Home namma chikmagalur ಅಸಂಘಟಿತ ಕಾರ್ಮಿಕರು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು
namma chikmagalurchikamagalurHomeLatest News

ಅಸಂಘಟಿತ ಕಾರ್ಮಿಕರು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು

Share
Share

ಚಿಕ್ಕಮಗಳೂರು: ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಪ್ರತಿಯೊಬ್ಬ ಅಸಂಘಟಿತ ಕಾರ್ಮಿಕರು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಎಂದು ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಎಸ್.ಲಾಡ್ ತಿಳಿಸಿದರು.

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಇಂದು ನಗರದ ವಿಜಯಪುರದ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಅಸಂಘಟಿತ ಕಾರ್ಮಿಕರಿಗೆ ಸೂಕ್ತ ಭದ್ರತೆ ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ. ಜೊತೆಗೆ ನಾಟಕ, ಸಾಂಸ್ಕೃತಿಕ ಕಾರ್ಯಕ್ರಮಗಳು, ಜನಪದ ಕಲೆ, ಹೀಗೆ ವಿವಿಧ ರೀತಿಯಲ್ಲಿ ತೊಡಗಿಸಿಕೊಂಡಿರುವ ಅಸಂಘಟಿತ ಕಾರ್ಮಿಕರಿಗೂ ಸೌಲಭ್ಯ ಜಾರಿಗೊಳಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಆಟೋ ರಿಕ್ಷಾ ಚಾಲಕರು, ಪೇಯಿಂಟಿಂಗ್ ಮಾಡುವವರು ಸೇರಿದಂತೆ ಹಲವರಿಗೆ ಕಾರ್ಮಿಕ ಕಾಯ್ದೆ ಜಾರಿಗೊಳಿಸಲಾಗಿದ್ದು, ಅಸಂಘಟಿತ ಕಾರ್ಮಿಕರು ಅಪಘಾತದಲ್ಲಿ ಮೃತರಾದಲ್ಲಿ ೫ ಲಕ್ಷ ರೂ.ವರೆಗೂ ಪರಿಹಾರ ವಿತರಿಸಲಾಗುತ್ತದೆ ಎಂದ ಅವರು, ಸ್ವಿಗ್ಗಿ, ಜೊಮೆಟೋಗಳಂತಹ ಸಂಸ್ಥೆಯಲ್ಲಿ ಆಹಾರ ಸರಬರಾಜು ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಪ್‌ಕಾರ್ಟ್, ಪೋರ್ಟಲ್, ಫಾರ್ಮಸಿ, ಬ್ಲಿಂಕಿಟ್, ಬಿಗ್ ಬಾಸ್ಕೆಟ್, ಡೊಮಿನಾಜ್ ಮತ್ತಿತರ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಸಿಕೊಂಡವರೆಲ್ಲರೂ ಅಸಂಘಟಿತ ಕಾರ್ಮಿಕರಾಗಿದ್ದಾರೆ ಎಂದು ತಿಳಿಸಿದರು.

ದೇಶದಲ್ಲಿ ತಲಾ ಆದಾಯದಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ. ಜಿಎಸ್‌ಟಿ ಸಂಗ್ರಹದಲ್ಲೂ ಮುಂಚೂಣಿಯಲ್ಲಿದ್ದೇವೆ. ಇದಕ್ಕೆ ಗ್ಯಾರಂಟಿ ಯೋಜನೆಗಳ ಯಶಸ್ಸು ಕಾರಣ. ಆಶಾ ದೀಪ ಕಾರ್ಯಕ್ರಮದಲ್ಲಿ ಎಸ್‌ಸಿ, ಎಸ್‌ಟಿ ವರ್ಗದವರಿಗೆ ಕೆಲಸ ನೀಡುವವರಿಗೆ ರೂ. ೭೫೦೦ ರವರೆಗೆ ನೆರವು ನೀಡಲಾಗುತ್ತಿದೆ. ಹೊರಗುತ್ತಿಗೆ ನೌಕರರು ಸೊಸೈಟಿ ಮೂಲಕ ಕಾರ್ಯ ನಿರ್ವಹಿಸಲಿದ್ದು, ಸಂಬಳ ಸಮಸ್ಯೆ ತಪ್ಪಲಿದೆ. ಮುಂದಿನ ದಿನಗಳಲ್ಲಿ ಮನೆ ಕೆಲಸ ಕಾರ್ಮಿಕರಿಗೆ ಕನಿಷ್ಠ ವೇತನ ಕಾನೂನು ಜಾರಿಗೆ ತರಲಾಗುವುದು ಎಂದು ಹೇಳಿದರು.

ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಕರ್ನಾಟಕ ರಾಜ್ಯ ಸರ್ಕಾರವು ಅಸಂಘಟಿತ ವರ್ಗಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ “ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ”ಯನ್ನು ಅನು?ನಗೊಳಿಸಲಾಗುತ್ತಿದೆ ಎಂದರು.

ಪ್ರಾರಂಭಿಕವಾಗಿ ೨೬ ವರ್ಗಗಳ ಅಸಂಘಟತ ಕಾರ್ಮಿಕರನ್ನು ನೋಂದಾಯಿಸಲಾಗುತ್ತಿತ್ತು. ಪ್ರಸ್ತುತ ಹೊಸದಾಗಿ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿಗೆ ಸೇರಿದ ಪಾರಂಪರಿಕ ವೃತ್ತಿಯಲ್ಲಿ ತೊಡಗಿರುವ ೩೮ ವರ್ಗಗಳು ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಹಾಗೂ ಅರೆಅಲೆಮಾರಿ ಪಂಗಡದ ಕುಲಕಸುಬಿನಲ್ಲಿ ತೊಡಗಿರುವ ೨೭ ವರ್ಗಗಳ ಕಾರ್ಮಿಕರು ಸೇರಿದಂತೆ ಒಟ್ಟಾರೆ ೯೧ ವರ್ಗಗಳ ಕಾರ್ಮಿಕರನ್ನು ಉಚಿತವಾಗಿ ನೋಂದಾಯಿಸಿ ಸೌಲಭ್ಯಗಳನ್ನೊಳಗೊಂಡ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದ್ದು, ರಾಜ್ಯದಲ್ಲಿ ಸುಮಾರು ೩೫ ಲಕ್ಷ ಕಾರ್ಮಿಕರು ಇರುವುದಾಗಿ ಅಂದಾಜಿಸಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದ್ದು, ದೇಶದಲ್ಲಿಯೇ ಮೊದಲು ಜಾರಿಗೆ ರಾಜ್ಯ ನಮ್ಮದು. ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ. ೨ ಲಕ್ಷ ಹಾಗೂ ಜೀವ ವಿಮಾ ರೂ. ೨ ಲಕ್ಷ ಸೇರಿ ಒಟ್ಟು ರೂ. ೪ ಲಕ್ಷಗಳು, ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ. ೨ ಲಕ್ಷಗಳವರೆಗೆ ಜೊತೆಗೆ ಆಸ್ಪತ್ರೆ ವೆಚ್ಚ ಮರುಪಾವತಿ ರೂ. ೧ ಲಕ್ಷಗಳವರೆಗೆ ಹಾಗೂ ಜೀವ ವಿಮಾ ರೂ. ೨ ಲಕ್ಷಗಳು ನೀಡಲಾಗುತ್ತದೆ ಎಂದು ಹೇಳಿದರು.

ಶಾಸಕರಾದ ಹೆಚ್.ಡಿ.ತಮ್ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ೧೦೯ ಅಸಂಘಟಿತ ಕಾರ್ಮಿಕರಿಗೆ ಅಪಘಾತ, ಸಹಜ ಮರಣವಾದವರಿಗೆ ಪರಿಹಾರ ಈ ರೀತಿಯ ಯೋಜನೆಗಳನ್ನು ನೀಡುವ ಮುಖಾಂತರ ಅವರ ಕುಟುಂಬದ ಭದ್ರತೆಯನ್ನು ಕಾಪಾಡಲಾಗಿದೆ ಎಂದ ಅವರು ೨೬ ಅಸಂಘಟಿತ ಕಾರ್ಮಿಕರ ವರ್ಗಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ಕಾರ್ಮಿಕ ಇಲಾಖೆ ವತಿಯಿಂದ ಈ ಅಸಂಘಟಿತ ಕಾರ್ಮಿಕರಿಗೆ ಖಾಸಗಿ ಅಥವಾ ಸ್ವಂತ ವಾಹನ ಮಾಲೀಕರು ಸೇರಿದಂತೆ ಎಲ್ಲಾ ರೀತಿಯ ಕೆಲಸಗಾರರಿಗೆ ಆಕಸ್ಮಿಕ ಮರಣ ಸಂಭಾವ್ಯ ಪ್ರಕರಣಗಳಲ್ಲಿ ರೂ. ೫ ಲಕ್ಷ ಪರಿಹಾರವನ್ನು ನೀಡಲಾಗುತ್ತದೆ ಎಂದು ಹೇಳಿದರು.

ನಮ್ಮ ಜಿಲ್ಲೆಯಲ್ಲಿ ಈಗಾಗಲೇ ೭೮,೧೩೨ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದಾರೆ. ಕಾರ್ಮಿಕ ಮಂಡಳಿಯಿಂದ ೩೧,೪೭೨ ಜನರಿಗೆ ಒಟ್ಟು ರೂ. ೫೬.೯೮ ಕೋಟಿಯನ್ನು ಕಾರ್ಮಿಕ ಇಲಾಖೆಯಿಂದ ನೇರವಾಗಿ ಕಾರ್ಮಿಕರ ಖಾತೆಗಳಿಗೆ ವರ್ಗಾಯಿಸಲಾಗಿದೆ. ಜೊತೆಗೆ ೨೧,೨೬೨ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ರೂ.೧೯.೯೫ ಕೋಟಿಯನ್ನು ನೀಡಲಾಗಿದೆ. ವೈದ್ಯಕೀಯ ಸೇವೆಗಾಗಿ ೩೮೧ ಫಲಾಭವಿಗಳಿಗೆ ರೂ.೧.೪೯ ಕೋಟಿಯ ನೆರವು ನೀಡಲಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ ಅಸಂಘಟಿತ ವಲಯವನ್ನು ಗುರುತಿಸಿ ಅವರಿಗೆ ಜೀವನಕ್ಕೆ ಭದ್ರತೆ ಹಾಗೂ ವಿಶ್ವಾಸವನ್ನು ತೋರಿಸುವುದು ಒಂದು ಉತ್ತಮವಾದ ಕಾರ್ಯ. ವಿವಿಧ ವೃತ್ತಿಗಳಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರನ್ನು ಸಂಘಟಿಸುವುದು ಸಾಮಾನ್ಯದ ಸಂಗತಿಯಲ್ಲ. ಅವರಿಗೆ ಮಾರ್ಗದರ್ಶನ ನೀಡುವುದು, ಅಗತ್ಯ ಸಹಾಯ ನೀಡುವುದು, ಆರೋಗ್ಯದ ರಕ್ಷಣೆ ಜೊತೆಗೆ ಅವರ ಕುಟುಂಬದ ಭದ್ರತೆ, ಅಪಘಾತವಾದರೆ. ಅನಾರೋಗ್ಯ ಆಕಸ್ಮಿಕ ಮರಣ ಹೊಂದಿದರೆ ಆ ಕುಟುಂಬಕ್ಕೆ ಭದ್ರತೆ ಒದಗಿಸಲು ಮುಂದಾಗಿರುವ ಈ ಕಾರ್ಯಕ್ರಮ ಉತ್ತಮವಾದುದು ಎಂದು ತಿಳಿಸಿದರು.

ಪ್ರತಿಯೊಬ್ಬ ಶ್ರಮಜೀವಿ ಕಾರ್ಮಿಕ ಇಲಾಖೆಯ ಅಧೀನದಲ್ಲಿ ಬರುತ್ತಾರೆ. ಕೆಲಸ ಮಾಡುವಂತಹ ಪ್ರತಿಯೊಬ್ಬರೂ ಅವರ ವೇತನ ಹೆಚ್ಚು ಕಡಿಮೆ ಇದ್ದರೂ ಕೂಡ ಶ್ರಮ ವಹಿಸುವವರು ಕಾರ್ಮಿಕ ಇಲಾಖೆಯ ವ್ಯಾಪ್ತಿಗೆ ಬರುತ್ತಾರೆ. ಅದು ಬಹುಶಃ ವೇತನ ಎನ್ನುವುದು ಉನ್ನತ ಹುದ್ದೆಯಿಂದ ಹಿಡಿದು ಕಟ್ಟ ಕಡೆಯ ಮನು?ನವರೆಗೂ ಪ್ರತಿಯೊಬ್ಬ ಶ್ರಮಜೀವಿ ಕಾರ್ಮಿಕ ಇಲಾಖೆಯ ವ್ಯಾಪ್ತಿಗೆ ಒಳಪಡಲಿದ್ದಾರೆ ಎಂದು ಹೇಳಿದರು.

ತರೀಕೆರೆ ಶಾಸಕ ಜಿ.ಹೆಚ್.ಶ್ರೀನಿವಾಸ್ ಮಾತನಾಡಿದರು. ಕಾರ್ಮಿಕ ಇಲಾಖೆಯ ಆಯುಕ್ತ ಹೆಚ್.ಎನ್.ಗೋಪಾಲಕೃಷ್ಣ ಸಂವಿಧಾನ ಪೀಠಿಕೆ ಬೋಧಿಸಿದರು. ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್, ಭದ್ರಾ ಕಾಡಾ ಅಧ್ಯಕ್ಷರಾದ ಡಾ.ಕೆ.ಪಿ.ಅಂಶುಮಂತ್, ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷರಾದ ಬಿ.ಹೆಚ್.ಹರೀಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮ್ಮದ್, ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಂಟಿ ಕಾರ್ಮಿಕ ಆಯುಕ್ತ ರವಿಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Minister Lad calls for proper utilization of facilities for unorganized workers

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...