ಆಲಘಟ್ಟದ ವಿಜಯಕುಮಾರ್ ತಾಲ್ಲೂಕಿನ ಚಿಕ್ಕಂಗಳ ಗ್ರಾಮದ ಸಮೀಪ ಪರದೇಶಿಹಾಳ್ನ ಭಾರತಿ ಎಂಬುವರನ್ನು ಆರು ವರ್ಷಗಳ ಹಿಂದೆ ವಿವಾಹವಾಗಿದ್ದರು.
ಆರೋಪಿ ವಿಜಯ್ಕುಮಾರ್ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಪತ್ನಿ ಭಾರತಿಯ ಬಾಯಿಗೆ ಬಟ್ಟೆ ತುರುಕಿ ಹೊಡೆದು ಆಕೆಯು ಮೃತಪಟ್ಟ ಬಳಿಕ ಜಮೀನಿನಲ್ಲಿ ವಿಫಲವಾಗಿದ್ದ ಕೊಳವೆಬಾವಿಯಲ್ಲಿ ಶವವನ್ನು ಹೂತಿಟ್ಟು ಕಡೂರು ಪೊಲೀಸ್ ಠಾಣೆಯಲ್ಲಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪತ್ನಿಯ ಪೋಷಕರು ಕೇಳಿದರೆ ಸಂಬಂಧಿಕರಿಗೆ ಹುಷಾರಿಲ್ಲವೆಂದು ಶಿವಮೊಗ್ಗಕ್ಕೆ ಹೋಗಿದ್ದಾಳೆ ಎಂದು ಸಬೂಬು ಹೇಳಿ ಜಾರಿಕೊಳ್ಳುತ್ತಿದ್ದ. ವಿಜಯಕುಮಾರ್ ಅನುಮಾನಾಸ್ಪದ ಹೇಳಿಕೆ ಹಾಗೂ ನಡವಳಿಕೆಯಿಂದ ಸಂಶಯಗೊಂಡ ಪೊಲೀಸರು ವಿಚಾರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ವರದಕ್ಷಿಣೆಗಾಗಿ ಪತ್ನಿಯನ್ನು ಪೀಡಿಸಿ ಹತ್ಯೆ ಮಾಡಿರುವುದು ಹಾಗೂ ಆರೋಪಿಗೆ ಸಹಕರಿಸಿದ ಹಿನ್ನೆಲೆಯಲ್ಲಿ ಮೃತ ಭಾರತಿಯ ಅತ್ತೆ ಮತ್ತು ಮಾವನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
Wife’s murder and burial case: Husband mother-in-law father-in-law taken into police custody
Leave a comment