Home namma chikmagalur ತಾಂತ್ರಿಕ ಸ್ಪರ್ಧೆಗಳು ಕೌಶಲ್ಯವರ್ಧನೆಗೆ ಅನುಕೂಲ
namma chikmagalurchikamagalurHomeLatest News

ತಾಂತ್ರಿಕ ಸ್ಪರ್ಧೆಗಳು ಕೌಶಲ್ಯವರ್ಧನೆಗೆ ಅನುಕೂಲ

Share
Share

ಚಿಕ್ಕಮಗಳೂರು: ವಿದ್ಯಾರ್ಥಿಗಳಿಗೆ ತಾಂತ್ರಿಕ ಕಾರ್ಯಕ್ರಮದ ಸ್ಪರ್ಧೆಗಳು ಕೌಶಲ್ಯ ವರ್ಧನೆಗೆ ಅನುಕೂಲವಾಗುವ ಜೊತೆಗೆ ಭವಿ?ದಲ್ಲಿ ಬಹಳ? ಉಪಯೋಗಕ್ಕೆ ಬರಲಿವೆ ಎಂದು ಎಐಟಿ ಕಾಲೇಜು ಪ್ರಾಂಶುಪಾಲ ಡಾ|| ಸಿ.ಟಿ.ಜಯದೇವ್ ಹೇಳಿದರು.

ನಗರದ ಎಐಟಿ ಕಾಲೇಜು ಬಿಜಿಎಸ್ ಸಭಾಂಗಣದಲ್ಲಿ ಮಾಹಿತಿ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿ ಗಳಿಗೆ ಆಯೋಜಿಸಿದ್ಧ ಎರಡು ದಿನದ ಅಂತರ ಕಾಲೇಜು ತಾಂತ್ರಕ ಕಾರ್ಯಕ್ರಮವನ್ನು ಗುರುವಾರ ಉದ್ಘಾ ಟಿಸಿ ಅವರು ಮಾತನಾಡಿದರು.

ತಾಂತ್ರಿಕ ಸ್ಪರ್ಧೆಗಳು ಸಾಮಾನ್ಯವಾಗಿ ಸಾಪ್ಟ್‌ವೇರ್, ಡೆವಲಪ್‌ಮೆಂಟ್, ಡೇಟಾ ವಿಶ್ಲೇ?ಣೆ, ಮತ್ತು ಕೃತಕ ಬುದ್ಧಿಮತ್ತೆಯಂತಹ ವಿಭಾಗಗಳನ್ನು ಒಳಗೊಂಡಿವೆ. ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯಗಳನ್ನು ಪರೀಕ್ಷಿಸಲು, ಸಮಸ್ಯೆಯನ್ನು ಪರಿಹರಿಸುವ ಸಾಮರ್ಥ್ಯವನ್ನು ಉತ್ತೇಜಿಸಲು ಸಹಕಾರಿ ಎಂ ದು ತಿಳಿಸಿದರು.

ಸ್ಪರ್ಧಾ ಕಾರ್ಯಕ್ರಮವು ಕಠಿಣ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಕೌಶಲ್ಯಗಳನ್ನು ಸುಧಾರಿಸಲು ಉತ್ತಮ ಅವಕಾಶವನ್ನು ನೀಡಲಿದೆ. ವಾಸ್ತವಿಕ ಪ್ರಪಂಚದ ಸನ್ನಿವೇಶಗಳಲ್ಲಿ ಕೌಶಲ್ಯಗಳನ್ನು ಬಳಸುವ ಅನು ಭವವನ್ನು ನೀಡುವ ಜೊತೆಗೆ ವಿದ್ಯಾರ್ಥಿಗಳು, ವೃತ್ತಿಪರರು ಮತ್ತು ಉದ್ಯಮದ ತಜ್ಞರೊಂದಿಗೆ ಸಂಪರ್ಕ ಸಾ ಧಿಸಲು ಸಹಾಯ ಮಾಡಲಿದೆ ಎಂದರು.

ಮಾಹಿತಿ ತಂತ್ರಜ್ಞಾನವನ್ನು ಈಗ ಆಧುನಿಕ ಜೀವನದ ಪ್ರತಿಯೊಂದು ಅಂಶಕ್ಕೂ ಸಂಯೋಜಿಸಲಾ ಗಿದೆ. ಕಂಪ್ಯೂಟರ್ ಮಾಹಿತಿ ತಂತ್ರಜ್ಞಾನ ತಜ್ಞರು ಅವರು ಕೆಲಸ ಮಾಡುವ ಕಂಪನಿಯಲ್ಲಿ ಬಳಸುವ ಹಾರ್ಡ್ವೇರ್ ಮತ್ತು ಸಾಫ್ಟ್ವೇರ್‌ನೊಂದಿಗೆ ಪರಿಚಿತರಾಗಿರಬೇಕು ಮತ್ತು ದೊಡ್ಡ ಮತ್ತು ಸಣ್ಣ ಸಮಸ್ಯೆಗಳ ಶ್ರೇಣಿ ಯಲ್ಲಿ ತಾಂತ್ರಿಕ ಬೆಂಬಲವನ್ನು ನೀಡಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಎಐಟಿ ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ|| ಎಸ್ ಸಂಪತ್ ಮಾತನಾಡಿ ಪ್ರತಿವ?ವೂ ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ತಾಂತ್ರಿಕ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದ್ದು ರಾಜ್ಯದ ವಿವಿಧ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಸ್ಪರ್ಧೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಅನಿಲಿವಿಂಗ್ ಸ್ಪೆಸ್ ಕಂಪನಿಯ ಗಗನ್, ನಿಶ್ಚಿತ್, ಎಐಟಿ ಕಾಲೇಜಿನ ಎಐ ವಿಭಾಗದ ಮುಖ್ಯಸ್ಥ ಪ್ರೊ.ಸುನಿತಾ, ವಿವಿಧ ವಿಭಾಗದ ಮುಖ್ಯಸ್ಥರಾದ ಪ್ರೊ.ರಾಕೇಶ್, ಪ್ರೊ.ಅಶ್ವಿನಿ ಹಾಗೂ ವಿಭಾಗದ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿ ಗಳು ಉಪಸ್ಥಿತರಿದ್ದರು.

Technical competitions conducive to skill development

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧ ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ’ರಾಷ್ಟ್ರೀಯ ಲೋಕ್ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಗೌ.ಪ್ರಧಾನ ಜಿಲ್ಲಾ...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ ಸಂಚಾರ) ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ದುಡುಕುತನದಿಂದ ಡಿಕ್ಕಿ ಹೊಡೆದ ಪರಿಣಾಮ...

Related Articles

ಅಮೃತ್ 2.0 ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕುಡಿಯುವ ನೀರಿನ...

ವಿಕಲಚೇತನ ವ್ಯಕ್ತಿಯ ₹8 ಲಕ್ಷ ಬ್ಯಾಂಕ್ ಸಾಲ ಕೇವಲ ₹15,000 ಕ್ಕೆ ಇತ್ಯರ್ಥ

ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ವಿಶೇಷ...

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ...

ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು

ಚಿಕ್ಕಮಗಳೂರು: ಸರ್ಕಾರದ ಅನುದಾನದ ಕೊರತೆ ನಡುವೆ ಕೆಪಿಟಿಸಿಎಲ್ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನ...