Home namma chikmagalur ಸರ್ವರೂ ಎಚ್ಚರದಿಂದಿರಬೇಕಲೇ ಪರಾಕ್
namma chikmagalurHomeKadurLatest News

ಸರ್ವರೂ ಎಚ್ಚರದಿಂದಿರಬೇಕಲೇ ಪರಾಕ್

Share
Share

ಬೀರೂರು: ಧರ್ಮ-ಅಧರ್ಮ ಸಂಕಟವಾಯಿತು, ವಿಶ್ವಕ್ಕೆ ಶಾಂತಿ ಭಂಗ ಆಯಿತು, ಧರೆಗೆ ವರುಣನ ಆಗಮನವಾಯಿತು, ಸರ್ವರೂ ಎಚ್ಚರದಿಂದಿರಬೇಕಲೇ ಪರಾಕ್’.

ಇದು ಬೀರೂರು ಪಟ್ಟಣದ ಶ್ರೀಮೈಲಾರಲಿಂಗ ಸ್ವಾಮಿ ಅವರು ನುಡಿದ ಕಾರಣಿಕ.

ಮೈಲಾರಲಿಂಗೇಶ್ವರ ಸ್ವಾಮಿಯ ಕಾರಣಿಕ ಮಹೋತ್ಸವ ಮಹಾನವಮಿ ಅಂಗವಾಗಿ ಬೀರೂರಿನ ಬಯಲಿನಲ್ಲಿ ಶುಕ್ರವಾರ ನೆರವೇರಿತು.

‘ಧರ್ಮ- ಅಧರ್ಮ ಸಂಕಟವಾಯಿತು ಎಂದರೆ ಜನರಲ್ಲಿ ಪಾಪಪ್ರಜ್ಞೆ ಕಡಿಮೆಯಾಗುತ್ತಿದೆ. ಧರ್ಮಾಚರಣೆಯಲ್ಲಿ ಆಡಂಬರಕ್ಕೆ ಒತ್ತು ನೀಡಲಾಗುತ್ತಿದ್ದು, ಶ್ರದ್ಧೆಗೆ ನಂತರದ ಸ್ಥಾನ ನೀಡಲಾಗುತ್ತಿದೆ.

ಯಾವುದು ಒಳ್ಳೆಯದು, ಕೆಟ್ಟದು ಎನ್ನುವುದರ ನಡುವಿನ ವಿಶ್ಲೇಷಣೆಯ ಗೆರೆ ತೆಳುವಾಗಿರುವುದು. ವಿಶ್ವಕ್ಕೆ ಶಾಂತಿಯ ಭಂಗವಾಯಿತು ಎಂದರೆ, ಅಸ್ಥಿತ್ವಕ್ಕಾಗಿ ಹೋರಾಟ ನಡೆಸುತ್ತಿರುವ ದೇಶಗಳ ವಿರುದ್ಧ ಬಲಾಢ್ಯ ದೇಶಗಳು ಬಲ ಪ್ರಯೋಗಿಸುವುದು.

ಧರೆಗೆ ವರುಣನ ಆಗಮನವಾಯಿತು ಎಂದರೆ ಈವರೆಗೆ ಮುಂಗಾರಿನ ಅಬ್ಬರ ನಿರಂತರವಾಗಿದ್ದು, ಸಾಕಷ್ಟು ಹಾನಿಯೂ ಸಂಭವಿಸಿದೆ. ಹಿಂಗಾರು ಮಳೆ ಕೂಡಾ ಉತ್ತಮವಾಗಿ ಸುರಿಯಲಿದೆ ಎನ್ನುವುದು ಕಾರಣಿಕ ನುಡಿಯ ಅರ್ಥ’ ಎಂದು ಭಕ್ತರು ವಿಶ್ಲೇಷಿಸಿದ್ದಾರೆ.

Everyone should be careful Parak.

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...