Home Crime News ಪತ್ನಿ ಕೊಂದು ಹೂತಿಟ್ಟ ಪ್ರಕರಣ: ಪತಿ, ಅತ್ತೆ, ಮಾವ ಪೊಲೀಸ್‌ ವಶಕ್ಕೆ
Crime NewsHomeKadurLatest Newsnamma chikmagalur

ಪತ್ನಿ ಕೊಂದು ಹೂತಿಟ್ಟ ಪ್ರಕರಣ: ಪತಿ, ಅತ್ತೆ, ಮಾವ ಪೊಲೀಸ್‌ ವಶಕ್ಕೆ

Share
Share
ಕಡೂರು: ತಾಲ್ಲೂಕಿನ ಕಸಬಾ ಹೋಬಳಿಯ ಆಲಘಟ್ಟ ಗ್ರಾಮದಲ್ಲಿ ಸುಮಾರು ಒಂದೂವರೆ ತಿಂಗಳ ಹಿಂದೆ ಪತ್ನಿಯನ್ನು ಕೊಂದು ಹೂತಿಟ್ಟ ಪ್ರಕರಣ ಸಂಬಂಧ ಮೃತಳ ಪತಿ ವಿಜಯ್‌ಕುಮಾರ್‌, ಅತ್ತೆ ತಾಯಮ್ಮ ಹಾಗೂ ಮಾವ ಗೋವಿಂದಪ್ಪ ಅವರನ್ನು ಕಡೂರು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

ಆಲಘಟ್ಟದ ವಿಜಯಕುಮಾರ್‌ ತಾಲ್ಲೂಕಿನ ಚಿಕ್ಕಂಗಳ ಗ್ರಾಮದ ಸಮೀಪ ಪರದೇಶಿಹಾಳ್‌ನ ಭಾರತಿ ಎಂಬುವರನ್ನು ಆರು ವರ್ಷಗಳ ಹಿಂದೆ ವಿವಾಹವಾಗಿದ್ದರು.

ಆರೋಪಿ ವಿಜಯ್‌ಕುಮಾರ್‌ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಪತ್ನಿ ಭಾರತಿಯ ಬಾಯಿಗೆ ಬಟ್ಟೆ ತುರುಕಿ ಹೊಡೆದು ಆಕೆಯು ಮೃತಪಟ್ಟ ಬಳಿಕ ಜಮೀನಿನಲ್ಲಿ ವಿಫಲವಾಗಿದ್ದ ಕೊಳವೆಬಾವಿಯಲ್ಲಿ ಶವವನ್ನು ಹೂತಿಟ್ಟು ಕಡೂರು ಪೊಲೀಸ್‌ ಠಾಣೆಯಲ್ಲಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ನಿಯ ಪೋಷಕರು ಕೇಳಿದರೆ ಸಂಬಂಧಿಕರಿಗೆ ಹುಷಾರಿಲ್ಲವೆಂದು ಶಿವಮೊಗ್ಗಕ್ಕೆ ಹೋಗಿದ್ದಾಳೆ ಎಂದು ಸಬೂಬು ಹೇಳಿ ಜಾರಿಕೊಳ್ಳುತ್ತಿದ್ದ. ವಿಜಯಕುಮಾರ್‌ ಅನುಮಾನಾಸ್ಪದ ಹೇಳಿಕೆ ಹಾಗೂ ನಡವಳಿಕೆಯಿಂದ ಸಂಶಯಗೊಂಡ ಪೊಲೀಸರು ವಿಚಾರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ವರದಕ್ಷಿಣೆಗಾಗಿ ಪತ್ನಿಯನ್ನು ಪೀಡಿಸಿ ಹತ್ಯೆ ಮಾಡಿರುವುದು ಹಾಗೂ ಆರೋಪಿಗೆ ಸಹಕರಿಸಿದ ಹಿನ್ನೆಲೆಯಲ್ಲಿ ಮೃತ ಭಾರತಿಯ ಅತ್ತೆ ಮತ್ತು ಮಾವನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.

Wife’s murder and burial case: Husband mother-in-law  father-in-law taken into police custody

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...