Home namma chikmagalur ಡೀಮ್ಡ್ 3 ಪ್ರಕ್ರಿಯೆ ಕೂಡಲೇ ಪ್ರಾರಂಭಿಸಬೇಕು
namma chikmagalurchikamagalurHomeLatest News

ಡೀಮ್ಡ್ 3 ಪ್ರಕ್ರಿಯೆ ಕೂಡಲೇ ಪ್ರಾರಂಭಿಸಬೇಕು

Share
Share

ಮೂಡಿಗೆರೆ: ಇದೀಗ ಡೀಮ್ಡ್ ಪ್ರದೇಶವನ್ನು ಪರಿಷ್ಕರಿಸಿ, ಡೀಮ್ಡ್ ೩ ಮಾಡಲು ಮುಂದಾಗಿರುವುದು ಸ್ವಾಗತಾರ್ಹ, ಈ ಪ್ರಕ್ರಿಯೆ ಕೂಡಲೇ ಪ್ರಾರಂಭಿಸಿ, ೧೦ ತಲೆಮಾರಿಗೆ ಆಗುವಷ್ಟು ಕೃಷಿ ಹಾಗೂ ನಿವೇಶನಕ್ಕೆ ಜಾಗ ಕಾಯ್ದಿರಿಸಬೇಕೆಂದು ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಒತ್ತಾಯಿಸಿದರು.

ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದೆ ಡೀಮ್ಡ್ ಮಾಡಿದ ಪ್ರದೇಶದಲ್ಲಿ ಕಾಡು ಇರಲಿಲ್ಲ. ಅಲ್ಲದೇ ಕಂದಾಯ ಇಲಾಖೆ ಗಮನಕ್ಕೆ ಬಾರದಂತೆ ಕಂದಾಯ ಭೂಮಿಯಲ್ಲಿ ಗಿಡಗಳನ್ನು ನೆಟ್ಟು ಡೀಮ್ಡ್ ಹೆಸರಿನಲ್ಲಿ ಅರಣ್ಯ ಇಲಾಖೆ ಭೂಮಿ ಆಕ್ರಮಿಸಿಕೊಂಡಿದೆ. ಡೀಮ್ಡ್ ೧ಕ್ಕಿಂದ ಡೀಮ್ಡ್ ೨ರಲ್ಲಿ ಕೃಷಿ ಭೂಮಿ ಹಾಗೂ ನಿವೇಶನಕ್ಕೆ ತೀವ್ರ ತೊಂದರೆ ಉಂಟಾಗಿತ್ತು. ಈಗ ಸುಪ್ರಿಂ ಕೋರ್ಟ್ ಡೀಮ್ಡ್ ಪ್ರದೇಶ ಪರಿಶೀಲಿಸಲು ಸೂಚಿಸಿದ್ದು, ಈ ಹಿನ್ನಲೆಯಲ್ಲಿ ಇದೀಗ ಡೀಮ್ಡ್ ೩ ಪ್ರಕ್ರಿಯೆ ಪ್ರಾರಂಭಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಈ ಪ್ರಕ್ರಿಯೆಯಲ್ಲಿ ೧೦ ತಲೆಮಾರಿಗಾಗುವಷ್ಟು ಭೂಮಿ ಮೀಸಲಿರಿಸಬೇಕೆಂದು ಆಗ್ರಹಿಸಿದರು.

ಡೀಮ್ಡ್ ೨ರಲ್ಲಾದ ಯಡವಟ್ಟು ಡೀಮ್ಡ್ ೩ ಪ್ರಕ್ರಿಯೆಯಲ್ಲಿ ಆಗಬಾರದು. ಅಧಿಕಾರಿಗಳು ಎಸಿ ಕೊಠಡಿಯಲ್ಲಿ ಕುಳಿತು ಬೇಕಾಬಿಟ್ಟಿ ಮಾಡಬಾರದು. ನಿವೇಶನ, ಶಾಲೆ, ಅಂಗನವಾಡಿ, ಆಟದ ಮೈಧಾನ ಸೇರಿದಂತೆ ಸಣ್ಣ ರೈತರಿಗೆ ಅನುಕೂಲಕ್ಕಾಗುವಂತೆ ಭೂಮಿಯನ್ನು ಮೀಸಲಿರಿಸಬೇಕು. ಅಲ್ಲದೇ ಜಿಲ್ಲಾಧಿಕಾರಿಗಳು, ಆಯಾ ತಾಲೂಕಿನ ತಹಸೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮಲೆಕ್ಕಿಗರು, ಗ್ರಾ.ಪಂ. ಅಧ್ಯಕ್ಷರು, ಪಿಡಿಒ ಗಳನ್ನೊಳಗೊಂಡಂತೆ ಸಮಿತಿ ರಚಿಸಿ, ಈ ಮೂಲಕ ಪಾರದರ್ಶಕವಾಗಿ ಡೀಮ್ಡ್ ೩ ಪ್ರಕ್ರಿಯೆ ನಡೆಸಬೇಕೆಂದು ಒತ್ತಾಯಿಸಿದರು.

Deemed 3 process should start immediately

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...