Home namma chikmagalur ಬೀದಿನಾಯಿಗಳ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮ
namma chikmagalurchikamagalurHomeLatest News

ಬೀದಿನಾಯಿಗಳ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮ

Share
Share

ಚಿಕ್ಕಮಗಳೂರು: ನಗರದಲ್ಲಿ ಬೀದಿನಾಯಿಗಳ ಉಪಟಳದಿಂದಾಗಿ ಹಲವಾರು ಮಕ್ಕಳು, ನಾಗರಿಕರನ್ನು ಕಚ್ಚಿ ಗಾಯಗೊಳಿಸಿರುವುದನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭಾಧ್ಯಕ್ಷೆ ಶೀಲಾದಿನೇಶ್ ತಿಳಿಸಿದರು.

ಅವರು ನಗರಸಭೆ ಆವರಣದಲ್ಲಿ ಆಯೋಜಿಸಲಾಗಿದ್ದ ಪಶುಪಾಲನಾ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಬೀದಿನಾಯಗಳ ನಿಯಂತ್ರಣ ಕುರಿತ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬೀದಿನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಅಗತ್ಯ ನಿಯಂತ್ರಣಕ್ಕೆ ಬೇಕಾದ ಮುಂಜಾಗ್ರತಾ ಕ್ರಮ ಕೈಗೊಳ್ಳುವುದರ ಬಗ್ಗೆ ಈ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ನಗರಸಭೆ ಸದಸ್ಯರು ತಮ್ಮ ವಾರ್ಡ್‌ಗಳಲ್ಲಿ ಬೀದಿನಾಯಿಗಳ ಉಪಟಳದಿಂದಾಗಿ ಮಕ್ಕಳು ಮತ್ತು ನಾಗರಿಕರಿಗೆ ಬಹಳ ತೊಂದರೆಯಾಗುತ್ತಿದೆ ಎಂದು ಬಂದ ದೂರುಗಳ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದರ ಬಗ್ಗೆ ಸೂಕ್ತ ನಿರ್ಧಾರಕ್ಕೆ ಬರಲಾಗಿದೆ ಎಂದರು.

ಪೌರಾಯುಕ್ತ ಬಿ.ಸಿ. ಬಸವರಾಜ್ ಮಾತನಾಡಿ, ಬೀದಿನಾಯಿಗಳ ಉಪಟಳಕ್ಕೆ ಕಡಿವಾಣ ಹಾಕುವ ದೃಷ್ಟಿಯಿಂದ ನಗರಸಭೆ ಮತ್ತು ಸ್ಥಳೀಯ ಸಂಘಸಂಸ್ಥೆಗಳನ್ನು ಒಳಗೊಂಡಂತೆ ಈ ಕುರಿತು ಆರು ಬಾರಿ ಟೆಂಡರ್ ಕರೆಯಲಾಗಿದ್ದು, ಯಾರೂ ಭಾಗವಹಿಸಿಲ್ಲ. ತರೀಕೆರೆಯಲ್ಲಿ ೨, ಕಡೂರಿನಲ್ಲಿ ೨ ಬಾರಿ ಟೆಂಡರ್ ಕರೆದಿದ್ದರೂ ಯಾರೂ ಭಾಗವಹಿಸುತ್ತಿಲ್ಲ ಎಂದು ವಿಷಾಧಿಸಿದರು.

ಬೆಂಗಳೂರಿನ ಡಬ್ಲೂಬಿಎನ್‌ಎಸ್ ಸಂಸ್ಥೆ ಈಗ ಮುಂದೆ ಬಂದಿದ್ದು, ಪಶುಪಾಲನಾ ಇಲಾಖೆಯ ಸಹಯೋಗದಲ್ಲಿ ಆರೋಗ್ಯಪೂರ್ಣ ಚರ್ಚೆ ನಡೆದಿದೆ. ನಾಯಿಗಳನ್ನು ಹಿಡಿಯುವ ಬಗ್ಗೆ ನಗರಸಭೆ ಪೌರ ಕಾರ್ಮಿಕರಿಗೆ ತರಬೇತಿ ನೀಡಿದರೆ ಈ ಸಮಸ್ಯೆಯನ್ನು ಸಂಪೂರ್ಣ ಹತೋಟಿಗೆ ತಂದು ನಿಯಂತ್ರಿಸಬಹುದಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳ ಗಮನ ಸೆಳೆಯಲಾಗಿದ್ದು, ಇದು ಒಳ್ಳೆಯ ಸಲಹೆ ಎಂದು ಹೇಳಿದ್ದಾರೆ ಎಂದರು.

ನಗರದಲ್ಲಿ ಎಬಿಸಿ ಕೇಂದ್ರಗಳನ್ನು ಸ್ಥಳೀಯ ಸಂಸ್ಥೆಗಳೇ ನಿರ್ಮಾಣ ಮಾಡುವ ನಿಟ್ಟಿನಲ್ಲಿ ವೈದ್ಯರ ನೇಮಕ ಮಾಡಿ ಕ್ರಮ ವಹಿಸುವುದಾಗಿ ಸಭೆಗೆ ಭರವಸೆ ನೀಡಿದರು.

ಬೀದಿನಾಯಿಗಳಿಗೆ ನಾಗರೀಕರು ಎಲ್ಲೆಂದರಲ್ಲಿ ಆಹಾರ ಹಾಕುತ್ತಿದ್ದಾರೆ. ಇದರಿಂದಾಗಿ ನಾಯಿಗಳು ಮಕ್ಕಳು, ಮಹಿಳೆಯರನ್ನು ಕಚ್ಚಿ ಗಾಯಗೊಳಿಸುತ್ತಿವೆ. ಮುಂದೆ ನಗರಸಭೆ ಆರೋಗ್ಯ ನಿರೀಕ್ಷಕರು ಗುರ್ತಿಸುವ ಸ್ಥಳದಲ್ಲಿ ಆಹಾರ ಹಾಕಬೇಕೆಂದು ಮನವಿ ಮಾಡಿದರು.
ಸಧ್ಯದಲ್ಲೇ ನಗರದಲ್ಲಿ ನಗರಸಭೆ ಸದಸ್ಯರನ್ನೊಳಗೊಂಡ ಸಭೆ ನಡೆಸಿ ಔಪಚಾರಿಕ ಚರ್ಚೆ ನಡೆಸಿ ಬೀದಿನಾಯಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ನಿರ್ಧಾರ ಕೈಗೊಳ್ಳಲಾಗುವುದೆಂದು ಹೇಳಿದರು.

ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಮೋಹನ್‌ಕುಮಾರ್ ಮಾತನಾಡಿ, ಬೀದಿನಾಯಿಗಳ ಉಪಟಳ ತಡೆಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ನಡೆಸಿ ಅವು ಇರುವ ಜಾಗಕ್ಕೆ ತಂದು ಬಿಡಬೇಕು ಎಂಬ ನಿಯಮವಿದೆ ಎಂದರು.

ನಗರದಲ್ಲಿ ಈಗಾಗಲೇ ೫ ಸಾವಿರ ಬೀದಿನಾಯಿಗಳಿವೆ ಎಂದು ಗುರ್ತಿಸಲಾಗಿದೆ. ಎಬಿಸಿ ಜೊತೆಗೆ ವ್ಯಾಕ್ಸಿನೇಷನ್ ಮಾಡಬೇಕು, ಇದಕ್ಕೆ ಮೂಲಭೂತ ಸೌಕರ್ಯದ ಅಗತ್ಯವಿದ್ದು, ಇಲಾಖೆಯಿಂದ ನಗರಸಭೆ ಸಹಕಾರ ನೀಡಿದರೆ ವಾರ್ಡ್‌ವಾರು ವ್ಯಾಕ್ಸಿನೇಷನ್ ನೀಡಲು ಬದ್ಧ ಎಂದು ಹೇಳಿದರು.

ಜಿಲ್ಲೆಯನ್ನು ರೇಬಿಸ್‌ನಿಂz ಮುಕ್ತಗೊಳಿಸಬೇಕಾದರೆ ಸರ್ವರೂ ಒಟ್ಟುಗೂಡಿ ಶ್ರಮಿಸಬೇಕಾದ ಅಗತ್ಯವಿದೆ. ಇದಕ್ಕೆ ಇಲಾಖೆ ಮತ್ತು ನಗರಸಭೆ ಪೌರ ಕಾರ್ಮಿಕರ ತಂಡದ ಅವಶ್ಯಕತೆಯೂ ಬಹಳ ಮುಖ್ಯ ಎಂದರು.ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಲಲಿತಾಬಾಯಿ ಉಪಸ್ಥಿತರಿದ್ದರು

Necessary precautionary measures to control stray dogs

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...