Home Latest News ಒಳ ಮೀಸಲಾತಿ ಘೋಷಣೆ ಸರ್ಕಾರಕ್ಕೆ ದಸಂಸ ಅಭಿನಂದನೆ
Latest NewschikamagalurHomenamma chikmagalur

ಒಳ ಮೀಸಲಾತಿ ಘೋಷಣೆ ಸರ್ಕಾರಕ್ಕೆ ದಸಂಸ ಅಭಿನಂದನೆ

Share
Share

ಚಿಕ್ಕಮಗಳೂರು:  ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗ ನೀಡಿರುವ ವರದಿಗೆ ಸ್ಪಂದಿಸಿರುವ ಸರ್ಕಾರ ಒಳ ಮೀಸಲಾತಿ ಘೋಷಿಸಿರುವುದನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಲ್.ಎನ್ ಶ್ರೀಕಾಂತ್ ಸ್ವಾತಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಯೋಗದ ವರದಿ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಸಮಗ್ರವಾಗಿದ್ದು, ನ್ಯಾಯಬದ್ಧವಾಗಿದೆ. ಸಂವಿಧಾನ ಬದ್ಧವಾಗಿ ವೈಜ್ಞಾನಿಕವಾಗಿದೆ. ಈ ಮೂಲಕ ಸರ್ಕಾರ ಒಳಮೀಸಲಾತಿ ಘೋಷಿಸಿರುವುದು ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ಸಾಮಾಜಿಕ ಪರಿಕಲ್ಪನೆಯಡಿ ನ್ಯಾಯ ಒದಗಿಸಿದೆ. ಇದಕ್ಕಾಗಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಅವಕಾಶ ವಂಚಿತ ಸಮುದಾಯಗಳಿಗೆ ಎಲ್ಲಾ ಕ್ಷೇತ್ರಗಳಲ್ಲಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸಿಕೊಡುವ ಮೂಲಕ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯ ಸಬಲೀಕರಣಗೊಳಿಸುವ ಪರಿಣಾಮಕಾರಿ ಯೋಜನೆ ಇದಾಗಿದೆ ಎಂದರು.

ಪರಿಶಿಷ್ಟ ಜಾತಿ ಸಮುದಾಯಗಳು ಮತ್ತು ದಸಂಸ ಕಳೆದ ೩೫ ವರ್ಷಗಳ ಈ ಬೇಡಿಕೆಯನ್ನು ಮುಂದಿಟ್ಟು ಹೋರಾಟ ನಡೆಸಿದ ಪರಿಣಾಮ ಇಂದು ಗೆಲುವು ಸಾಧಿಸಲು ಪೂರಕವಾಗಿದೆ ಎಂದು ತಿಳಿಸಿದರು.

ಪರಿಶಿಷ್ಟ ಜಾತಿಗಳನ್ನು ಮೂರು ವಿಭಾಗಗಳನ್ನಾಗಿ ವರ್ಗೀಕರಿಸಿ ಶೇ.೧೭ ರಷ್ಟು ಎಸ್‌ಸಿ ಮೀಸಲು ಪ್ರಮಾಣವನ್ನು ಎಡಗೈ ಮಾದಿಗ ಶೇ.೬. ಬಲಗೈ ಛಲವಾದಿ ಶೇ.೬, ಹಾಗೂ ಭೋವಿ, ಲಂಬಾಣಿ, ಕೊರಚ, ಕೊರಮ ಇತರೆ ಜಾತಿಗಳಿಗೆ ಶೇ.೫ ಒಳಮೀಸಲಾತಿ ಹಂಚಿಕೆ ಮಾಡಲಾಗಿದೆ ಎಂದು ವಿವರಿಸಿದರು.

ಇಂತಹ ಐತಿಹಾಸಿಕ ನಿರ್ಣಯ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್ ಮುನಿಯಪ್ಪ, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಹಾಗೂ ಎಲ್ಲ ಸಚಿವ ಸಚಿವ ಸಂಪುಟದ ಸದಸ್ಯರಿಗೆ ಮತ್ತು ಸಹಕರಿಸಿದ ಶಾಸಕರುಗಳಿಗೆ ಕೃತಜ್ಞತೆ ಸಲ್ಲಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಘಟನಾ ಸಂಚಾಲಕರಾದ ಎಸ್.ಎನ್. ಮಹೇಂದ್ರಸ್ವಾಮಿ ಶಿವನಿ, ರಾಮು ಎನ್.ಆರ್ ಪುರ, ರವಿಶಂಕರ್ ಯಳ್ಳಂಬಳಸೆ, ಲೋಕೇಶ್ ಮೇಲನಹಳ್ಳಿ, ಸಂಜೀವ್ ಕಳಸ, ಜಿಲ್ಲಾ ಮಹಿಳಾ ಒಕ್ಕೂಟದ ಸಂಚಾಲಕಿ ಪವಿತ್ರ ಎನ್.ಆರ್ ಉಪಸ್ಥಿತರಿದ್ದರು.

Dasams congratulates government on internal reservation announcement

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...