Home Latest News ಅಕ್ರಮವಾಗಿ ಸಾಗುವಾನಿ ಕಡಿತ- ಮೂವರ ಬಂಧನ
Latest NewschikamagalurCrime NewsHomenamma chikmagalur

ಅಕ್ರಮವಾಗಿ ಸಾಗುವಾನಿ ಕಡಿತ- ಮೂವರ ಬಂಧನ

Share
Share

ಕೊಟ್ಟಿಗೆಹಾರ : ಮಲೆನಾಡಿನ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗುವಾನಿ ಮರಗಳನ್ನು ಕತ್ತರಿಸಿ ಸಾಗಿಸುತ್ತಿದ್ದ ಕಳ್ಳರ ಮೇಲೆ ಅರಣ್ಯ ಇಲಾಖೆಯ ಮಿಂಚಿನ ಕಾರ್ಯಾಚರಣೆ ನಡೆದಿದೆ.

ಮೂಡಿಗೆರೆ ಪ್ರಾದೇಶಿಕ ಅರಣ್ಯ ವಲಯದ ಭಾರತಿಬೈಲು ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುಹಾಸ್ ಅವರ ನೇತೃತ್ವದಲ್ಲಿ ಖಚಿತ ಮಾಹಿತಿ ಆಧರಿಸಿ ನಡೆಸಿದ ದಾಳಿಯಲ್ಲಿ, ಮಾರುತಿ ಓಮ್ನಿ ವಾಹನವನ್ನು ಬೆನ್ನಟ್ಟಿ ತಡೆದು ಪರಿಶೀಲನೆ ನಡೆಸಲಾಗಿದ್ದು, ಅದರಲ್ಲಿ ಅಕ್ರಮವಾಗಿ ಕತ್ತರಿಸಲಾದ ೦೫ ಸಾಗುವಾನಿ ತುಂಡುಗಳು ಪತ್ತೆಯಾದವು.

ಸದ್ಯದ ವಾಹನ ಹಾಗೂ ಸಾಗುವಾನಿ ದಿಮ್ಮಿಗಳನ್ನು ಸರ್ಕಾರದ ಪರವಾಗಿ ಜಪ್ತಿ ಮಾಡಲಾಗಿದ್ದು, ಮೂರು ಮಂದಿ ಆರೋಪಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಸುಹಾಸ್ ಅವರೊಂದಿಗೆ ಅರಣ್ಯ ರಕ್ಷಕರಾದ ಲಕ್ಷ್ಮಣ, ಗಿರೀಶ್ ಮತ್ತು ಸುಧೀರ್ ಶ್ರಮಿಸಿ, ಯಶಸ್ವಿ ಕಾರ್ಯಾಚರಣೆಗೆ ಕಾರಣರಾದರು.

ಕಾರ್ಯಾಚರಣೆಯ ದಕ್ಷತೆಯನ್ನು ಪರಿಗಣಿಸಿ, ಅರಣ್ಯ ಇಲಾಖೆಯ ವತಿಯಿಂದ ಸುಹಾಸ್ ಹಾಗೂ ಅವರ ತಂಡಕ್ಕೆ ಉತ್ತೇಜನಕಾರಿ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು. ಮೂಡಿಗೆರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಕರ್ಷ ಹಾಗೂ ವಲಯ ಅರಣ್ಯಾಧಿಕಾರಿ ಮಂಜುನಾಥ ಅವರ ಮಾರ್ಗದರ್ಶನದಲ್ಲಿ ನಡೆದ ಈ ಮಿಂಚಿನ ದಾಳಿ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಸಾಗುವಾನಿ ಕಳ್ಳತನಕ್ಕೆ ತಡೆಯೊಡ್ಡುವಂತೆ ಮಾಡಿದೆ

Three arrested for illegally cutting sago

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...