Home namma chikmagalur ಸೆ. ೨೪ ರಂದು ಡಾ. ಪುನೀತ್ ರಾಜ್‌ಕುಮಾರ್ ಪುತ್ಥಳಿ ಅನಾವರಣ
namma chikmagalurchikamagalurHomeLatest News

ಸೆ. ೨೪ ರಂದು ಡಾ. ಪುನೀತ್ ರಾಜ್‌ಕುಮಾರ್ ಪುತ್ಥಳಿ ಅನಾವರಣ

Share
Share

ಚಿಕ್ಕಮಗಳೂರು:  ನಗರದ ಹೃದಯ ಭಾಗದಲ್ಲಿರುವ ಆಜಾದ್ ಪಾರ್ಕ್ ವೃತ್ತದಲ್ಲಿ ಸೆ. ೨೪ ರಂದು ಕರ್ನಾಟಕ ರತ್ನ, ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್ ಅವರ ಪುತ್ಥಳಿ ಅನಾವರಣ ಸಮಾರಂಭ ನಡೆಯಲಿದೆ ಎಂದು ವಿಸ್ಟಾರ್ ವೆಲ್ನೆಸ್ ಪ್ರೈ.ಲೀ.ನ ವ್ಯವಸ್ಥಾಪಕ ನಿರ್ದೇಶಕ ಡಾ. ಅಫ್ಸರ್ ಹಿಂದೂಸ್ತಾನಿ ಅವರು ಹೇಳಿದ್ದಾರೆ.

ಅಂದು ಸಂಜೆ ೫.೩೦ ಕ್ಕೆ ಆಜಾದ್ ಪಾರ್ಕ್ ವೃತ್ತದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಜಿಲ್ಲಾ ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಐ.ಕೆ. ಓಂಕಾರೇಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ನಿರ್ಮಾಪಕಿ ಶ್ರೀಮತಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಪುತ್ಥಳಿ ಅನಾವರಣ ಮಾಡಲಿದ್ದಾರೆ. ಶಾಸಕ ಎಚ್.ಡಿ. ತಮ್ಮಯ್ಯ ಅವರು ಕನ್ನಡ ಧ್ವಜ ಅರೋಹಣ ಮಾಡಲಿದ್ದು, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಗುರುವಾರ ಸುದ್ಧಿಗೋಷ್ಠಿಯಲ್ಲಿ ತಿಳಿಸಿದರು.

ಚಿತ್ರಕಲಾ ಪರಿಷತ್ನ ಅಧ್ಯಕ್ಷ ಡಾ.ಬಿ.ಎಲ್. ಶಂಕರ್ ಅವರು ಅಭಿನಂದನಾ ಭಾಷಣ ಮಾಡಲಿದ್ದಾರೆ. ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪುನೀತ್ ರಾಜ್‌ಕುಮಾರ್ ರವರಿಗೆ ನುಡಿ ನಮನ ಸಲ್ಲಿಸಲಿದ್ದಾರೆ. ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರು ಡಾ. ರಾಜ್‌ಕುಮಾರ್ ಅವರ ಭಾವಚಿತ್ರ ಅನಾವರಣಗೊಳಿಸಿದ್ದಾರೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್, ವಿಧಾಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಸಂಸದ ಖೋಟಾ ಶ್ರೀನಿವಾಸ್ ಪೂಜಾರಿ ಹಾಗೂ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ತಾಲೂಕು ಮಟ್ಟದ ಕ್ರೀಡಾಕೂಟ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ, ನಗರಸಭೆ ಚಿಕ್ಕಮಗಳೂರು, ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಚಿಕ್ಕಮಗಳೂರಿನ ವಿದ್ಯಾಭಾರತಿ ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ಸೆ. ೨೦ ರಂದು ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಚಿಕ್ಕಮಗಳೂರು ತಾಲೂಕು ಮಟ್ಟದ ೧೭ ವರ್ಷ ವಯೋಮಾನದೊಳಗಿನ ಮಕ್ಕಳ ೨೦೨೫-೨೬ ನೇ ಸಾಲಿನ ಕ್ರೀಡಾಕೂಟ ನಡೆಯಲಿದೆ ಎಂದು ಅಫ್ಸರ್ ಅವರು ಹೇಳಿದರು.

ಅಂದು ಬೆಳಿಗ್ಗೆ ೮.೩೦ ಕ್ಕೆ ಆರಂಭವಾಗಲಿರುವ ಕ್ರೀಡಾಕೂಟವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರು ಉದ್ಘಾಟಿಸಲಿದ್ದಾರೆ. ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ, ವಿಧಾಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಶಾಸಕ ಟಿ.ಡಿ. ರಾಜೇಗೌಡ, ವಿಧಾನಪರಿಷತ್ ಸದಸ್ಯರಾದ ಡಾ. ಅರತಿ ಕೃಷ್ಣ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಶ್ರೀನಿವಾಸ್ ಉಪಸ್ಥಿತಿ ಇರಲಿದ್ದು, ಶಾಸಕ ಎಚ್.ಡಿ. ತಮ್ಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ, ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಅವರು ಉಪಸ್ಥಿತಿ ಇರಲಿದ್ದಾರೆ ಎಂದರು.

ಚಿಕ್ಕಮಗಳೂರು ನಗರದ ಗೌರಿ ಕಾಲುವೆಯಲ್ಲಿ ೨೦೦೨ ರಲ್ಲಿ ಸ್ಥಾಪನೆಗೊಂಡ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲಾಗುತ್ತಿದ್ದು, ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆ ಸತತವಾಗಿ ಮೂರು ವರ್ಷಗಳ ಕಾಲ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. ೧೦೦ ರಷ್ಟು ಫಲಿತಾಂಶ ಪಡೆದುಕೊಂಡಿದೆ. ಈ ಕಾರಣಕ್ಕಾಗಿ ಶಿಕ್ಷಣ ಇಲಾಖೆ ಸೆ. ೮ ರಂದು ನಡೆದ ಸಮಾರಂಭದಲ್ಲಿ ಅಭಿನಂದನಾ ಪತ್ರ ನೀಡಿ ಪ್ರಶಂಸಿದೆ ಎಂದು ಹೇಳಿದರು.

ತಮ್ಮ ಮಾಲೀಕತ್ವದ ವಿಸ್ಟಾರ್ ವೆಲ್ನೆಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ೨೦೧೯ ರಲ್ಲಿ ಸ್ಥಾಪನೆ ಮಾಡಲಾಗಿದ್ದು, ವ್ಯಾಪಾರ ವಲಯದಲ್ಲಿ ಉತ್ತಮ ಸಾಧನೆ ಮಾಡಿದೆ. ಈ ಕಾರಣಕ್ಕಾಗಿ ಏಷ್ಯಾಟುಡೇ ಸಂಸ್ಥೆ ಸೆ. ೨೫ ರಂದು ಲಂಡನ್‌ನ ಹೌಸ್ ಆಫ್ ಲಾರ್ಡ್ಸ್ ನಲ್ಲಿ ನಡೆಯಲಿರುವ ಗ್ಲೋಬಲ್ ಲೀಡರ್ಸ್ ಶೃಂಗ- ೨೦೦೫ ರ ಸಮಾರಂಭದಲ್ಲಿ ವೆಲ್ಸೆಸ್ ಉತ್ಪನ್ನಗಳ ಪ್ರಮುಖ ತಯಾರಕರು ಪ್ರಶಸ್ತಿ ನೀಡಿ ಗೌರವಿಸಲಿದೆ ಎಂದರು.

ಸುದ್ಧಿಗೋಷ್ಠಿಯಲ್ಲಿ ವಿದ್ಯಾಭಾರತಿ ಆಂಗ್ಲ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಸಾಹಿರಾ ಫಾತಿಮಾ, ವಿಸ್ಟಾರ್ ವೆಲ್ನೆಸ್ ಪ್ರೈ.ಲೀ.ನ ಪ್ರಧಾನ ವ್ಯವಸ್ಥಾಪಕ ಎಂ.ಆರ್. ಸೋಮಶೇಖರ್, ಹಣಕಾಸು ವಿಭಾಗದ ಮುಖ್ಯಸ್ಥ ಸಿ.ಆರ್. ಮಂಜುನಾಥ್ ಉಪಸ್ಥಿತರಿದ್ದರು.

On September 24 Dr. Puneeth Rajkumar statue unveiled

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...