Home namma chikmagalur chikamagalur ಮೈಸೂರು ದಸರಾದಲ್ಲಿ ಜಿ.ಪಂ ಭದ್ರಬಾಲ್ಯ ಸ್ತಬ್ದಚಿತ್ರ 
chikamagalurLatest Newsnamma chikmagalur

ಮೈಸೂರು ದಸರಾದಲ್ಲಿ ಜಿ.ಪಂ ಭದ್ರಬಾಲ್ಯ ಸ್ತಬ್ದಚಿತ್ರ 

Share
Share

ಚಿಕ್ಕಮಗಳೂರು: ಮೈಸೂರು ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ೨೦೨೫ ನೇ ಸಾಲಿನ ಸ್ತಬ್ದಚಿತ್ರ ಪ್ರದರ್ಶನ ಏರ್ಪಡಿಸಿದ್ದು, ಈ ಪ್ರದರ್ಶನದಲ್ಲಿ ಜಿಲ್ಲೆಯ ‘ಭದ್ರಬಾಲ್ಯ’ ಸ್ತಬ್ದಚಿತ್ರ ನೋಡುಗರ ನಿಬ್ಬೆರಗಾಗುವಂತೆ ಮಾಡಿತು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್ ಕೀರ್ತನ ತಿಳಿಸಿದರು.

ಅವರು ಇಂದು ಜಿ.ಪಂ ಮಿನಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಾಲ್ಯವಿವಾಹ, ಬಾಲ ಗರ್ಭಿಣಿ, ಪೋಕ್ಸೋ ಪ್ರಕರಣ ತಡೆಗೆ ಭದ್ರಬಾಲ್ಯ ಯೋಜನೆ ಜಿಲ್ಲೆಯ ಜಿ.ಪಂ ನಲ್ಲಿ ಜಾರಿಗೆ ಬಂದಿದ್ದು, ಇದರಲ್ಲಿ ಸುಮಾರು ವಿವಿಧ ೨೦ ಇಲಾಖೆಗಳು ಸೇರಿ ಒಟ್ಟುಗೂಡಿ ಕಾರ್ಯಾಚರಣೆ ಮಾಡುತ್ತಿವೆ ಎಂದರು.

ಜಿಲ್ಲಾಡಳಿತ, ಜಿ.ಪಂ, ಪೊಲೀಸ್ ಇಲಾಖೆ ಸಹಯೋಗದ ಜೊತೆಗೆ ಶಾಲಾ ಶಿಕ್ಷಣ ಇಲಾಖೆಯಡಿ ೧೭ ಅಂಶದ ಕಾರ್ಯಕ್ರಮಗಳಾದ ಕನಸಿನ ಗೋಡೆ, ವಿಶ್ವಾಸ ಪೆಟ್ಟಿಗೆ, ತಿಳಿನಲಿ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಕ್ಕಳ ಮತ್ತು ಮಹಿಳಾ ಹಕ್ಕುಗಳ ಕಾವಲು ಸಮಿತಿಯವರಿಗೆ ಕರ್ನಾಟಕ ಹೆಲ್ತ್ ಟ್ರಸ್ಟ್ ಮೂಲಕ ತರಬೇತಿ ನೀಡಲಾಗಿದ್ದು, ಇವರು ಗ್ರಾಮೀಣ ಜನರಲ್ಲಿ ಕಾನೂನುಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆಂದರು.

ಇವೆಲ್ಲಾ ಅಂಶಗಳನ್ನೊಳಗೊಂಡ ಸ್ತಬ್ದಚಿತ್ರ ಪ್ರದರ್ಶನಕ್ಕೆ ಅವಕಾಶ ಮೈಸೂರು ದಸರಾದಲ್ಲಿ ಲಭ್ಯವಾಯಿತು. ಈ ಸ್ತಬ್ದಚಿತ್ರಕ್ಕೆ ಒಳ್ಳೆಯ ಗೌರವ ಸಿಕ್ಕಿದೆ. ಬಹುಮಾನ ಬರುವ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದರು.

G.P. Bhadra’s Tableau at Mysore Dasara

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...