Home namma chikmagalur ವಿಜ್ಞಾನಿಗಳು ಜೀವನವನ್ನು ಬಾಹ್ಯಕಾಶದ ಸೇವೆಗೆ ಮೀಸಲಿಟ್ಟು ರಾಷ್ಟ್ರದ ಘನತೆ ಹೆಚ್ಚಿಸಿದ್ದಾರೆ
namma chikmagalurchikamagalurHomeLatest News

ವಿಜ್ಞಾನಿಗಳು ಜೀವನವನ್ನು ಬಾಹ್ಯಕಾಶದ ಸೇವೆಗೆ ಮೀಸಲಿಟ್ಟು ರಾಷ್ಟ್ರದ ಘನತೆ ಹೆಚ್ಚಿಸಿದ್ದಾರೆ

Share
Share

ಚಿಕ್ಕಮಗಳೂರು: – ವಿಜ್ಞಾನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ವಿಜ್ಞಾನಿಗಳಿಗೆ ಸಮಾ ಜದಲ್ಲಿ ಬಹಳಷ್ಟು ಗೌರವವಿದೆ. ಕೆಲವರು ಸಂಪೂರ್ಣ ಜೀವನವನ್ನು ಬಾಹ್ಯಕಾಶದ ಸೇವೆಗೆ ಮೀಸಲಿ ಟ್ಟು ರಾಷ್ಟ್ರದ ಘನತೆ ಹೆಚ್ಚಿಸಿದ್ದಾರೆ ಎಂದು ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇ ಶ್ ಹೇಳಿದರು.

ನಗರದ ರೋಟರಿ ಸಭಾಂಗಣದಲ್ಲಿ ಗುರುವಾರ ಭಾರತೀಯ ಬಾಹ್ಯಕಾಶ ಕೇಂದ್ರ, ಟೌನ್ ಮಹಿಳಾ ಸಮಾಜ ಸಮೂಹ ಶಿಕ್ಷಣ ಸಂಸ್ಥೆ, ತಕ್ಷ್ ಅಕಾಡೆಮಿ, ರೋಟರಿ ಸಂಸ್ಥೆ ಮತ್ತು ವ್ಹಿಲ್ ಸಂಸ್ಥೆ ಸಹಯೋಗದ ಲ್ಲಿ ಆಯೋಜಿಸಿದ್ಧ ವಿಶ್ವ ಬಾಹ್ಯಕಾಶ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಯುವಜನತೆ ವಿಜ್ಞಾನ ಕ್ಷೇತ್ರಕ್ಕೆ ಒತ್ತು ನೀಡುತ್ತಿಲ್ಲ. ವೈಯಕ್ತಿಕ ಕುಟುಂಬದ ಆಲೋ ಚನೆಯಲ್ಲಿ ವೇತನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಆ ನಿಟ್ಟಿನಲ್ಲಿ ಇಸ್ರೋ ಸಂಸ್ಥೆ ವಿಜ್ಞಾನದ ಸಮಗ್ರ ಮಾಹಿತಿಗಳನ್ನು ಪರಿಚಯಿಸಲು ಸಪ್ತಾಹ ಆಚರಿಸಿ ಬಾಹ್ಯಕಾಶದ ಹಿನ್ನೆಲೆ ತಿಳಿಯಪಡಿಸುತ್ತಿರುವುದು ಹೆಮ್ಮೆ ಯ ಸಂಗತಿ ಎಂದರು.

೧೯೬೨ರಲ್ಲಿ ಮಾಜಿ ಪ್ರಧಾನಿ ನೆಹರು ಅವರು ಸಂಶೋಧಕರೊಂದಿಗೆ ಚರ್ಚಿಸಿ ಇಸ್ರೋ ಸಂಸ್ಥೆ ಪ್ರಾರ ಂಭಿಸಿದರು. ಇಂದಿಗೂ ಮಾನವ ಚಂದ್ರಯಾನ, ಮಂಗಳಯಾನ ಹಾಗೂ ರಾಕೇಟ್ ಉಡಾವಣೆಗಳಂಥ ಭೂಮಿಯಿಂದ ಹೊರಪ್ರಪಂಚಕ್ಕೆ ತೆರಳಲು ವಿಜ್ಞಾನಿಗಳ ಕಠಿಣ ಪರಿಶ್ರಮ ಹಾಗೂ ತಂತ್ರಜ್ಞಾನವೇ ಕಾರಣ ವಾಗಿದೆ ಎಂದು ತಿಳಿಸಿದರು.

ಇಂದಿಗೂ ರಾಷ್ಟ್ರದ ಪ್ರಜೆಗಳಾದ ಸುಭಾಶ್ ಶುಕ್ಲ, ಸುನೀತಾ ವಿಲಿಯಂ ಸೇರಿದಂತೆ ಅನೇಕರು ಭೂಮಿ ಯ ಗುರುತ್ವಾಕರ್ಷಣೆ ಇಲ್ಲದಿರುವ ಪ್ರದೇಶಕ್ಕೆ ತೆರಳಿ ತಿಂಗಳುಗಟ್ಟಲೇ ಅಧ್ಯಯನ ನಡೆಸಿ ಮರಳಿ ಭೂಮಿ ಯತ್ತ ಬಂದು ಸಾಧನೆ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಯುವವಿಜ್ಞಾನಿಗಳು ಸಾಧಕರ ಬದುಕನ್ನು ಆದರ್ಶವಾಗಿ ಟ್ಟುಕೊಂಡು ವಿಜ್ಞಾನ ಜಗತ್ತಿಗೆ ಹೆಜ್ಜೆ ಹಾಕಬೇಕು ಎಂದರು.

ಮಕ್ಕಳಿಗೆ ಪಠ್ಯದ ಚಟುವಟಿಕೆ ಜೊತೆಗೆ ಬಾಹ್ಯಕಾಶದ ಚಟುವಟಿಕೆಗಳನ್ನು ಪರಿಚಯಿಸಲು ಇಸ್ರೋ ಸಂ ಸ್ಥೆ ಮುಂದಾಗಿದ್ದು ಇವುಗಳನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು. ಜೊತೆಗೆ ರಸಪ್ರಶ್ನೆ ಸ್ಪರ್ಧೆ ಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ವಿಜೇತರಾಗಿ ಹೊರಹೊಮ್ಮಬೇಕು. ಈ ಸಾಧನೆಗೆ ಗುರುಗಳು, ಪಾಲಕರು ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಆರ್.ರುದ್ರಪ್ಪ ಮಾತನಾಡಿ ಸಮಾಜದಲ್ಲಿ ವಿಜ್ಞಾನಿಗಳ ಸಂಖ್ಯೆ ಇಳಿಕೆಗೊಂಡು ವೈದ್ಯ ಹಾಗೂ ಇಂಜಿನಿಯರ್ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ಮಕ್ಕಳಲ್ಲಿ ಇಸ್ರೋ ಬಾಹ್ಯಕಾಶದ ಕುತೂ ಹಲವನ್ನು ಮೂಡಿಸಿ ಪ್ರೇರೇಪಿಸಬೇಕು. ಮೊಬೈಲ್ ರೀಲ್ಸ್‌ಗಳ ವ್ಯಕ್ತಿಗಳನ್ನು ಅನುಸರಿಸದೇ, ವಿಜ್ಞಾನ ಕ್ಷೇತ್ರ ದ ಸಾಧಕರನ್ನು ನಾಯಕರೆಂದು ಭಾವಿಸಬೇಕು ಎಂದರು.

ಪ್ರಸ್ತುತ ದಿನದಲ್ಲಿ ಗೂಗಪ್‌ಪ್ಯಾಪ್ ತಂತ್ರಜ್ಞಾನವು ಕ್ಷಣಾರ್ಧದಲ್ಲಿ ದಾರಿ ತೋರಿಸುತ್ತದೆ. ವಿಶ್ವವಿಖ್ಯಾತ ವಿಶ್ವೇಶ್ವರಯ್ಯ ಅವರ ಮೆದುಳು ಸಹ ಶೇ.೨೨ ರಷ್ಟು ಬಳಕೆಯಲ್ಲಿದೆ ಎಂದು ಅಧ್ಯಯನಗಳು ತಿಳಿಸುತ್ತೇವೆ. ಆದರೆ ಇಂದಿನ ದಿನದಲ್ಲಿ ಯುವಸಮೂಹ ಕೇವಲ ಶೇ.೨ರಷ್ಟು ಮಾತ್ರ ಮೆದುಳು ಕೆಲಸ ಮಾಡುತ್ತಿದ್ದು ಈ ಬಗ್ಗೆ ಅವಲೋಕಿಸಬೇಕು ಎಂದು ಹೇಳಿದರು.

ಭಾರತೀಯ ಬಾಹ್ಯಕಾಶ ಸಂಸ್ಥೆ ವಿಜ್ಞಾನಿ ಸೌಭಾಗ್ಯ ಮಾತನಾಡಿ ಮಾನವ ಸ್ಥಿತಿಯ ಸುಧಾರಣೆಗೆ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆಗಳನ್ನು ಆಚರಿಸಲು ೧೯೯೯ರಲ್ಲಿ ವಿಶ್ವ ಬಾಹ್ಯಾಕಾಶ ದಿನ ಸ್ಥಾಪಿಸಿ, ವಿಶ್ವದ ಅತಿದೊಡ್ಡ ಬಾಹ್ಯಾಕಾಶ ಕಾರ್ಯಕ್ರಮ ರೂಪುಗೊಂಡಿತು ಎಂದು ಹೇಳಿದರು.

ಬಾಹ್ಯಕಾಶ ಸಂಶೋಧನೆಯು ನಮ್ಮ ಜೀವನವನ್ನು ಸುಧಾರಿಸಲು ಹಾಗೂ ಅವಕಾಶಗಳನ್ನು ಸೃಷ್ಟಿಸ ಲು ಸಹಾಯಕ. ಬಾಹ್ಯಕಾಶ ವಿಜ್ಞಾನದಲ್ಲಿ ಯುವಕರ ಆಸಕ್ತಿಯನ್ನು ಉತ್ತೇಜಿಸಲು ವಿಶ್ವ ಬಾಹ್ಯಕಾಶ ಸಪ್ತಾ ಹ ಒಂದು ವೇದಿಕೆಯಾಗಿ ಯುವಪ್ರತಿಭೆಗಳನ್ನು ಬಾಹ್ಯಕಾಶ ಕ್ಷೇತ್ರಕ್ಕೆ ಆಕರ್ಷಿಸುವ ಒಂದು ಆಚರಣೆಯಾ ಗಿದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಮ್ಮರಾಜು ಮಾತನಾಡಿ ವಿದ್ಯಾರ್ಥಿಗಳು ವಿಜ್ಞಾನದ ಜೊತೆಗೆ ಪರಿಸರ ಪ್ರಜ್ಞೆ ಮೂಡಿಸಿಕೊಳ್ಳಬೇಕು. ಪ್ರಸ್ತುತ ಮಾನವ ಆಹಾರ ಪದಾರ್ಥ, ಹಾಲು ಸೇರಿದಂತೆ ಎಲ್ಲವು ಕಲುಷಿತವಾಗುತ್ತಿದೆ. ಅಲ್ಲದೇ ಪ್ಲಾಸ್ಟಿಕ್ ಬಳಕೆ ಹೆಚ್ಚಳಗೊಳ್ಳುತ್ತಿರುವ ಪರಿಣಾಮ ಸ್ವಚ್ಚಂಧ ಪರಿಸರಕ್ಕೆ ಹಾನಿಯಾಗುತ್ತಿದ್ದು ಮುಂದಿನ ಯುವಜನತೆಗೆ ಸರಿಪಡಿಸುವ ಮಾರ್ಗ ತಿಳಿಸಬೇಕು ಎಂದರು.

ಇದೇ ವೇಳೆ ವಿವಿಧ ಶಾಲೆಗಳಿಂದ ಆಗಮಿಸಿ ೫೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಸಪ್ರಶ್ನೆ, ಆಶುಭಾಷಣ, ಚಿತ್ರಕಲೆ ಹಾಗೂ ಜ್ಞಾಪಕಶಕ್ತಿ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷ ಎನ್.ಪಿ. ಲಿಖಿತ್, ಟಿಎಂಎಸ್ ಕಾರ್ಯದರ್ಶಿ ಟಿ.ಈ.ಶುಭದ, ಪ್ರಾಂಶುಪಾಲ ಇಂದ್ರೇಶ್, ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡಾ|| ಚೇತನ್‌ಕುಮಾರ್, ಮುಖ್ಯೋಪಾಧ್ಯಾಯ ಎಂ.ಎಸ್.ನಟರಾಜ್, ವಿದ್ಯಾರ್ಥಿಗಳು ಉಪ ಸ್ಥಿತರಿದ್ದರು.

Scientists have dedicated their lives to the service of outer space and enhanced the dignity of the nation.

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...