Home namma chikmagalur ಮನೆ ಹಿರಿಯರಿಗೆ ಇಳಿವಯಸ್ಸಿನಲ್ಲಿ ನಾವು ರಕ್ಷಕರಾಗಬೇಕು
namma chikmagalurchikamagalurHomeLatest News

ಮನೆ ಹಿರಿಯರಿಗೆ ಇಳಿವಯಸ್ಸಿನಲ್ಲಿ ನಾವು ರಕ್ಷಕರಾಗಬೇಕು

Share
Share

ಚಿಕ್ಕಮಗಳೂರು: : ಪ್ರಸ್ತುತ ದಿನಗಳಲ್ಲಿ ಹಿರಿಯರನ್ನು ಕಡೆಗಣಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದು ದುರದೃಷ್ಟಕರ. ಪ್ರತಿ ಮನೆಯ ಹಿರಿಯ ಹಾಗೂ ಅಮೂಲ್ಯ ಜೀವಗಳಿಗೆ ಇಳಿವಯಸ್ಸಿನಲ್ಲಿ ನಾವು ರಕ್ಷಕರಾಗಬೇಕು ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಗರ ಸಭೆ, ವಾರ್ತಾ ಇಲಾಖೆ, ವಿಕಲಚೇತನರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಎಲ್ಲಾ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಶೆಟ್ಟರ ಬೀದಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ೨೦೨೫-೨೬ನೇ ಸಾಲಿನ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಾಗೂ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಂದೆ, ತಾಯಿ, ಅಜ್ಜ, ಅಜ್ಜಿ ಸೇರಿದಂತೆ ಹಿರಿಯರು ಇರುವ ಮನೆ ತುಂಬಿದ ಕೊಡವಿದ್ದಂತೆ. ಅವರ ಮಾರ್ಗದರ್ಶನ, ಸಲಹೆಗಳು ಕಿರಿಯರಿಗೆ ಸದಾ ಬೇಕಾಗುತ್ತವೆ. ದಾರಿ ತಪ್ಪದಂತೆ ನಮ್ಮನ್ನು ತಿದ್ದಿ, ತೀಡಿ ಸರಿ ದಾರಿಯಲ್ಲಿ ನಡೆಯುವಂತೆ ಹಿರಿಯರು ಮಾಡುತ್ತಾರೆ. ಆದರೆ ಅವರ ಮಾತುಗಳನ್ನು ನಕಾರಾತ್ಮಕವಾಗಿ ತೆಗೆದುಕೊಂಡು ನಿರ್ಲಕ್ಷ್ಯ ಮಾಡುವುದು ಇಂದಿನ ದಿನಗಳಲ್ಲಿ ಹೆಚ್ಚಾಗಿದೆ ಎಂದ ಅವರು, ಹಿರಿಯರ ಹಿತಾಸಕ್ತಿ ಕಾಪಾಡುವ ಸಲುವಾಗಿಯೇ ತಂದೆ ತಾಯಿಯಿಂದ ಆಸ್ತಿ ಪಡೆದ ನಂತರ ಅವರ ಪಾಲನೆ, ಪೋಷಣೆ ಮಾಡದಿದ್ದರೆ ಕಾನೂನಿನ ಮೂಲಕ ಆಸ್ತಿ ವಾಪಸ್ಸು ಪಡೆದುಕೊಳ್ಳುವ ಅವಕಾಶವನ್ನು ನಮ್ಮ ಸರ್ಕಾರ ಕಲ್ಪಿಸಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಿರಿಯ ನಾಗರಿಕರಿಗೆ ನೀಡುತ್ತಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಈ ದಿನ ಹಿರಿಯರ ಹಕ್ಕುಗಳನ್ನು ಗೌರವಿಸಲು ಮತ್ತು ಅವರ ಮಾರ್ಗದರ್ಶನವನ್ನು ಅನುಸರಿಸಲು ನಮಗೆ ಸ್ಫೂರ್ತಿ ನೀಡುತ್ತದೆ. ಈ ದಿನವನ್ನು ಸುಂದರಗೊಳಿಸಲು, ಪೋ?ಕರು, ಅಜ್ಜ-ಅಜ್ಜಿ ಮತ್ತು ಮನೆಯಲ್ಲಿ ವಾಸಿಸುವ ಇತರ ಹಿರಿಯರೊಂದಿಗೆ ಸಮಯ ಕಳೆಯುವುದು ಅಗತ್ಯ. ಅವರಿಗೆ ಇದಕ್ಕಿಂತ ಉತ್ತಮವಾದ ಉಡುಗೊರೆ ಇನ್ನೊಂದಿಲ್ಲ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ಹಿರಿಯ ನಾಗರಿಕರು ಸಮಾಜದ ಆಸ್ತಿ. ಬಹಳ? ಜನರು ಅವರನ್ನು ಅನಾಥಾಶ್ರಮ, ಹಿರಿಯ ಮನೆಗಳಿಗೆ ಬಿಟ್ಟು ಬರುವ ಮೂಲಕ ಜೀವಂತ ಇರುವಾಗಲೇ ಅವರನ್ನು ಒಂಟಿಯಾಗಿ ಮಾಡಿ ನೋವು ಕೊಡುತ್ತಿದ್ದಾರೆ. ಹೀಗೆ ಮಾಡುವವರನ್ನು ಮುಂದೆ ಅವರ ಮಕ್ಕಳು ಅನಾಥರಾಗಿಸಿ ದೂರ ಮಾಡಿದರೆ ಪರಿಸ್ಥಿತಿ ಏನು ಎಂಬುದನ್ನು ಅರ್ಥೈಸಿಕೊಂಡು ಬದಲಾಗಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೆಶಕರಾದ ಶ್ರೀನಿವಾಸ ವೈ ಆಲದಾರ್ತಿ, ನಿರೂಪಣಾಧಿಕಾರಿ ಡಿ.ಸಂತೋsಷ್ ಭಾಗವಹಿಸಿದ್ದರು.

We must be protectors of the elderly in their old age.

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...