Home namma chikmagalur ಎರಡು ಹಸುಗಳ ಹತ್ಯೆ ಮಾಡಿದ ಆರೋಪಿಯ ಬಂಧನ
namma chikmagalurchikamagalurHomeLatest News

ಎರಡು ಹಸುಗಳ ಹತ್ಯೆ ಮಾಡಿದ ಆರೋಪಿಯ ಬಂಧನ

Share
Share

ಕೊಪ್ಪ: ಅಕ್ರಮವಾಗಿ ಎರಡು ಹಸುಗಳನ್ನು ಹತ್ಯೆ ಮಾಡಿ ಮಾಂಸ ಮಾರಾಟ ಮಾಡಲು ತಯಾರಿ ನಡೆಸುತ್ತಿರುವ ವೇಳೆ ಹರಿಹರಪುರ ಪೊಲೀಸರು ದಾಳಿ ನಡೆಸಿ ಗೋವಿನ ಮಾಂಸ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ.

ನಿಲುವಾಗಿಲು ಸಮೀಪದ ಕಾಳನಾಯಕನಕಟ್ಟೆ ಸಮೀಪ ನೂರುಲ್ಲಾ ಬಂಧಿತ ಆರೋಪಿ. ಸ್ವಂತ ಜಮೀನಿನಲ್ಲಿ ಮಲೆನಾಡು ಗಿಡ್ಡ ಹಸುಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡಲು ಹ್ಯಾಕ್ ಮಾಡುತ್ತಿದ್ದಾಗ ಹರಿಹರಪುರ ಪೊಲೀಸರು ದಾಳಿ ನಡೆಸಿ 150 ಕೆ.ಜಿ.ಗೂ ಹೆಚ್ಚು ಗೋವಿನ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ನೂರುಲ್ಲಾನನ್ನು ಕೊಪ್ಪ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಬುಧವಾರ ಸಂಜೆ ವೇಳೆ ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯನ್ನು ಚಿಕ್ಕಮಗಳೂರು ಕಾರಾಗೃಹದಲ್ಲಿರಿಸಲಾಗಿದೆ.

ನೂರುಲ್ಲಾ ಪದೇ ಪದೆ ಇಂತಹ ಘಟನೆಯಲ್ಲಿ ಸಿಕ್ಕಿಬೀಳುತ್ತಿದ್ದಾನೆ. ಇತ್ತೀಚೆಗೆ ಸ್ಥಳೀಯ ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಅಕ್ರಮವಾಗಿ ಗೋವುಗಳು ಸಿಕ್ಕ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದ. ಗೋಕಳ್ಳತನ, ಸಾಗಣೆ ಸೇರಿದಂತೆ ಈತನ ಮೇಲೆ ನಾಲ್ಕು ಪ್ರಕರಣಗಳು ದಾಖಲಾಗಿವೆ ಘಟನೆಯ ವಿಷಯ ತಿಳಿಯುತ್ತಿದ್ದಂತೆ ಬಜರಂಗದಳ, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಘಟನಾ ಸ್ಥಳದಲ್ಲಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸರು ಆರೋಪಿಯನ್ನು ಮನೆಯಿಂದ ಹೊರಗೆ ಕರೆದುಕೊಂಡು ಬರುತ್ತಿದ್ದಂತೆ ಸ್ಥಳದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಹಿಂದು ಸಂಘಟನೆಯ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಆರೋಪಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು.

ಇಂತಹ ಘಟನೆ ಘಟನೆ ಪದೇ ಪದೆ ನಡೆಯುತ್ತಿದ್ದರೂ ಪೊಲೀಸರು ಮೌನ ವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಳನಾಯಕನಕಟ್ಟೆ ಬಳಿ ಪದೇ ಪದೆ ಗೋಹತ್ಯೆ ಮಾಡಲಾಗುತ್ತಿದೆ. ಒಬ್ಬ ವ್ಯಕ್ತಿಯಿಂದ ಸಮಾಜದ ವಾತಾವರಣ ಹದಗೆಡುತ್ತಿದೆ. ಆರೋಪಿಗೆ ಜೈಲಿಗೆ ಹೋಗಿ ಬರುವುದು ಅಭ್ಯಾಸವಾಗಿದೆ. ಇಲಾಖೆ ಆತನ ವಿರುದ್ಧ ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ಹೋರಾಟ ರೂಪಿಸಲಾಗುತ್ತದೆ ಎಂದು ಬಿಜೆಪಿ ಮುಖಂಡ ಎಸ್.ಎನ್.ರಾಮಸ್ವಾಮಿ ವಿಜಯವಾಣಿಗೆ ತಿಳಿಸಿದರು.

Accused of killing two cows arrested

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...