Home namma chikmagalur ಶ್ರೀಗಂಧ ಸಾಗಿಸುತ್ತಿದ್ದ ಪತ್ರಕರ್ತ ಸೇರಿ ಇಬ್ಬರ ಬಂಧನ
namma chikmagalurchikamagalurHomeLatest News

ಶ್ರೀಗಂಧ ಸಾಗಿಸುತ್ತಿದ್ದ ಪತ್ರಕರ್ತ ಸೇರಿ ಇಬ್ಬರ ಬಂಧನ

Share
Share

ಮೂಡಿಗೆರೆ: ‘ಪ್ರೆಸ್’ ಎಂದು ಬರೆಸಿದ್ದ ಬೈಕ್‌ನಲ್ಲಿ ಶ್ರೀಗಂಧ ಸಾಗಿಸುತ್ತಿದ್ದ ಆರೋಪದಲ್ಲಿ ಹಾಸನದಿಂದ ಪ್ರಕಟವಾಗುವ ಸ್ಥಳೀಯ ಪತ್ರಿಕೆಯ ವರದಿಗಾರ ಸೇರಿ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ತಾಲ್ಲೂಕಿನ ಹಂಡಗುಳಿ ಮೂಲದ, ಪಟ್ಟಣ ನಿವಾಸಿ ಪತ್ರಕರ್ತ ಎಚ್.ಆರ್. ಮನ್ಸೂರ್ ಹಾಗೂ ಹ್ಯಾಂಡ್ ಪೋಸ್ಟ್ ಬಳಿಯ ನಿವಾಸಿ ಎಂ.ಕೆ. ಯೂಸೂಫ್ ಬಂಧಿತರು.

ಹಂಡುಗುಳಿ ಸಮೀಪದ ನವಗ್ರಾಮದ ಬಳಿ ಬುಧವಾರ ರಾತ್ರಿ ಬೈಕ್‌ನಲ್ಲಿ ಇಬ್ಬರು ಶ್ರೀಗಂಧ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಅರಣ್ಯಾಧಿಕಾರಿಗಳ ತಂಡ, ಬೈಕನ್ನು ಬೆನ್ನಟ್ಟಿ ಹಿಡಿದು ಪರಿಶೀಲಿಸಿದಾಗ, ಶ್ರೀಗಂಧದ 8 ತುಂಡುಗಳು ಪತ್ತೆಯಾಗಿದವು.

ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ಶ್ರೀಗಂಧವನ್ನೂ ವಶಕ್ಕೆ ಪಡೆದಿದ್ದಾರೆ.

ಆರೋಪಿಗಳನ್ನು ಗುರುವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಜಿ.ಮಂಜುನಾಥ್, ಡಿಆರ್‌ಎಫ್ಒ ಅಶ್ವತ್ಥ್‌, ಸಿಬ್ಬಂದಿ ಜೆ.ಜಿ.ಉಮೇಶ್, ಎ.ಎಸ್.ಸುರೇಶ್, ಸುಮಂತ್ ನವರಾಜ್, ಭಾಗವಹಿಸಿದ್ದರು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Two people including a journalist arrested for transporting sandalwood
Share

Leave a comment

Leave a Reply

Your email address will not be published. Required fields are marked *

Don't Miss

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು. ಬೈಪಾಸ್ ರಸ್ತೆಯ ನರ್ಚರ್...

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ. ಇತ್ತೀಚೆಗೆ...

Related Articles

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ...

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು...