Home Latest News ಪತ್ನಿಯ ಕತ್ತುಸೀಳಿ ಕೊಲೆ ಪ್ರಕರಣ : ಮೂವರ ಬಂಧನ
Latest NewschikamagalurCrime NewsHomenamma chikmagalur

ಪತ್ನಿಯ ಕತ್ತುಸೀಳಿ ಕೊಲೆ ಪ್ರಕರಣ : ಮೂವರ ಬಂಧನ

Share
Share

ಚಿಕ್ಕಮಗಳೂರು: ಕೌಟುಂಬಿಕ ಕಲಹ ಹಿನ್ನಲೆ ಪತ್ನಿಯನ್ನು ಪತಿ ಕತ್ತುಸೀಳಿ ಕೊಲೆ ಮಾಡಿರುವ ಪ್ರಕರಣದಲ್ಲಿ ಮೃತ ಮಹಿಳೆಯ ಪತಿ ಮತ್ತು ಮಾವನನ್ನು ಬಂಧಿಸಿ, ಅತ್ತೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ವಿಕ್ರಮ್‌ ಅಮಟೆ ತಿಳಿಸಿದರು.

ಮೃತ ನೇತ್ರಾವತಿ ಪತಿ ನವೀನ್‌ ಹಾಗೂ ಮಾವ ಮಂಜೇಗೌಡ ವಿರುದ್ಧ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸಲಾಗಿದೆ. ಅತ್ತೆ ಕುಸುಮ ವಿರುದ್ಧ ಪ್ರಕರಣ ದಾಖ ಲಿಸಲಾಗಿದೆ ಎಂದು ತಿಳಿಸಿದರು.

ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದ ನೇತ್ರಾವತಿ ಸಕಲೇಶಪುರದ ನವೀನ್‌ನನ್ನು ಐದು ತಿಂಗಳ ಹಿಂದೆ ಧರ್ಮಸ್ಥಳದಲ್ಲಿ ಮದುವೆಯಾಗಿದ್ದರು. ಕೌಟುಂಬಿಕ ಕಲಹದ ಹಿನ್ನಲೆ ಪತಿ ನವೀನ್‌ ಸಕಲೇಶಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಬ್ಬರನ್ನು ಸಖಿ ಕೇಂದ್ರಕ್ಕೆ ಕರೆಸಿ ಕೌನ್ಸಿಲಿಂಗ್‌ ಕೂಡ ನಡೆಸಲಾಗಿತ್ತು. ಆದರೆ, ಇಬ್ಬರ ನಡುವೆ ಹೊಂದಾಣಿಕೆ ಬಾರದ ಹಿನ್ನಲೆ ನೇತ್ರಾವತಿ ಕಳೆದ ಮೂರು ತಿಂಗಳಿಂದ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿನ ತವರು ಮನೆ ಸೇರಿದ್ದರು ಎಂದರು.

ಅ.12ರ ಸಂಜೆ 6:30ಕ್ಕೆ ನೇತ್ರಾವತಿ ಮನೆಗೆ ಆಗಮಿಸಿದ ಪತಿ ನವೀನ್‌ ನೇತ್ರಾವತಿಯ ಕತ್ತು ಸೀಳಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದ. ಗಂಭೀರ ಗಾಯಗೊಂಡಿದ್ದ ನೇತ್ರಾವತಿ ಅವರನ್ನು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ನೇತ್ರಾವತಿ ಸಂಬಂಧಿಕರು ನೀಡಿದ ದೂರಿನನ್ವಯ ಕಾರ್ಯಪ್ರವೃತ್ತರಾದ ಆಲ್ದೂರು ಪೊಲೀಸ್‌ ಠಾಣೆಯ ಪೊಲೀಸರು ನೇತ್ರಾವತಿ ಅವರ ಪತಿ ನವೀನ್‌, ಅವರ ಮಾವ ಮಂಜೇಗೌಡ ಅವರನ್ನು ಬಂಧಿಸಿದ್ದಾರೆ. ನೇತ್ರಾವತಿ ಅತ್ತೆ ಕುಸುಮ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆಂದು ತಿಳಿಸಿದರು.

Wife’s throat slitting murder case: Three arrested
Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...