Home Latest News ಸರ್ ಎಂ ವಿ ದೇಶಕ್ಕೆ ನೀಡಿರುವ ಕೊಡುಗೆ ಮುಂದಿನ ಪೀಳಿಗೆಗೆ ಉತ್ತಮ ಸಂದೇಶ
Latest NewschikamagalurHomenamma chikmagalur

ಸರ್ ಎಂ ವಿ ದೇಶಕ್ಕೆ ನೀಡಿರುವ ಕೊಡುಗೆ ಮುಂದಿನ ಪೀಳಿಗೆಗೆ ಉತ್ತಮ ಸಂದೇಶ

Share
Share

ಚಿಕ್ಕಮಗಳೂರು : ಸರ್ ಎಂ ವಿಶ್ವೇಶ್ವರಯ್ಯನವರು ದೇಶಕ್ಕೆ ನೀಡಿರುವ ಕೊಡುಗೆಗಳು ಮುಂದಿನ ಪೀಳಿಗೆಗೆ ಸರ್ವೋತ್ತಮ ಸಂದೇಶವಾಗಿದೆ ಎಂದು ಕರ್ನಾಟಕ ಇಂಜಿನಿಯರ್‌ಗಳ ಫೆಡರೇಷನ್ ಅಧ್ಯಕ್ಷ ಹಾಗೂ ನಿವೃತ್ತ ಕಾರ್ಯಪಾಲಕ ಎಂಜಿನಿಯರ್ ಎಚ್.ಎಂ.ಶಿವಪ್ರಕಾಶ್ ಹೇಳಿದರು.

ಅವರು ನಗರದ ಪಿಡಬ್ಲ್ಯೂಡಿ ಕಚೇರಿ ಆವರಣದಲ್ಲಿ ಕರ್ನಾಟಕ ಇಂಜಿನಿಯರ್‌ಗಳ ಫೆಡರೇಷನ್ ಹಾಗೂ ಇಂಜಿನಿಯರ್‌ಗಳ ಸೇವಾ ಸಂಘ ಸೋಮವಾರ ಹಮ್ಮಿಕೊಂಡಿದ್ದ ಸರ್‌ಎಂವಿ ಅವರ ೧೬೫ನೇ ಜನ್ಮದಿನಾಚರಣೆ ಯಲ್ಲಿ ವಿಶ್ವೇಶ್ವರಯ್ಯನವರ ಪುತ್ಥಳಿಗೆ ಪುಷ್ಪಾರ್ಪಣೆ ಮಾಡಿ ಮಾತನಾಡಿದರು.

ಕರ್ತವ್ಯನಿಷ್ಟೆ, ಪ್ರಾಮಾಣಿಕತೆಗೆ ಹೆಸರಾಗಿದ್ದ ವಿಶ್ವೇಶ್ವರಯ್ಯನವರ ಆದರ್ಶ ವ್ಯಕ್ತಿತ್ವವನ್ನು ಶಿಕ್ಷಣದಲ್ಲಿ ಅಳವಡಿಸಿದರೆ ಮುಂದಿನ ಪೀಳಿಗೆಯ ಮಕ್ಕಳ ಭವಿಷ್ಯ ಉಜ್ವಲವಾಗಲು ಸಹಕಾರಿಯಾಗುತ್ತದೆ. ಇಂಜಿನಿಯರಿಂಗ್ ನಲ್ಲಿ ಹೊಸ ಆವಿಷ್ಕಾರಗಳನ್ನು ತಂದು ಅದರೊಂದಿಗೆ ನೀರಾವರಿ ಯೋಜನೆಗಳು, ಬೃಹತ್ ಡ್ಯಾಂ ನಿರ್ಮಾಣ, ಇರಿಗೇಶನ್ ನಿರ್ವಹಣೆ ಮಾಡಿದಲ್ಲಿ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಜೊತೆ ದೇಶದ ಪ್ರಗತಿಗೆ ಪೂರಕವಾಗಿರುತ್ತದೆ ಎಂದರು.

ಕೇಂದ್ರ ಸರ್ಕಾರ ಈಗಾಗಲೆ ದೇಶದಲ್ಲಿ ಉತ್ತಮ ಹೈವೇ ರಸ್ತೆಗಳನ್ನು ನಿರ್ಮಿಸುತ್ತಿದ್ದು ಈ ಸಂಬಂಧ ಭಾರತ್ ಮಾಲಾ ಯೋಜನೆಯಡಿ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೂ ಕ್ವಾಟರ್‌ಲ್ಯಾಂಗಲ್ ರಸ್ತೆಗಳನ್ನು ನಿರ್ಮಿಸಿ ಅಭಿವೃದ್ದಿಯತ್ತ ಹೆಜ್ಜೆ ಹಾಕುತ್ತಿದೆ. ಇದೇರೀತಿ ಪಶ್ಚಿಮಘಟ್ಟಗಳು ಅಭಿವೃದ್ದಿ ಹೊಂದಲು ರಾಯಚೂರು-ಮಂಗಳೂರು ಹೆದ್ದಾರಿ ಕಾರಿಡಾರ್‌ನ್ನು ನಿರ್ಮಿಸಲು ಮುಂದಾದಲ್ಲಿ ದಕ್ಷಿಣ ಭಾರತದಲ್ಲಿ ಉತ್ತಮ ಸಂಚಾರ ವ್ಯವಸ್ಥೆಗೆ ಅನುಕೂಲವಾಗಲಿದೆ.

ಕೈಗಾರಿಕೆಗಳ ಸ್ಥಾಪನೆಗೆ ಅನುಕೂಲವಾಗುವಂತೆ ಸರ್ ಎಂ ವಿ ಅವರು ಹಲವಾರು ಯೋಜನೆ ಹಮ್ಮಿಕೊಂಡು ಭದ್ರಾವತಿ ಕಬ್ಬಿಣದ ಅದಿರು ಕಾರ್ಖಾನೆ ಅಭಿವೃದ್ದಿಗೆ ಒತ್ತುಕೊಟ್ಟಿದ್ದರು ಅದು ಸ್ಥಗಿತಗೊಂಡಿದ್ದರೂ ಸಹ ಪುನಃ ಅದನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಭಿಪ್ರಾಯಿಸಿದ್ದು ಎಲ್ಲೆಡೆ ರಸ್ತೆಗಳು ಅಭಿವೃದ್ದಿಯಾದಲ್ಲಿ ಶಿಕ್ಷಣ, ವೈದ್ಯಕೀಯ ಮತ್ತು ಕೃಷಿ ಅಭಿವೃದ್ದಿಗೆ ಪೂರಕವಾಗುತ್ತದೆ ಎಂದರು.

ಇಂಜಿನಿಂiiರ್‌ಗಳಾ ಇಂಜಿನಿಯರ್ ಗಳಾದ ಮಲ್ಲಿಕಾರ್ಜುನ್, ಗವಿರಂಗಪ್ಪ, ವೇಣುಗೋಪಾಲ್,ದಾವೂದ್ ಇದ್ದರು.

Sir MV’s contribution to the country is a good message for the next generation.

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...