Home namma chikmagalur ದಸರಾ ಬಯಲು ಜಂಗಿ ಕುಸ್ತಿ ಸ್ಪರ್ಧೆಗೆ ಚಾಲನೆ
namma chikmagalurHomeLatest NewsTarikere

ದಸರಾ ಬಯಲು ಜಂಗಿ ಕುಸ್ತಿ ಸ್ಪರ್ಧೆಗೆ ಚಾಲನೆ

Share
Share

ತರೀಕೆರೆ: ಗ್ರಾಮೀಣ ಕ್ರೀಡೆ ಕುಸ್ತಿಯಿಂದ ಯುವ ಜನರಿಗೆ ಸದೃಢ ದೇಹ, ಆರೋಗ್ಯ ಮತ್ತು ಏಕಾಗ್ರತೆ ಹೆಚ್ಚುತ್ತದೆ ಎಂದು ಪಟ್ಟಣದ ಕೀಲು ಮತ್ತು ಮೂಳೆ ತಜ್ಞ ಡಾ.ದೇವರಾಜ್ ಹೇಳಿದರು.

ಪಟ್ಟಣದ ಬಯಲು ರಂಗಮಂದಿರದಲ್ಲಿ ಶ್ರೀಗುರು ರೇವಣಸಿದ್ದೇಶ್ವರ ಕುರುಬರ ಸಮಾಜ, ಶ್ರೀಗುರು ರೇವಣಸಿದ್ದೇಶ್ವರ ಗರಡಿ ಕುಸ್ತಿ ಸಂಘ, ಪುರಸಭೆ ತರೀಕೆರೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ 100ನೇ ವರ್ಷದ ರಾಜ್ಯ ಮಟ್ಟದ ದಸರಾ ಬಯಲು ಜಂಗಿ ಕುಸ್ತಿ ಸ್ಪರ್ಧೆಯಲ್ಲಿ ಮೊದಲನೇ ಕುಸ್ತಿ ಜೋಡಣೆ ನೆರವೇರಿಸಿ ಅವರು ಮಾತನಾಡಿ  ಕ್ರೀಡಾಪಟುಗಳಿಗೆ ಉತ್ತೇಜನ ನೀಡಬೇಕು. ಆಯೋಜಕರು ಮತ್ತು ಸರ್ಕಾರವನ್ನು ಗೌರವಿಸಬೇಕು ಎಂದರು.

ಶ್ರೀಗುರು ರೇವಣಸಿದ್ದೇಶ್ವರ ಕುರುಬರ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಎಸ್. ರಮೇಶ್ (ಬೈಟು) ಮಾತನಾಡಿ, ಸ್ವಾತಂತ್ರ್ಯ‌ ಪೂರ್ವದಲ್ಲಿ ತರೀಕೆರೆಯನ್ನು ಆಳಿದ ಪಾಳೆಗಾರರು ಈ ಕ್ರೀಡೆಯನ್ನು ನಡೆಸಿಕೊಂಡು ಬರುತ್ತಿದ್ದರು. ಸ್ವಾತಂತ್ರ್ಯ ನಂತರದ ದಿನಗಳಲ್ಲಿ ನಮ್ಮ ಸಮಾಜಕ್ಕೆ ವಹಿಸಿದ್ದು, ಅಂದಿನಿಂದಲೂ ಈ ಕ್ರೀಡೆಗೆ ಮತ್ತು ಹೊರಗಿನಿಂದ ಬರುವ ಕ್ರೀಡಾಪಟುಗಳಿಗೆ ಚ್ಯುತಿ ಬಾರದ ರೀತಿಯಲ್ಲಿ ನಡೆಸಿಕೊಂಡು ಬರುತ್ತಿದ್ದೇವೆ ಎಂದರು.

ಪುರಸಭೆ ಸದಸ್ಯ ಟಿ.ದಾದಾಪೀರ್ ಮಾತನಾಡಿ, ‘ಕುಸ್ತಿ ಶೌರ್ಯದ ಸಂಕೇತ. ಇದನ್ನು ಪಾಳೆಗಾರರ ನಂತರ ಎಲ್ಲಾ ಸಮಾಜದವರ ಸಹಕಾರದಿಂದ ಕುರುಬ ಸಮುದಾಯ ನಡೆಸಿಕೊಂಡು ಬರುತ್ತಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಪುರಸಭೆ ಅಧ್ಯಕ್ಷ ವಸಂತಕುಮಾರ್, ಪಾಳೇಗಾರರು ಹಿಂದಿನಿಂದಲೂ ನಡೆಸಿಕೊಂಡು ಬಂದಿರುವ ಕ್ರೀಡೆಯನ್ನು ಪ್ರತಿಯೊಬ್ಬರೂ ಯಶಸ್ವಿಗೊಳಿಸಬೇಕು ಎಂದರು.

ಪುರಸಭಾ ಸದಸ್ಯ  ಟಿ.ಜಿ.ಲೋಕೇಶ್‍ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕುಸ್ತಿಗೆ ಬರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರ ಸೊಬಗನ್ನು ನಮ್ಮವರು ಉಳಿಸಿಕೊಂಡು ಬರುತ್ತಿದ್ದಾರೆ. ರಾಜ್ಯಮಟ್ಟದ ಈ ಕ್ರೀಡೆಗೆ ಕ್ರೀಡಾಂಗಣ, ಊಟ, ವಸತಿ, ಬಹುಮಾನಗಳು ಮತ್ತು ಇನ್ನಿತರೆ ವ್ಯವಸ್ಥೆಗಳನ್ನು ಒಬ್ಬೊಬ್ಬರು ಒಂದೊಂದು ಜವಾಬ್ದಾರಿ ವಹಿಸಿಕೊಂಡು, ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿರುವುದರಿಂದ ಕ್ರೀಡೆ ಪ್ರತಿವರ್ಷ ಯಶಸ್ವಿಯಾಗಿ ನಡೆಯುತ್ತಿದೆ ಎಂದರು.

ಪುರಸಭಾ ಉಪಾಧ್ಯಕ್ಷೆ ಪಾರ್ವತಮ್ಮ, ಸಮಿತಿಯ ಗೌರವ ಅಧ್ಯಕ್ಷ ವಗ್ಗಪ್ಪರ ಮಂಜಣ್ಣ, ರಾಜ್ಯ ಮಟ್ಟದ ಮಹಿಳಾ ಕುಸ್ತಿ ಪಟು ಅನುಷಾ ಗಂಗಾಧರ್ ಮಾತನಾಡಿದರು.

ಅಖಾಡದ ಉದ್ಘಾಟನೆಯನ್ನು ತರೀಕೆರೆ ವಲಯ ಅರಣ್ಯ ವಲಯಾಧಿಕಾರಿ ಆಶೀಫ್ ಅಹಮದ್ ನೆರವೇರಿಸಿದರು. ಕುಸ್ತಿ ಸಂಘದ ನಿಕಟಪೂರ್ವ ಅಧ್ಯಕ್ಷ ಜಯಸ್ವಾಮಿ ಕಾರೆ, ದರ್ಶನ್, ರೇವಣ್ಣ, ಭಾಗವಹಿಸಿದ್ದರು. ಸಂಘದ ಉಪಾಧ್ಯಕ್ಷ ಟಿ.ಡಿ.ರವಿಕುಮಾರ್ ಸ್ವಾಗತಿಸಿದರು. ಸುಜೀತ್ ಗುರುದೇವ್ ಪ್ರಾರ್ಥಿಸಿದರು. ನಿವೃತ್ತ ಬಿಇಒ ಸೋಮಶೇಖರಯ್ಯ ನಿರೂಪಿಸಿ ವಂದಿಸಿದರು.

Dasara open-air wrestling competition kicks off

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...