Home namma chikmagalur ಮಾದಕ ವಸ್ತುಗಳ ಕಡಿವಾಣ ಹಾಕುವಲ್ಲಿ ಪೊಲೀಸರ ಪಾತ್ರ ಪ್ರಮುಖ
namma chikmagalurchikamagalurLatest News

ಮಾದಕ ವಸ್ತುಗಳ ಕಡಿವಾಣ ಹಾಕುವಲ್ಲಿ ಪೊಲೀಸರ ಪಾತ್ರ ಪ್ರಮುಖ

Share
????????????????????????????????????
Share

ಚಿಕ್ಕಮಗಳೂರು: ಸಮಾಜಕ್ಕೆ ಮಾರಕವಾಗಿರುವ ಮಾದಕ ವಸ್ತುಗಳ ಕಡಿವಾಣ ಹಾ ಕುವಲ್ಲಿ ಪೊಲೀಸ್ ಸಿಬ್ಬಂದಿಗಳ ಪಾತ್ರ ಪ್ರಮುಖವಾಗಿದೆ. ವಿದ್ಯಾರ್ಥಿಗಳು ಹಾಗೂ ಯುವಜನತೆ ವ್ಯಸನದ ಚಟಕ್ಕೆ ಬಲಿಯಾಗದೇ ರಕ್ಷಿಸುವ ಕಾರ್ಯ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನ್ಯಾಯಾಧೀಶ ವಿ.ಹನುಮಂತಪ್ಪ ಹೇಳಿದರು.

ನಗರದ ಶ್ರೀ ಶಕ್ತಿ ಮದ್ಯವ್ಯಸನಿಗಳ ಸಮಗ್ರ ಪುನರ್ ವಸತಿ ಕೇಂದ್ರ, ಜಿಲ್ಲಾ ಪೊಲೀಸ್ ಇಲಾಖೆ, ರಾಜ್ಯ ಮಟ್ಟದ ಸಮನ್ವಯ ಸಂಸ್ಥೆ ಸಂಯುಕ್ರಾಶ್ರಯದಲ್ಲಿ ಆಯೋಜಿಸಿದ್ಧ ಪೊಲೀಸ್ ಸಿಬ್ಬಂದಿಗಳಿಗೆ ಮಾದಕ ವಸ್ತು ವಿನ ನಿಯಂತ್ರಣ ಕುರಿತು ಒಂದು ದಿನದ ಜಾಗೃತಿ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಅವರು ಮಾ ತನಾಡಿದರು.

ಸಮಾಜದಿಂದ ಮಾದಕ ವಸ್ತುಗಳಿಗೆ ಕಡಿವಾಣಕ್ಕೆ ವಿವಿಧ ಸಮಿತಿಗಳನ್ನು ರಚಿಸಿ ಮಾರ್ಗಸೂಚಿ ನೀಡ ಲಾಗುತ್ತಿದೆ. ಈ ನಡುವೆ ದೇಶದ ನಾಗರೀಕರು ಹಾಗೂ ವ್ಯಸನಿಗಳ ಸಂಪರ್ಕ ಹೊಂದಿರುವ ವ್ಯಕ್ತಿಗಳು ದುಶ್ಚ ಟಕ್ಕೆ ಒಳಗಾಗಿರುವ ವ್ಯಕ್ತಿಗಳನ್ನು ನಶಮುಕ್ತಗೊಳಿಸಲು ವ್ಯಸನಿಗಳನ್ನು ಚಿಕಿತ್ಸಾ ಕೇಂದ್ರಗಳಲ್ಲಿ ಕಳುಹಿಸುವ ವ್ಯ ವಸ್ಥೆ ಮಾಡಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಪೆಟ್ಟಿಗೆ ಅಂಗಡಿಗಳಲ್ಲಿ ನಶೆ ಪದಾರ್ಥಗಳು ಸಲೀಸಾಗಿ ಲ ಭ್ಯವಾಗುತ್ತಿದೆ. ಈ ಬಗ್ಗೆ ಸರ್ಕಾರ ಹಾಗೂ ಕಾನೂನು ಸೇವೆ ಪ್ರಾಧಿಕಾರ ಎಚ್ಚರಿಕೆ ವಹಿಸುವುದು, ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡು ಯುವಜನತೆಯಲ್ಲಿ ಅರಿವು ಮೂಡಿಸುತ್ತಿದ್ದು ಎಲ್ಲರೂ ಕೈಜೋಡಿಸಿದಾಗ ಮಾತ್ರ ಶಾಶ್ವತವಾಗಿ ವ್ಯಸನದ ವ್ಯವಸ್ಥೆ ದೂರಗೊಳಿಸಬಹುದು ಎಂದರು.

ವ್ಯಸನಿಗಳ ನಿಯಂತ್ರಿಸಲು ಅರಿವಿನ ಜೊತೆಗೆ ಜ್ಞಾನದ ಅವಶ್ಯವಿದೆ. ಆ ನಿಟ್ಟಿನಲ್ಲಿ ಬ್ರಹ್ಮಕುಮಾರೀಸ್ ಸಂ ಸ್ಥೆ ಸಕ್ರಿಯವಾಗಿ ತೊಡಗಿಸಿಕೊಂಡು ವ್ಯಸನಿಗಳನ್ನು ನಾಡಿನ ಸತ್ರ್ಪಜೆಗಳಾಗಿಸಲು ಮುಂದಾಗಿರುವುದು ಹೆಮ್ಮೆ ಯ ಸಂಗತಿ. ಜೊತೆಗೆ ಪೊಲೀಸ್ ಇಲಾಖೆ ನಿತ್ಯವು ಈ ರೀತಿಯ ಪ್ರಕರಣಗಳು ದಾಖಲಾಗುತ್ತಿದ್ದು, ವ್ಯಸನಿ ಗಳ ಮನಪರಿವರ್ತಿಸಲು ಪ್ರೇರೇಪಿಸಬೇಕು ಎಂದು ಸಲಹೆ ಮಾಡಿದರು.

ಉಪ ಪೊಲೀಸ್ ಅಧೀಕ್ಷಕ ತಿಪ್ಪೇಸ್ವಾಮಿ ಮಾತನಾಡಿ ಮಾದಕ ವಸ್ತುಗಳ ಶಾರೀರಿಕ ಹಾಗೂ ದೈಹಿಕ ವಾಗಿ ಆರೋಗ್ಯ ಹದೆಗೆಡಿಸುತ್ತದೆ. ಇದರಿಂದ ದೇಶದಲ್ಲಿ ಪ್ರತಿದಿನ ಸುಮಾರು ೧೦ ಮಂದಿ ವ್ಯಸನದ ಚಟಕ್ಕೆ ಬಲಿಯಾಗುತ್ತಿದ್ದಾರೆ. ಕಳೆದ ೨೦೧೮-೧೯ನೇ ಸಾಲಿನಲ್ಲಿ ಲಕ್ಷಾಂತರ ಯುವಸಮೂಹ ದುಶ್ಚಟಕ್ಕೆ ಬಲಿಯಾಗಿ ಜೀವ ಕಳೆದುಕೊಳ್ಳುತ್ತಿದ್ದು ಪೊಲೀಸ್ ಸೇರಿದಂತೆ ನಾಗರೀಕರು ಒಟ್ಟಾಗಿ ಈ ವಿರುದ್ಧ ಕಾರ್ಯಪ್ರವೃತ್ತರಾಗ ಬೇಕು ಎಂದರು.

ರಾಜ್ಯಮಟ್ಟದ ಸಮನ್ವಯ ಸಂಸ್ಥೆ ಕೋಆಡಿನೇಟರ್ ಶೈಲಶ್ರೀ ಪ್ರಾಸ್ತಾವಿಕವಾಗಿ ಮಾತನಾಡಿ ಯುವಜನ ತೆಯನ್ನು ನಶಮುಕ್ತಗೊಳಿಸಲು ಕೇಂದ್ರ ಸರ್ಕಾರ ನಶಮುಕ್ತ ಭಾರತ ಅಭಿಯಾನ ಜಾರಿಗೊಳಿಸಿದೆ. ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಈ ಅಭಿಯಾನವು ನಡೆಯುತ್ತಿದ್ದು ಎಸ್ಪಿ ಸೇರಿದಂತೆ ಹಾಗೂ ಸ್ವಯಂ ಸೇವಕರು ಈ ಅಭಿಯಾನದಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ ಎಂದರು.

ಶ್ರೀ ಶಕ್ತಿ ಮದ್ಯವ್ಯಸನಿಗಳ ಸಮಗ್ರ ಪುನರ್ ವಸತಿ ಕೇಂದ್ರದ ಯೋಜನಾ ನಿರ್ದೇಶಕ ಡಾ|| ಅನೀತ್ ಕುಮಾರ್ ಮಾತನಾಡಿ ಮದ್ಯ ಹಾಗೂ ಮಾದಕ ವಸ್ತುಗಳಿಂದ ಬಳಲುತ್ತಿರುವ ಯುವಸಮೂಹವನ್ನು ಹತೋಟಿಗೆ ತರಲು ಎಲ್ಲರೂ ಮುಂದಾದರೆ ಮಾತ್ರ ಸ್ವಾಸ್ಥ್ಯ ಸಮಾಜಕ್ಕೆ ನಾಂದಿಯಾಡಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯಮಟ್ಟದ ಸಮನ್ವಯ ಸಂಸ್ಥೆ ರಾಜ್ಯ ಸಂಪನ್ಮೂಲ ವ್ಯಕ್ತಿ ಬಾಲಕೃಷ್ಣರಾಜು, ರೋಟರಿ ಅಧ್ಯಕ್ಷ ಎನ್.ಪಿ.ಲಿಖಿತ್, ಟೌನ್ ಮಹಿಳಾ ಸಮಾಜದ ಅಧ್ಯಕ್ಷೆ ನೇತ್ರ ವೆಂಕಟೇಶ್, ಪ್ರಜಾಪಿತ ಬ್ರಹ್ಮಕುಮಾರಿಸ್ ಜಿಲ್ಲಾ ಸಂಚಾಲಕಿ ಬಿ.ಕೆ.ಭಾಗ್ಯಕ್ಕ, ಶ್ರೀ ಶಕ್ತಿ ಮದ್ಯವ್ಯಸನಿಗಳ ಸಮಗ್ರ ಪುನರ್ ವಸತಿ ಕೇಂದ್ರ ವ್ಯವಸ್ಥಾಪಕ ಮಂಜುನಾಥ್ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

The police have a key role in curbing drug abuse.

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....