...