Home namma chikmagalur ಕ್ರೀಡಾಕೂಟಗಳಲ್ಲಿ ಭಾಗವಹಿಸಿದಾಗ ಸದೃಢ ಆರೋಗ್ಯ
namma chikmagalurchikamagalurHomeLatest News

ಕ್ರೀಡಾಕೂಟಗಳಲ್ಲಿ ಭಾಗವಹಿಸಿದಾಗ ಸದೃಢ ಆರೋಗ್ಯ

Share
Share

ಚಿಕ್ಕಮಗಳೂರು:  ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ದಸರಾ ಕ್ರೀಡಾಕೂಟಗಳಲ್ಲಿ ಭಾಗವಹಿಸಿದಾಗ ಸದೃಢ ಆರೋಗ್ಯವಂತರಾಗಲು ಸಹಕಾರಿ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು.

ಅವರು ಇಂದು ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಮತ್ತಿತರೆ ಇಲಾಖೆಗಳ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ ದಸರಾ ಕ್ರೀಡಾಕೂಟದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕಳೆದ ೨೫ ವರ್ಷಗಳಿಂದ ವೈವಿದ್ಯಮಯವಾಗಿ ವಿಜೃಂಭಣೆಯಿಂದ ನಡೆಯುತ್ತಿದ್ದ ದಸರಾ ಕ್ರೀಡಾಕೂಟ ಇತ್ತೀಚೆಗೆ ಕಳೆಗುಂದಿದೆ ಎಂದು ವಿಷಾಧಿಸಿದ ಅವರು, ಈ ಕ್ರೀಡಾಕೂಟ ತಾಲ್ಲೂಕು, ಜಿಲ್ಲಾ , ವಿಭಾಗ ಮಟ್ಟದ ನಂತರ ರಾಜ್ಯಮಟ್ಟದ ಕ್ರೀಡಾಕೂಟ ದಸರಾ ಸಂದರ್ಭದಲ್ಲಿ ಮೈಸೂರಿನಲ್ಲಿ ನಡೆಯಲಿದೆ ಎಂದರು.

ಧಾರ್ಮಿಕವಾಗಿ ಇತಿಹಾಸ ಇರುವ ದಸರಾ ಕ್ರೀಡಾಕೂಟ ಮೈಸೂರಿನಲ್ಲಿ ವಿಜಯ ದಶಮಿ ದಿನ ಚಾಮುಂಡೇಶ್ವರಿ ದಸರಾ ಮಹೋತ್ಸವದ ಅಂಗವಾಗಿ ರಾಜ್ಯಾದ್ಯಂತ ನಡೆಯುತ್ತಿದೆ. ತೀರ್ಪುಗಾರರು ಪ್ರಾಮಾಣಿಕವಾಗಿ ತೀಪು ನೀಡಿ, ಸಮಸ್ತರನ್ನು ಆಯ್ಕೆಮಾಡಬೇಕೆಂದು ಮನವಿ ಮಾಡಿದರು.

ದುಷ್ಟ ಶಕ್ತಿಗಳನ್ನು ಸಂಹಾರ ಮಾಡಲು ಎಲ್ಲಾ ದೇವತೆಗಳು ತಮ್ಮ ಶಕ್ತಿಯನ್ನು ಧಾರೆಯೆರೆದು ಚಾಮುಂಡೇಶ್ವರಿಗೆ ಕೊಡುತ್ತಾರೆ. ಈ ದುಷ್ಟಶಕ್ತಿ ಸಂಹಾರ ಹಿಂದಿನ ಕಾಲದಲ್ಲಿ ಮಾತ್ರ ಇರದೆ ಈಗಾಲೂ ಬೇರೆ ಬೇರೆ ರೂಪದಲ್ಲಿ ನಮ್ಮ ನಡುವೆ ಇದ್ದಾರೆ ಎಂದು ಹೇಳಿದರು.

ಗ್ರಾಮೀಣ ಕ್ರೀಡೆಗಳು ಈ ದಸರಾ ಕ್ರೀಡಾಕೂಟದಲ್ಲಿ ಹೆಚ್ಚು ಪ್ರೋತ್ಸಾಹಿಸುವ ಜೊತೆಗೆ ಕಬ್ಬಡ್ಡಿ, ಖೋಖೋ, ಲಾಂಗ್ ಜಂಪ್, ಹೈ ಜಂಪ್, ಗುಂಡು ಎಸೆತ ಮುಂತಾದವುಗಳು ನಶಿಸುತ್ತಿರುವ ಈ ಸಂದರ್ಭದಲ್ಲಿ ಅವುಗಳನ್ನು ಉಳಿಸಿ ಬೆಳೆಸಲು ಜಿಲ್ಲಾಡಳಿತ ಮತ್ತು ಕ್ರೀಡಾ ಇಲಾಖೆ ಮುಂದಾಗಬೇಕೆಂದು ಸೂಚಿಸಿದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮಾತನಾಡಿ, ನಾಡಹಬ್ಬ ದಸರಾ ಉತ್ಸವಕ್ಕೆ ಧಾರ್ಮಿಕ, ಚಾರಿತ್ರಿಕ ಇತಿಹಾಸ ಇದೆ. ವಿಜಯನಗರ ಸಾಮ್ರಾಜ್ಯದ ಅವಧಿಯಲ್ಲಿ ದಸರೆ ಕೇಂದ್ರ ಬಿಂದುವಾಗಿದ್ದು, ಹೊರದೇಶಗಳಿಂದ ಸಾಂಸ್ಕೃತಿಕ ನಗರಿ ಮೈಸೂರಿಗೆ ಬಂದ ಪ್ರವಾಸಿಗರು ದಸರಾ ಕ್ರೀಡಾಕೂಟವನ್ನು ವೈಭವೀಕರಿಸಿದ್ದನ್ನು ನೋಡಿದ್ದೇವೆ ಎಂದರು.

ನಮ್ಮೊಳಗಿರುವ ಅಸುರ ಶಕ್ತಿ ದಮನಗೊಳಿಸಲು ಸಜ್ಜನ ಶಕ್ತಿ ವಿಜಯವಾಗಬೇಕು, ಅಸುರ ದಹನವಾಗಬೇಕು. ಆ ರೀತಿ ಪೌರಾಣಿಕ, ಧಾರ್ಮಿಕ ಹಿನ್ನೆಲೆಯಾದರೆ ದಸರಾ ಕ್ರೀಡಾಕೂಟವನ್ನು ವಿಜಯನಗರ ಸಾಮ್ರಾಜ್ಯ ಪಥನದ ನಂತರ ಮೈಸೂರು ಅರಸರು ಅದರ ಪರಂಪರೆಯನ್ನು ದಸರಾ ಕ್ರೀಡಾಕೂಟದ ನೆಪದಲ್ಲಿ ನಡೆಸುತ್ತಿದ್ದಾರೆಂದು ವಿವರಿಸಿದರು.

ಯುವಕರು ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಿ ಮನರಂಜನೆಯ ಜೊತೆಗೆ ಗರಡಿ ಮನೆಗಳಲ್ಲಿ ದೈಹಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಕಾರಣವಾಗಿದೆ. ಈ ಮೂಲಕ ತರಬೇತಿ ನೀಡಿ ಸೈನ್ಯಕ್ಕೆ ಆಯ್ಕೆಮಾಡುವ ಪ್ರತೀತಿ ಇತ್ತು ಎಂದು ಹೇಳಿದರು.

ಪ್ರತಿಯೊಬ್ಬರಲ್ಲಿ ಗೆಲುವಿನ ಹಂಬಲ, ಆತ್ಮವಿಶ್ವಾಸ ಮೂಡಿಸುವ ಈ ದಸರಾ ಕ್ರೀಡಾಕೂಟ ಕ್ರೀಡೆಯ ಜೊತೆಗೆ ಬದುಕಿನಲ್ಲಿ ಹಂಬಲ ಮೂಡಿಸಲು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಮೊತ್ತೋರ್ವ ವಿಧಾನ ಪರಿಷತ್ ಸದಸ್ಯ ಎಸ್.ಭೋಜೇಗೌಡ ಮಾತನಾಡಿ, ಸೋಲೇ ಗೆಲುವಿನ ಮೆಟ್ಟಿಲು ಎಂಬಂತೆ ತಮ್ಮ ಪ್ರತಿಭೆ ಹೊರಬರುವಲ್ಲಿ ಈ ಕ್ರೀಡಾಕೂಟ ಯಶಸ್ವಿಯಾಗಲಿ, ಎಲ್ಲಾ ಕ್ರೀಡಾಪಟುಗಳಲ್ಲಿ ಸಾಧನೆ ಮಾಡುತ್ತೇನೆ ಎಂಬ ಛಲದೊಂದಿಗೆ ಮುನ್ನಡೆಯಿರಿ ಎಂದು ಕಿವಿಮಾತು ಹೇಳಿದರು.
ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರಾದ ಮಂಜುಳಹುಲ್ಲಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.

Good health after participating in sports events

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...