Home namma chikmagalur ಕ್ರೇನ್–ಸ್ಕೂಟರ್ ಡಿಕ್ಕಿ; ಅಂಗನವಾಡಿ ಶಿಕ್ಷಕಿ ಸಾವು
namma chikmagalurchikamagalurCrime NewsHomeLatest News

ಕ್ರೇನ್–ಸ್ಕೂಟರ್ ಡಿಕ್ಕಿ; ಅಂಗನವಾಡಿ ಶಿಕ್ಷಕಿ ಸಾವು

Share
Share

ಮೂಡಿಗೆರೆ: ಚಾಲಕನ ನಿಯಂ ತ್ರಣ ತಪ್ಪಿದ ಕ್ರೇನ್ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನ ಪ್ಪಿದ್ದ ಘಟನೆ ಬುಧವಾರ ಬೆಳಿಗ್ಗೆ  ಪಟ್ಟಣದ ಕಾಲೇಜು ರಸ್ತೆಯಲ್ಲಿ ನಡೆದಿದೆ.

ತಾಲ್ಲೂಕಿನ ಹಳ್ಳದಗಂಡಿ ಗ್ರಾಮದ ಅಂಗನವಾಡಿ ಶಿಕ್ಷಕಿ ಸಂಪ್ರೀತ (21) ಮೃತಪಟ್ಟವರು. ಹೆಸ್ಗಲ್ ಗ್ರಾಮದ ಕಡೆಮಾಡ್ಕಲ್ ಅಂಗನವಾಡಿ ಶಿಕ್ಷಕಿ ಸುಜಾತ (28) ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೆಸ್ಗಲ್ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ತಯಾರಿ ನಡೆಸಿ, ಬಳಿಕ ಕಾರ್ಯಕ್ರಮಕ್ಕೆ ಕಾಲೇಜು ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಚಾಲಕನ‌ ನಿಯಂತ್ರಣ ತಪ್ಪಿದ ಕ್ರೇನ್, ಸ್ಕೂಟರ್ ಮೇಲೇರಿದ್ದು ಸ್ಕೂಟರ್‌ನಲ್ಲಿದ್ದ ಸಂಪ್ರೀತ ಕ್ರೇನ್ ಅಡಿಗೆ‌ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಮೃತದೇಹವನ್ನು ಹೊರ ತೆಗೆಯಲು ಹರಸಾಹಸ ಪಡುವಂತಾಯಿತು. ಸ್ಕೂಟರ್ ನಜ್ಜುಗುಜ್ಜಾಗಿದ್ದು, ಗಾಯಗೊಂಡಿರುವ ಸುಜಾತ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟ ಸಂಪ್ರೀತ ಅವರು, ಕೆಲವು ದಿನಗಳ ಹಿಂದೆ ಮನೆ‌ ನಿರ್ಮಿಸಿ ಗೃಹ ಪ್ರವೇಶ ನಡೆಸಿದ್ದರು. ಸುಜಾತ ಹೆಸ್ಗಲ್ ಗ್ರಾ.ಪಂ. ಕರವಸೂಲಿಗಾರ ರವಿ ಅವರ ಪತ್ನಿಯಾಗಿದ್ದು, ಒಂಬತ್ತು ತಿಂಗಳ ಮಗುವಿದೆ. ಆಸ್ಪತ್ರೆ ಆವರಣದಲ್ಲಿ ಸಂಬಂ ಧಿಕರ ಆಕ್ರಂದನ‌ ಮುಗಿಲು ಮುಟ್ಟಿತ್ತು.

Crane-scooter collision; Anganwadi teacher dies

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....