Home namma chikmagalur ಧರ್ಮದ ರಕ್ಷಣೆ-ಅಧರ್ಮದ ನಾಶ ನಾಡಹಬ್ಬ ದಸರಾದ ಉದ್ದೇಶ
namma chikmagalurchikamagalurHomeLatest News

ಧರ್ಮದ ರಕ್ಷಣೆ-ಅಧರ್ಮದ ನಾಶ ನಾಡಹಬ್ಬ ದಸರಾದ ಉದ್ದೇಶ

Share
Share

ಚಿಕ್ಕಮಗಳೂರು: ಧರ್ಮದ ರಕ್ಷಣೆಯಾಗಬೇಕು, ಅಧರ್ಮದ ನಾಶವಾಗಬೇಕೆಂಬುದು ಹಾಗೂ ನ್ಯಾಯಕ್ಕೆ ಜಯ, ಸತ್ಯಕ್ಕೆ ಜಯ ಸಿಗಬೇಕೆಂಬುದು ನಾಡಹಬ್ಬ ದಸರಾದ ಪ್ರಮುಖ ಉದ್ದೇಶ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದರು.

ಅವರು ಸಮೀಪಕ ಬೀಕನಹಳ್ಳಿಯಲ್ಲಿ ನಡೆದ ದಸರಾ ಹಬ್ಬದ ಅಂಗವಾಗಿ ಜಂಬೂ ಸವಾರಿಯೊಂದಿಗೆ ಅಂಬು ಒಡೆಯುವ ಕಾರ್ಯಕ್ರಮದ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿ ಸತ್ಯ, ನ್ಯಾಯ, ನೀತಿಗೆ ಜಯಸಿಗಬೇಕೆಂಬ ಪರಂಪರೆಯನ್ನು ಮುಂದುವರೆಸಿಕೊಂಡು ಬರಬೇಕೆಂಬ ಕಾರಣದಿಂದ ಚಾಮುಂಡೇಶ್ವರಿ ಉತ್ಸವ ಬೀಕನಹಳ್ಳಿಯಲ್ಲಿ ವಿಜೃಂಭಣೆಯಿಂದ ಶ್ರದ್ಧಾ ಭಕ್ತಿಯೊಂದಿಗೆ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.

ಹಿಂದೆ ಕೋರೆ ಹಲ್ಲು ರಾಕ್ಷಸರಿದ್ದರು. ಆದರೆ ಈಗ ಇಲ್ಲ. ರಾಕ್ಷಸಿಯ ಮನಸ್ಥಿತಿಯವರಿದ್ದಾರೆ. ನೀತಿ ಬಿಟ್ಟವರು ರಾಕ್ಷಸರು, ಅಧರ್ಮದ ಪರವಾಗಿ ನಿಲ್ಲುವವರು, ಧರ್ಮ ನಾಶಮಾಡುವವರು ರಾಕ್ಷಸರು. ಅಂತಹ ಮನಸ್ಥಿತಿ ನಾಶವಾಗಲಿ ಎಂದು ಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸಿದರು.

ಸಜ್ಜನ ಶಕ್ತಿಗೆ ಬಲ ಬರಲಿ, ರಕ್ತಪಾತ ಕೊನೆಗಾಣಲಿ, ಸಜ್ಜನರು ಒಗ್ಗಟ್ಟಾದಾಗ ದುರ್ಜನರು ಬಾಲ ಬಿಚ್ಚಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ದಸರಾ ಉತ್ಸವ ಒಗ್ಗಟ್ಟಿನ ಧಾರ್ಮಿಕತೆಯ ದ್ಯೋತಕವಾಗಿದೆ ಎಂದು ಹೇಳಿದರು.

ರಾಕ್ಷಸರ ಸಂಹಾರಕ್ಕಾಗಿ ಎಲ್ಲಾ ದೇವತೆಗಳು ತಮ್ಮ ಶಕ್ತಿಯನ್ನು ಧಾರೆಯೆರೆದು ಚಾಮುಂಡೇಶ್ವರಿಗೆ ಬಲ ಕೊಟ್ಟಿದ್ದು ಇತಿಹಾಸವಾಗಿದ್ದು, ಅದರ ಭಾಗವಾಗಿ ಎಲ್ಲರೂ ಒಗ್ಗೂಡುವ ಮೂಲಕ ಧಾರ್ಮಿಕತೆಗೆ ಅರ್ಥ ತುಂಬಬೇಕೆಂದು ಮನವಿ ಮಾಡಿದರು.

ಮೆರವಣಿಗೆಯಲ್ಲಿ ಬಣ್ಣ ಬಣ್ಣದ ಸಿಡಿಮದ್ದು, ಬಸವನ ಅಲಂಕಾರ, ಡೊಳ್ಳು ಕುಣಿತ, ಭಜನೆ, ಚಟ್ಟಿಮೇಳ, ಕೋಲಾಟ, ಜಾನಪದ ನೃತ್ಯ, ಹೆಣ್ಣು ಮಕ್ಕಳಿಂದ ಆರತಿ, ಭಕ್ತರ ಮನಸೂರೆಗೊಂಡಿತು.

ಈ ಕಾರ್ಯಕ್ರಮದಲ್ಲಿ ಶ್ರೀ ಚಾಮುಂಡೇಶ್ವರಿ ಸುಕ್ಷೇತ್ರ ಸೇವಾ ಸಮಿತಿಯ ಅಧ್ಯಕ್ಷ ಬಿ.ಪಿ ನಂಜಪ್ಪ, ಉಪಾಧ್ಯಕ್ಷ ಬಿ.ಹೆಚ್ ಗುರುಬಸಪ್ಪ, ಕಾರ್ಯದರ್ಶಿ ಬಿ.ಎಂ ಯೋಗಾನಂದ್, ಖಜಾಂಚಿ ಬಿ.ಹೆಚ್ ಸೋಮೇಗೌಡ, ಸದಸ್ಯರುಗಳಾದ ನಂಜುಂಡಪ್ಪ, ಗುರುಸಿದ್ದಪ್ಪ, ಯತಿರಾಜ್. ಲೋಕನಾಥ್, ಹೆಚ್.ಪಿ ಮಂಜೇಗೌಡ, ರಂಗಪ್ಪ, ಬಿ.ಎಂ ನಾಗರಾಜು, ಲಲಿತಾ ಬಸವರಾಜ್ ಉಪಸ್ಥಿತರಿದ್ದರು.

Protection of Dharma-Destroy of Adharma is the purpose of Nadahabba Dasara

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...