Home namma chikmagalur ಬಸವನಹಳ್ಳಿ ಪೊಲೀಸ್ ಠಾಣೆ ಸಹಯೋಗದಲ್ಲಿ ನಡೆದ ಕ್ರಿಕೇಟ್ ಪಂದ್ಯಾವಳಿ
namma chikmagalurchikamagalurHomeLatest News

ಬಸವನಹಳ್ಳಿ ಪೊಲೀಸ್ ಠಾಣೆ ಸಹಯೋಗದಲ್ಲಿ ನಡೆದ ಕ್ರಿಕೇಟ್ ಪಂದ್ಯಾವಳಿ

Share
????????????????????????????????????
Share

ಚಿಕ್ಕಮಗಳೂರು: – ಮಾದಕ ವ್ಯಸನದಿಂದ ದೂರವಿರಲು ಕ್ರೀಡೆ ಸಹಕಾರಿ. ಯುವ ಸಮೂಹ ದುಶ್ಚಟಗಳಿಗೆ ಹೆಚ್ಚಿನ ಮಹತ್ವ ಕೊಡದೇ, ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಮಾಜಕ್ಕೆ ಮಾದರಿ ಪ್ರಜೆಯಾಗಬೇಕು ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

ನಗರದ ಉಪ್ಪಳ್ಳಿ ಬಡಾವಣೆಯ ಸಮೀಪ ಭಾನುವಾರ ಮಾಸ್ಟ್‌ರ್‍ಸ್ ಕ್ರಿಕೇಟ್ ಕ್ಲಬ್ ಹಾಗೂ ಬಸವನಹಳ್ಳಿ ಪೊಲೀಸ್ ಠಾಣೆ ಸಹಯೋಗದಲ್ಲಿ ಹಮ್ಮಿಕೊಂಡಿದ್ಧ ಕ್ರೀಕೇಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತ ನಾಡಿದರು.

ಮಾದಕ ದ್ರವ್ಯಗಳ ಕಳ್ಳ ಮಾರಾಟ ಹಾಗೂ ಖರೀದಿಸುವ ಯಾವುದೇ ಬಲಾಡ್ಯ ವ್ಯಕ್ತಿ ಅಥವಾ ಪಕ್ಷದ ಮುಖಂಡರು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು ಯುವ ಕರ ಭವಿಷ್ಯ ಹಾಳು ಮಾಡುವ ಸಮಾಜಘಾತುಕರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದರು.

ಭವಿಷ್ಯದಲ್ಲಿ ಸಮಾಜಕ್ಕೆ ಮಾದರಿಯಾಗುವ ಯುವಕರ ಜೀವನ ಸದೃಢಗೊಳಿಸುವ ನಿಟ್ಟಿನಲ್ಲಿ ಇಂದಿನ ಪಂದ್ಯಾವಳಿ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಜಾಗೃತಿ ಮೂಡಿಸುತ್ತಿರುವುದು ಹೆಮ್ಮೆಯ ಸಂಗತಿ. ಹೀಗಾಗಿ ಪಾಲಕರ ಕನಸು ಹಾಗೂ ಗುರುಹಿರಿಯರ ಶ್ರಮಕ್ಕೆ ಬೆಳಕು ಚೆಲ್ಲುವ ಕೆಲಸ ಯುವಜನತೆಗೆ ಮಾಡ ಬೇಕಿದೆ ಎಂದು ಹೇಳಿದರು.

ಕ್ರೀಡಾಕೂಟಕ್ಕೆ ಮನಸ್ಸನ್ನು ಕಟ್ಟಿಗೊಳಿಸುವ ಶಕ್ತಿಯಿದ್ದು ಸದೃಢಗೊಳಿಸುವ ಸಾಮರ್ಥ್ಯ ಯುವಕರಲ್ಲಿ ಬ ರಬೇಕಿದೆ. ಇಂದಿನ ಉಪ್ಪಳ್ಳಿಯ ಪಂದ್ಯಾವಳಿ ಸರ್ವ ಧರ್ಮದ ಸಹೋದರರು ಒಟ್ಟಾಗಿ ಆಡುವ ಮೂಲಕ ಮುಂದಿನ ಮಕ್ಕಳ ಭವಿಷ್ಯವನ್ನು ಸನ್ನಡತೆಯತ್ತ ಕೊಂಡೊಯ್ಯಲು ಮುಂದಾಗುತ್ತಿರುವುದು ಉತ್ತಮ ವಿಚಾ ರ ಎಂದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ ಕ್ರೀಡೆಗಳು ಜೀವನೋತ್ಸವವನ್ನು ಹೆಚ್ಚಿಸುವ ಜೊತೆ ಗೆ ಆರೋಗ್ಯಪೂರ್ಣ ಶರೀರಕ್ಕೆ ನಾಂದಿಯಾಗಲಿದೆ. ನಿರಂತರ ಕಲಿಕೆ ಜೊತೆಗೆ ಪರಿಸರ ಸಂರಕ್ಷಣೆ ಬಗ್ಗೆ ಪ್ರ ಮುಖ ಕಾಳಜಿವಹಿಸಬೇಕು. ಆ ನಿಟ್ಟಿನಲ್ಲಿ ಇಂದಿನಿಂದಲೇ ಪ್ರತಿಜ್ಞೆ ಅಳವಡಿಸಿ ವ್ಯಸನದಿಂದ ಮುಕ್ತರಾಗಿಸಲು ಚಿಂತನೆ ನಡೆಸಬೇಕು ಎಂದು ಹೇಳಿದರು.

ನಮ್ಮಗಳ ಉಪಸನ ಪದ್ಧತಿ ಬೇರೆಯಾದರೂ, ಭಾರತೀಯ ಸಂಸ್ಕೃತಿ ಒಂದೇ. ಉಪಕಾರಿಯಾಗಿ ಸ್ಮರಿ ಸುವ ಭಾರತೀಯ ಸಂಸ್ಕೃತಿ ಜೊತೆಗೆ ಪರಿಸರ ಸಂರಕ್ಷಣೆಯ ಆಳವಾದ ಅರಿವು ಹೊಂದಬೇಕು. ಪರಿಸರದ ಒಳಿತನ್ನು ಮುಂದಿಟ್ಟಾಗ ನೈಸರ್ಗಿಕ ಪರಿಸರ ಉಳಿಸಲು ಸಾಧ್ಯ ಎಂದರು.

ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಜಯಕುಮಾರ್ ಮಾತನಾಡಿ ಮಾದಕ ವ್ಯಸನ ಕಡಿವಾಣಗೊಳಿ ಸಲು ಇಲಾಖೆಯಿಂದ ಅನೇಕ ಕಾರ್ಯಕ್ರಮ ನಡೆಸುವ ಜೊತೆಗೆ ಹದ್ದಿನ ಕಣ್ಣಿರಿಸಿದೆ. ಸಾರ್ವಜನಿಕರು, ಸಾ ಮಾಜಿಕ ಮುಖಂಡರುಗಳು ಸಮಾಜದ ಒಳಿತಿಗಾಗಿ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದರು.

ನಗರಸಭಾ ಸದಸ್ಯ ಮುನೀರ್ ಅಹ್ಮದ್ ಮಾತನಾಡಿ ಉಪ್ಪಳ್ಳಿಯ ವಿವಿಧ ಸಂಘ-ಸಂಸ್ಥೆಗಳ ಹಾಗೂ ಪೊಲಿಸ್ ಇಲಾಖೆ ಸಹಯೋಗದಲ್ಲಿ ೪೦ ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಕ್ರೀಡಾಕೂಟ ಆಯೋಜಿಸಿದ್ದು ಒಟ್ಟು ನಾಲ್ಕು ತಂಡಗಳು ಭಾಗವಹಿಸಿದ್ದು ೮ ಓವರ್‌ಗೆ ಸೀಮಿತಗೊಳಿಸಿದೆ. ಯಾವುದೇ ಸ್ಫರ್ಧೆಯಿಲ್ಲದೇ ಸ್ನೇಹತ್ವ ದಿಂದ ಪಂದ್ಯಾವಳಿ ನಡೆಯುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್, ಸದಸ್ಯರಾದ ಖಲಂದರ್, ಮಣಿಕಂಠ, ಟೇಸ್ಟಿ ವರ್ಲ್ಡ್ ಮಾಲೀಕ ಎಂ.ಎನ್.ಅರವಿಂದ್, ಸಿಡಿಎ ಸದಸ್ಯ ಸುದೀಪ್, ಸವನಹಳ್ಳಿ ಠಾಣೆ ಇನ್ಸ್‌ಪೆಕ್ಟರ್ ಅಜು ರುದ್ದೀನ್, ಆಯೋಜಕರಾದ ಅನ್ಸರ್‌ಆಲಿ, ಜಮಾಲ್, ಮುಜ್ಜು, ನಂದೀಶ್, ಸಲೀಂ, ಸಾಹೀರ್ ಮತ್ತಿತರ ರಿದ್ದರು.

Cricket tournament held in collaboration with Basavanahalli Police Station

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...