Home namma chikmagalur ಈದ್ ಮಿಲಾದ್ ಹಬ್ಬ ಪ್ರಯುಕ್ತ ವಿದ್ಯಾರ್ಥಿಗಳಿಗೆ ಕಲಿಕಾ ವಸ್ತು ವಿತರಣೆ
namma chikmagalurchikamagalurHomeLatest News

ಈದ್ ಮಿಲಾದ್ ಹಬ್ಬ ಪ್ರಯುಕ್ತ ವಿದ್ಯಾರ್ಥಿಗಳಿಗೆ ಕಲಿಕಾ ವಸ್ತು ವಿತರಣೆ

Share
Share

ಚಿಕ್ಕಮಗಳೂರು:  ಪ್ರವಾದಿ ಮೊಹಮ್ಮದ್ ಪೈಗಂಬರ್ ಜನ್ಮದಿನ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಮೊಹರಂ ಚಾರಿಟೆಬಲ್ ಟ್ರಸ್ಟ್ ಹಾಗೂ ಮೊಹರಂ ಮುಜವರ್ ಕಮಿಟಿ ವತಿಯಿಂದ ನಗರದ ತಮಿಳು ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಲೇಖನಿ ಪರಿಕರ, ನೋಟ್‌ಪುಸ್ತಕ ವಿತರಿಸುವ ಮೂಲಕ ಶನಿವಾರ ಅರ್ಥಪೂರ್ಣವಾಗಿ ಆಚರಿಸಿದರು.

ಈ ವೇಳೆ ಮಾತನಾಡಿದ ಮೊಹರಂ ಮುಜಾವರ್ ಕಮಿಟಿ ಅಧ್ಯಕ್ಷ ವಜೀರ್ ಅಹಮದ್ ಈದ್ ಮಿಲಾದ್ ಹಬ್ಬವು ಮುಸಲ್ಮಾನರ ಪ್ರಮುಖ ಹಬ್ಬಗಳಲ್ಲಿ ಒಂದಾಗಿದ್ದು ಈ ದಿನವನ್ನು ಪ್ರವಾದಿಯವರ ದಯೆ, ಸಹಾನುಭೂತಿ ಮತ್ತು ಶಾಂತಿಯ ಬೋಧನೆಗಳನ್ನು ನೆನಪಿಸಿಕೊಳ್ಳುವ ಮತ್ತು ಗೌರವಿಸುವ ದಿನವೆಂ ದು ಪರಿಗಣಿಸಲಾಗಿದೆ ಎಂದರು.

ಸದಸ್ಯ ರಾಹಿಲ್ ಪಾ? ಮಾತನಾಡಿ ಪ್ರತಿಯೊಬ್ಬರೂ ಈದ್ ಮಿಲಾದ್ ಹಬ್ಬವನ್ನು ವಿವಿಧ ರೀತಿ ಯಲ್ಲಿ ಆಚರಿಸುತ್ತಾರೆ. ಆದರೆ ನಾವು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಲಿಕಾ ವಸ್ತುಗಳನ್ನು ನೀಡುವುದರ ಮೂಲಕ ಈದ್ ಮಿಲಾದ್ ಹಬ್ಬವನ್ನು ಆಚರಿಸಿ ಪ್ರೇರಣೆಯಾಗುತ್ತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಕಮಿಟಿ ಸದಸ್ಯರಾದ ಅಝರ್ ಪಾ?, ಮೊಹಮ್ಮದ್ ಖಾಸಿಂ, ನಾಸಿರ್, ಸಲ್ಮಾನ್, ಇರ್ಫಾನ್, ಅಸ್ಲಾಂ, ಅಕ್ಬರ್, ಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Distribution of learning materials to students on the occasion of Eid Milad

Share

Leave a comment

Leave a Reply

Your email address will not be published. Required fields are marked *

Don't Miss

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ ಕುರಿತು ಮಹಿಳೆಯೊಬ್ಬರುಕಡೂರು ಪೊಲೀಸರಿಗೆ ಗುರುವಾರ ದೂರು ನೀಡಿದ್ದಾರೆ. ತಾಲೂಕಿನ ಚಿಕ್ಕಪಟ್ಟಣಗೆರೆಯ ಸುನಂದ ಟಿ.ಎಂ. ಎಂಬವರು...

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ, ಮುತ್ತಿನಕೊಪ್ಪ, ಎನ್.ಆರ್.ಪುರ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಹರಿಹರಪುರ, ಶೃಂಗೇರಿ ರೈಲ್ವೆ ಮಾರ್ಗವನ್ನು ಪ್ರಮುಖವಾಗಿ ಪರಿಗಣಿಸಬೇಕು...

Related Articles

ಮಾಧ್ಯಮ ಕ್ಷೇತ್ರ ಶಾಸಕಾಂಗ-ಕಾರ್ಯಾಂಗ-ಸಾರ್ವಜನಿಕರ ನಡುವೆ ಸೇತುವೆ

ಚಿಕ್ಕಮಗಳೂರು:  ಮಾಧ್ಯಮ ಕ್ಷೇತ್ರ ಪ್ರಜಾಪ್ರಭುತ್ವದ ನಾಲ್ಕನೆ ಅಂಗ ಎಂಬ ಮಾತು ಅಕ್ಷರಶಃ ಸತ್ಯ. ಸರಕಾರಗಳ ಯೋಜನೆಗಳ...

ರಕ್ತಕ್ಕೆ ಪರ್ಯಾಯ ವ್ಯವಸ್ಥೆಗಳಿಲ್ಲ ಅವಶ್ಯಕತೆ ಅರಿತು ರಕ್ತದಾನ ಮಾಡಬೇಕು

ಚಿಕ್ಕಮಗಳೂರು:  ರಕ್ತಕ್ಕೆ ಪರ್ಯಾಯ ವ್ಯವಸ್ಥೆಗಳಿಲ್ಲ. ಈ ದಿಸೆಯಲ್ಲಿ ರಕ್ತದ ಅವಶ್ಯಕತೆ ಅರಿತು ರಕ್ತದಾನ ಮಾಡಬೇಕು. ಇದು...

ಭೂದಾನ-ಗೋದಾನ-ಅನ್ನದಾನಕ್ಕಿಂತ ಮತದಾನ ಶ್ರೇಷ್ಠ

ಚಿಕ್ಕಮಗಳೂರು:  ಭೂದಾನ, ಗೋದಾನ, ಅನ್ನದಾನಕ್ಕಿಂತ ಸಮಾಜದ ನಾಗರೀಕರಿಗೆ ಮ ತದಾನ ಸರ್ವಶ್ರೇಷ್ಟ. ಆಸೆ-ಆಕಾಂಕ್ಷೆಗಳಿಗೆ ಒಳಗಾಗದೇ ಪ್ರಜೆಗಳ...

ಮರದಿಂದ ಬಿದ್ದು ಕಾರ್ಮಿಕ ಸಾವು

ಕಳಸ: ಮರದಿಂದ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಾಫಿ ಎಸ್ಟೇಟ್...