Home namma chikmagalur ದಸಂಸ ಪದಾಧಿಕಾರಿಗಳಿಗೆ ಅವಹೇಳನ ಕ್ಷಮೆಯಾಚಿಸಬೇಕು
namma chikmagalurchikamagalurHomeLatest News

ದಸಂಸ ಪದಾಧಿಕಾರಿಗಳಿಗೆ ಅವಹೇಳನ ಕ್ಷಮೆಯಾಚಿಸಬೇಕು

Share
Share

ಚಿಕ್ಕಮಗಳೂರು: ದಲಿತ ಸಂಘರ್ಷ ಸಮಿತಿ ಮತ್ತು ಪದಾಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ವಕೀಲ ಅನಿಲ್‌ಕುಮಾರ್ ಕ್ಷಮೆಯಾಚಿಸಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ್ ಆಗ್ರಹಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಲ್ಲಂಪುರ ಓಂಕಾರಮೂರ್ತಿ ಮೇಲಿನ ಹಲ್ಲೆ ಪ್ರಕರಣವನ್ನು ಮುಚ್ಚಿಹಾಕುವ ಹಿನ್ನಲೆ ದಲಿತ ಸಂಘಟನೆ ಮತ್ತು ಪದಾಧಿಕಾರಿಗಳ ವಿರುದ್ಧ ಆರೋಪ ಮಾಡಿದ್ದಾರೆ. ಇದನ್ನು ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದರು.

ಹಲ್ಲೆ ಪ್ರಕರಣ ಸಂಬಂಧ ಬಿ ರಿಪೋರ್ಟ್ ಆಗಿದೆ. ಕಾನೂನು ವ್ಯವಸ್ಥೆಯಲ್ಲಿ ಪ್ರಕರಣ ಮುಕ್ತಾಯವಾಗಿಲ್ಲ, ದೂರು ಕೊಟ್ಟಿರುವುದು ಓಂಕಾರಮೂರ್ತಿ, ಪ್ರಕರಣ ದಾಖಲು ಮಾಡಿರುವುದು ಪೊಲೀಸ್ ಇಲಾಖೆ, ನೊಂದವರ ಬೆಂಬಲಕ್ಕೆ ನಿಂತಿರುವುದು ಸಂಘಟನೆಯವರು ಸಂಘಟನೆಗಳ ವಿರುದ್ಧ ಮಾತನಾಡಿರುವ ಅವರ ನಡವಳಿಕೆ ನೋಡಿದರೆ ತಪ್ಪಿತಸ್ಥನಾಗಿರಬಹುದು ಎಂಬ ಅನುಮಾನ ಮೂಡುತ್ತದೆ ಎಂದು ಟೀಕಿಸಿದರು.

ದಲಿತ ಸಂಘರ್ಷ ಸಮಿತಿ ಕೆಲವು ಮುಖಂಡರನ್ನು ಉದ್ದೇಶಿಸಿ ಗಡಿಪಾರು ಮಾಡುವಂತೆ ಜಿಲ್ಲಾಡಳಿತಕ್ಕೆ ಗಡುವು ನೀಡಿದ್ದು, ನಮ್ಮ ಮೇಲೆ ಯಾವ ಗುರುತರವಾದ ಪ್ರಕರಣವಿದೆ ಎಂದು ಗಡಿಪಾರು ಮಾಡಬೇಕು ಎಂದು ಪ್ರಶ್ನಿಸಿದ ಅವರು, ಓಂಕಾರಮೂರ್ತಿ ಪ್ರಕರಣ ದಿಕ್ಕುತಪ್ಪಿಸಲು ಆರೋಪ ಮಾಡುತ್ತಿದ್ದಾರೆ ಎಂದ ಅವರು, ದಲಿತ ಸಂಘಟನೆಗಳ ಬಗ್ಗೆ ಜವಾಬ್ದಾರಿಯಿಂದ ಮಾತನಾಡಬೇಕು. ಅವರು ಆಡಿರುವ ಮಾತುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.

ದಲಿತ ಮುಖಂಡರಾದ ರುದ್ರಸ್ವಾಮಿ, ಕೆ.ಟಿ.ರಾಧಾಕೃಷ್ಣ, ಬಿ.ಬಿ.ನಿಂಗಯ್ಯ ಅವರ ಕ್ಷಮೆ ಕೇಳಬೇಕು. ಒಂದು ವೇಳೆ ಕೇಳದಿದ್ದಲ್ಲಿ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರಾದ ಕೃಷ್ಣಮೂರ್ತಿ, ಮರ್ಲೆ ಅಣ್ಣಯ್ಯ, ಸಂತ್ರಸ್ಥ ಓಂಕಾರಮೂರ್ತಿ, ಪತ್ನಿ ಧನಲಕ್ಷ್ಮೀ, ರಘು, ಸಂತೋಷ್, ಮಂಜಯ್ಯ, ಇಂದಿರಮ್ಮ ಇದ್ದರು.

Dasamsa office bearers should apologize for insults

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...