Home Latest News ಸುಟ್ಟು ಹೋದ ಟ್ರಾನ್ಸ್‌ಫಾರ್ಮರ್‌ 72 ಗಂಟೆಯೊಳಗೆ ರೈತರಿಗೆ ಸಿಗುತ್ತಿಲ್ಲ
Latest NewsHomenamma chikmagalurTarikere

ಸುಟ್ಟು ಹೋದ ಟ್ರಾನ್ಸ್‌ಫಾರ್ಮರ್‌ 72 ಗಂಟೆಯೊಳಗೆ ರೈತರಿಗೆ ಸಿಗುತ್ತಿಲ್ಲ

Share
Share

ತರೀಕೆರೆ: ಸುಟ್ಟು ಹೋದ ಟ್ರಾನ್ಸ್‌ಫಾರ್ಮರ್‌ 72 ಗಂಟೆಯೊಳಗೆ ರೈತರಿಗೆ ಸಿಗುತ್ತಿಲ್ಲ. ಪವರ್‌ಮೆನ್‌ಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ತುಂಡಾಗಿ ನೆಲಕ್ಕೆ ಬೀಳುತ್ತಿರುವ ಹಳೆಯ ವಿದ್ಯುತ್ ವೈರ್‌ಗಳನ್ನು ಬದಲಾಯಿಸುತ್ತಿಲ್ಲ. ಟಿ.ಸಿ ಸರಬರಾಜಿಗೆ ವಾಹನಗಳ ಕೊರತೆಯಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಮ್ಮಖದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ರೈತರು ಮತ್ತು ಸಾರ್ವಜನಿಕರು ಸಮಸ್ಯೆಗಳ ಸುರಿಮಳೆಗೈದರು.

ಭಾರತೀಯ ಕಿಸಾನ್ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಪರಮೇಶ್ವರಪ್ಪ ಮಾತನಾಡಿ, ಸುಟ್ಟ ಟಿ.ಸಿಗಳನ್ನು ದುರಸ್ತಿಪಡಿಸಿ 72 ಗಂಟೆಯೊಳಗೆ ರೈತರಿಗೆ ನೀಡಬೇಕು ಎಂಬ ನಿಯಮವನ್ನು ಮೆಸ್ಕಾಂ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ. ರಿಪೇರಿಯಾದ ಟಿ.ಸಿಗಳನ್ನು ರೈತರು ತಮ್ಮ ಖರ್ಚಿನಲ್ಲಿಯೇ ತೆಗೆದುಕೊಂಡು ಹೋದರೂ ಕೂಡ, ಅಳವಡಿಸಲು ಸಿಬ್ಬಂದಿ ಬರುವುದಿಲ್ಲ. ಟಿಸಿ ತುಂಬಿದ್ದ ವಾಹನಕ್ಕಾಗಿ ವಾರಗಟ್ಟೆಲೆ ಕಾಯುವ ಪರಿಪಾಟವಿದೆ ಎಂದು ದೂರಿದರು.

ರೈತ ಸಂತೋಷ್ ಮಾತನಾಡಿ, ದೋರನಾಳು ಭಾಗದಲ್ಲಿ ವಿದ್ಯುತ್ ತಂತಿಗಳು ತುಂಡಾಗಿ ಬೀಳುತ್ತಿವೆ. ಹಳೆಯ ವೈರ್ ಬದಲಾಯಿಸುವಂತೆ ಹಲವು ಬಾರಿ ಅರ್ಜಿ ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ವಿದ್ಯುತ್‌ಗೆ ಸಂಬಂಧಿಸಿದ ಯಾವುದೇ ಅವಘಡ, ಎಷ್ಟೊತ್ತಿಗೆ ನಡೆದಿದ್ದರೂ ಕೂಡ ಪವರ್‌ಮೆನ್‌ಗಳು ಬರುವುದು ಮಾತ್ರ ಬೆಳಿಗ್ಗೆ 10 ಗಂಟೆಗೆ ಎಂದು ದೂರಿದರು.

‘ಸುಟ್ಟು ಹೋದ ಟಿ.ಸಿ.ಗಳನ್ನು ರಿಪೇರಿ ಮಾಡಿಸಿ ಬೀರೂರಿನಲ್ಲಿ ಇಡುವುದು ಬೇಡ. ದುರಸ್ತಿಯಾದ ಬಳಿಕ ರೈತರಿಗೆ ತುರ್ತಾಗಿ ವಿತರಿಸುವ ಕೆಲಸ ಮಾಡಬೇಕು ಎಂದು ಸೂಪರಿಂಟೆಂಡಿಂಗ್‌ ಎಂಜಿನಿಯರ್ ಮಂಜುನಾಥ್‌ ಸೂಚನೆ ನೀಡಿದರು.

ಮಾಚೇನಹಳ್ಳಿಯ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಸವಾಗುತ್ತಿದೆ. ವೋಲ್ಟೇಜ್ ಅವ್ಯವಸ್ಥೆಯಿಂದ ಮನೆಯಲ್ಲಿರುವ ಎಲೆಕ್ಟ್ರಾನಿಕ್ ಸಲಕರಣೆಗಳಿಗೆ ಹಾನಿಯಾಗುತ್ತಿದೆ. ಈ ಭಾಗಕ್ಕೆ ಪ್ರತ್ಯೇಕ ಟಿ.ಸಿ ಅಳವಡಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಸ್ಥಳಿಯ ನಿವಾಸಿಗಳು ಮನವಿ ಮಾಡಿದರು.

ರೈತ ಮುಖಂಡರಾದ ಸುಣ್ಣದಹಳ್ಳಿ ಚಂದಪ್ಪ, ಹೊಸಳ್ಳಿ ತಾಂಡ್ಯದ ರಮೇಶ್‌ನಾಯ್ಕ, ಸುನಿಲ್ ಹಾಗೂ ಇತರರು ಸಭೆಯಲ್ಲಿ ಹಾಜರಿದ್ದು ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.

Farmers are unable to get their burnt transformers back within 72 hours.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...