ಚಿಕ್ಕಮಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಬಿಂಡಿಗಾ ದೇವೀರಮ್ಮ ದೀಪೋತ್ಸವದ ಅಂಗವಾಗಿ ಬೆಟ್ಟ ಹತ್ತುವ ಭಕ್ತಾದಿಗಳ ಸುರಕ್ಷತೆಯ ದೃಷ್ಟಿಯಿಂದ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತು ಭಕ್ತರು ಸಾಗುವ ಹಾದಿ ಮತ್ತು ಸ್ಥಳಗಳನ್ನು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ.ವಿಕ್ರಮ್ ಅಮಟೆ ನೇತೃತ್ವದಲ್ಲಿಪರಿಶೀಲಿಸಲಾಯಿತು.
ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲೇನಹಳ್ಳಿ ಬಿಂಡಿಗಾ ದೇವೀರಮ್ಮ ದೀಪೋತ್ಸವದ ಅಂಗವಾಗಿ ಪೂರ್ವಭಾವಿಯಾಗಿ ಜಿಲ್ಲಾ ಪೊಲೀಸ್ ವತಿಯಿಂದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಲ್ಲಿ ದೇವೀರಮ್ಮ ಬೆಟ್ಟದಲ್ಲಿ ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳ ಸುರಕ್ಷತೆಯ ದೃಷ್ಟಿಯಿಂದ ಅವರ ಅನುಕೂಲಕ್ಕಾಗಿ ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಸಹಾಯಕ್ಕಾಗಿ ತಕ್ಷಣ ಪ್ರತಿಕ್ರಿಯಿಸಲು ರಕ್ಷಣಾ ತಂಡಗಳನ್ನು ನೇಮಿಸಲಾಯಿತು.
ಪರ್ವತಾರೋಹಣ ಮತ್ತು ಬೆಟ್ಟದ ಪ್ರದೇಶಗಳಲ್ಲಿ ರಕ್ಷಣಾ ಕೆಲಸಗಳಿಗೆ ತರಬೇತಿ ಹೊಂದಿರುವ ವಿಶೇಷ ತಂಡಗಳನ್ನು ನೇಮಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಮಲ್ಲೇನಹಳ್ಳಿಯಿಂದ ಬೆಟ್ಟದ ತುತ್ತ ತುದಿಯವರೆಗೆ ಕಾಲ್ನಡಿಗೆಯಲ್ಲಿ ಸಾಗುವ ಹಾದಿ ಮತ್ತು ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆ ಹಾಗೂ ತಿಳುವಳಿಕೆಗಳನ್ನು ನೀಡಿರುತ್ತಾರೆ.
ದೇವೀರಮ್ಮ ದೀಪೋತ್ಸವದ ಅಂಗವಾಗಿ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತಾಗಿ ಪೂರ್ವಭಾವಿಯಾಗಿ ಇಂದು ನಡೆದ ಪರಿಶೀಲನೆಯ ಸಮಯದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್. ಕೀರ್ತನಾ, ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಸಿ.ಟಿ.ಜಯಕುಮಾರ್, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ತಾಲೂಕು ಉಪ ವಿಭಾಗಾಧಿಕಾರಿಗಳು, ತಹಸೀಲ್ದಾರ್ ಸೇರಿದಂತೆ ಆರೋಗ್ಯ ಇಲಾಖೆ, ಅಗ್ನಿಶಾಮಕ ತುರ್ತುಸೇವೆಗಳ ಇಲಾಖೆ, ಆರ್ಟಿಓ, ಪ್ರವಾಸೋದ್ಯಮ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ದೇವಸ್ಥಾನ ಕಮಿಟಿ ಸದಸ್ಯರು, ಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಇದ್ದರು.
SP visits Deviramma Hill for safety of devotees
Leave a comment