Home namma chikmagalur ಸಿಡಿಎ ವಂಚನೆ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆ
namma chikmagalurchikamagalurHomeLatest News

ಸಿಡಿಎ ವಂಚನೆ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆ

Share
????????????????????????????????????
Share

ಚಿಕ್ಕಮಗಳೂರು:  ಇಂದಾವರ ಗ್ರಾಮಸ್ಥರ ಜಮೀನನ್ನು ನಿವೇಶನಗಳನ್ನಾಗಿ ಪರಿವ ರ್ತಿಸುವಂತೆ ಸಿಡಿಎ ಇಲಾಖೆ ಒಡಂಬಡಿಕೆಯಲ್ಲಿ ಜಮೀನನ್ನು ಪಡೆದುಕೊಂಡು ರೈತರಿಗೆ ವಂಚಿಸಲಾಗುತ್ತಿದೆ ಎಂದು ಆರೋಪಿಸಿ ಗುರುವಾರ ಸಿಡಿಎ ಕಚೇರಿ ಎದುರು ಇಂದಾವರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಈ ಕುರಿತು ಮಾತನಾಡಿದ ಗ್ರಾಮಸ್ಥ ಯತೀಶ್ ಗ್ರಾಮದ ಸುಮಾರು ೨೦೮ ಎಕರೆ ಪ್ರದೇಶವನ್ನು ಸಿಡಿ ಎ ಇಲಾಖೆ ಪರಸ್ಪರ ಒಪ್ಪಂದ ಮೇರೆಗೆ ಪಡೆದುಕೊಂಡು ಸುಮಾರು ಮೂರ್‍ನಾಲ್ಕು ವರ್ಷಗಳೇ ಕಳೆದರೂ ಇಂದಿಗೂ ಲೇಔಟ್ ನಿರ್ಮಾಣಗೊಂಡಿಲ್ಲ. ಇನ್ನೊಂದೆಡೆ ರೈತರ ಜಮೀನನ್ನು ಹಿಂತಿರುಗಿಸುತ್ತಿಲ್ಲ ಎಂದು ಆರೋಪಿಸಿದರು.

ಗ್ರಾಮದ ಜಮೀನನ್ನು ಸರಿಯಾಗಿ ನಿವೇಶನಗಳನ್ನಾಗಿ ಮಾರ್ಪಡಿಸದೇ ಸಿಡಿಎ ಇಲಾಖೆ, ಇದೀಗ ಮ ತ್ತೊಂದು ಸ್ಥಳದಲ್ಲಿ ರೈತರಿಂದ ಜಮೀನು ಪಡೆದುಕೊಂಡು ಲೇಔಟ್ ಮಾಡುವುದಾಗಿ ಹೇಳುತ್ತಿದೆ. ಇದರಿಂ ದ ಗ್ರಾಮದ ಬಹುತೇಕ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಹೇಳಿದರು.

ಬೃಹತ್ ಮಟ್ಟದಲ್ಲಿ ಗ್ರಾಮದಲ್ಲಿ ಲೇಔಟ್ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಬೆರಳಣಿಕೆ ಸಂಖ್ಯೆಯ ಲ್ಲಿ ಸಿಬ್ಬಂದಿಗಳು ನಿಯೋಜಿಸಿ ಕೆಲಸ ಮಾಡಿಸಲಾಗುತ್ತಿದೆ. ಅಲ್ಲದೇ ವರ್ಷಗಟ್ಟಲೇ ಸಮಯ ಸಾಗುತ್ತಿರುವ ಕಾರಣ ನಿವೇಶನದ ಜಾಗದಲ್ಲಿ ಹುಲ್ಲು ಬೆಳೆದುಕೊಂಡು ನಿವೇಶನ ಸ್ಪಷ್ಟವಾಗಿ ಕಾಣಿಸುತ್ತಿಲ್ಲ. ಜೊತೆಗೆ ರೈತರಿ ಗೂ ತಮ್ಮ ಜಮೀನು ಯಾವುದೆಂದು ತಿಳಿಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮದ ರೈತರ ಪ್ರತಿ ಎಕರೆಗೆ ಶೇ.೫೫ ರಂತೆ ೧೨ ಸಾವಿರ ಚದರಡಿ ಮೀಸಲಿಡಬೇಕು. ಈ ಲೇಔಟ್ ಸಂಪೂರ್ಣವಾಗಿ ಪೂರೈಸುವ ಮೊದಲೇ, ಹೊಸ ಸ್ಥಳದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರವು ಕಾಯ್ದೆಗಳ ಬೆದ ರಿಕೆವೊಡ್ಡಿ ರೈತರಿಂದ ಜಮೀನನ್ನು ಕಬಳಿಸಲು ಯತ್ನಿಸುತ್ತಿದೆ ಎಂದರು.

ರೈತರು ಬೆಳೆ ಭೂಮಿಯನ್ನು ಪ್ರಾಧಿಕಾರಕ್ಕೆ ಹಸ್ತಾಂತರಿಸಿ ನಾಲ್ಕೈದು ವರ್ಷಗಳೇ ಕಳೆದಿವೆ. ಇಂದಿಗೂ ಲೇಔಟ್ ಪೂರೈಸದೇ ಉಡಾಫೆ ಉತ್ತರ ನೀಡಿ ರೈತರನ್ನು ವಂಚಿಸಲಾಗುತ್ತಿದೆ. ರೈತರಿಗೆ ನಿವೇಶನ ಹಂಚಿಲ್ಲ, ಲೇಔಟ್‌ನಲ್ಲಿ ಚರಂಡಿ, ರಸ್ತೆ ಕಾಮಗಾರಿ ಕಳಪೆಯಾಗಿದೆ. ಇಲಾಖೆ ರೈತರ ಬೆಳೆ ಬೆಳೆಯುವ ಭೂಮಿ ಪಡೆದು ವಂಚಿಸುತ್ತಿದ್ದಾರೆ ಎಂದರು.

ಕೂಡಲೇ ಲೇಔಟ್ ಬಗ್ಗೆ ಸಿಡಿಎ ಇಲಾಖೆ ಡಿಸೆಂಬರ್ ಅಂತ್ಯದೊಳಗೆ ಸಮರ್ಪಕ ಉತ್ತರ ನೀಡಿ, ರೈತ ರಿಗೆ ನಿವೇಶನ ಹಂಚಿಕೆ ಮಾಡದಿದ್ದಲ್ಲಿ ಜಮೀನಿನಲ್ಲಿ ರೈತರು ಉಳುಮೆ ಆರಂಭಿಸುವ ಜೊತೆಗೆ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಇಂದಾವರ ಗ್ರಾ.ಪಂ. ಅಧ್ಯಕ್ಷ ಸುಭಾಶ್, ಗ್ರಾಮಸ್ಥರಾದ ಸುರೇಶ್, ದಿನೇಶ್, ಲವ ಕುಮಾರ್, ರೇವಣ್ಣ, ಐ.ಡಿ.ಚಂದ್ರು, ಪ್ರೇಮ್‌ಕುಮಾರ್, ದಿಣೇಶ್, ಮಲ್ಲೇಶ್, ಚೇತನ್, ನಿರಂಜನ್ ಇದ್ದರು.

Villagers protest against CDA fraud

Share

Leave a comment

Leave a Reply

Your email address will not be published. Required fields are marked *

Don't Miss

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು. ಬೈಪಾಸ್ ರಸ್ತೆಯ ನರ್ಚರ್...

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ. ಇತ್ತೀಚೆಗೆ...

Related Articles

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ...

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು...