Home namma chikmagalur ನಿಡುವಾಳೆಗೆ ಬಂದ ಯಮ ಧರ್ಮರಾಯ-ಚಿತ್ರಗುಪ್ತ
namma chikmagalurchikamagalurHomeLatest News

ನಿಡುವಾಳೆಗೆ ಬಂದ ಯಮ ಧರ್ಮರಾಯ-ಚಿತ್ರಗುಪ್ತ

Share
Share

ಕೊಟ್ಟಿಗೆಹಾರ:ಹೊಂಡ ಗುಂಡಿಗಳಿಂದ ಕೂಡಿದ ರಸ್ತೆ ದುಸ್ಥಿತಿಯ ಬಗ್ಗೆ ಗಮನ ಸೆಳೆಯಲು ಮತ್ತು ದ್ವಿಚಕ್ರವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಯಮ ಹಾಗೂ ಚಿತ್ರಗುಪ್ತರ ವೇಷ ತೊಟ್ಟು ನಿಡುವಾಳೆಯಲ್ಲಿ ಜನಜಾಗೃತಿ ಮೂಡಿಸಲಾಯಿತು.

ನಿಡುವಾಳೆ ಗ್ರಾ.ಪಂ ಉಪಾಧ್ಯಕ್ಷ ನವೀನ್ ಹಾವಳಿ ಮತ್ತು ಹಾಸ್ಯ ಕಲಾವಿದ ರಮೇಶ್ ಯಾದವ್ ಯಮ ಚಿತ್ರ ಗುಪ್ತರ ವೇಷ ತೊಟ್ಟು ಗಮನ ಸೆಳೆದರು. ರಸ್ತೆಯ ಗುಂಡಿಗಳನ್ನು ಚಿತ್ರಗುಪ್ತ ಅಳತೆ ಮಾಡಿದರೇ ಯಮ ಧರ್ಮರಾಯ ಅಳತೆಯ ಲೆಕ್ಕ ಬರೆದುಕೊಂಡರು.

ದ್ವಿಚಕ್ರವಾಹನದಲ್ಲಿ ಹೆಲ್ಮೆಟ್ ಇಲ್ಲದೇ ಸಂಚರಿಸುತ್ತಿರುವವರನ್ನು ನಿಲ್ಲಿಸಿ ಹೆಲ್ಮೆಟ್ ಧರಿಸುವಂತೇ ಯಮಧರ್ಮರಾಯನ ವೇಷಧಾರಿ ಅರಿವು ಮೂಡಿಸಿದರು. ಸಮೀಪದ ನ್ಯಾಯಬೆಲೆ ಅಂಗಡಿಗೆ ತೆರಳಿ ಅಕ್ಕಿ ಚೀಲಕ್ಕೆ ಕೈ ಹಾಕಿ ಅಕ್ಕಿಯ ಕ್ವಾಲಿಟಿಯನ್ನು ಪರಿಶೀಲಿಸಿದರು.

ರಸ್ತೆಯಲ್ಲಿ ಪ್ರಯಾಣಿಸುವವರಿಗೆ ಮದ್ಯ ಸೇವಿಸಿ ವಾಹನ ಚಲಾಯಿಸಬೇಡಿ. ಹಾಗೇ ಮಾಡಿದರೇ ಯಮ ಮತ್ತು ಚಿತ್ರಗುಪ್ತರಿಗೆ ಕೆಲಸ ಹೆಚ್ಚಾಗುತ್ತದೆ ಎಂದು ನಗೆ ಚಟಾಕಿ ಹಾರಿಸಿದರು. ಗದೆ ಹಿಡಿದು ವೇಷ ಧರಿಸಿ ರಸ್ತೆಗೆ ಬಂದ ವೇಷಧಾರಿಗಳ ಪ್ರಯತ್ನಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮತ್ತು ಹದಗೆಟ್ಟ ರಸ್ತೆಗಳನ್ನು ದುರಸ್ಥಿ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Yama Dharmaraya-Chitragupta who came to Niduvale

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...