Home Latest News ಹೂತಿಟ್ಟಿದ್ದ ಶವ ಹೊರತೆಗೆದು ಕುಟುಂಬಸ್ಥರಿಗೆ ಹಸ್ತಾಂತರ
Latest NewschikamagalurHomenamma chikmagalur

ಹೂತಿಟ್ಟಿದ್ದ ಶವ ಹೊರತೆಗೆದು ಕುಟುಂಬಸ್ಥರಿಗೆ ಹಸ್ತಾಂತರ

Share
Share

ಕಡೂರು: ತಾಲ್ಲೂಕಿನ ಆಲಘಟ್ಟ ಗ್ರಾಮದ ವಿಜಯಕುಮಾರ ಎಂಬಾತ ತನ್ನ ಪತ್ನಿಯನ್ನು ಕೊಂದು ಜಮೀನಿನಲ್ಲಿದ್ದ ವಿಫಲ ಕೊಳವೆಬಾವಿಯಲ್ಲಿ ಹೂತಿಟ್ಟಿದ್ದ ಶವವನ್ನು ಕಡೂರು ಪೊಲೀಸರು ಭಾನುವಾರ ತಹಶೀಲ್ದಾರ್ ಸಮ್ಮುಖದಲ್ಲಿ ಜೆಸಿಬಿ ಯಂತ್ರದ ಸಹಾಯದಿಂದ ಹೊರತೆಗೆದರು. ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಸಂಸ್ಕಾರ ನೆರವೇರಿಸಲು ಮೃತಳ ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ವರದಕ್ಷಿಣೆಯ ಹಣಕಾಸಿನ ವಿಚಾರದ ನೆಪದಲ್ಲಿ ಪತ್ನಿ ಭಾರತಿಗೆ ಮಾನಸಿಕವಾಗಿ ಕಿರುಕುಳ ನೀಡಿ ಆಲಘಟ್ಟ ಗ್ರಾಮದ, ಆರೋಪಿ ಪತಿ ವಿಜಯಕುಮಾರ್ ಸೆ.3ರ ರಾತ್ರಿ ಕೊಲೆ ಮಾಡಿದ್ದ. ತಂದೆ ಗೋವಿಂದಪ್ಪನ ನೆರವಿನೊಂದಿಗೆ ಮನೆಯಿಂದ ಬೈಕ್‌ನಲ್ಲಿ ಶವವನ್ನು ತಂದು ಕೊಳವೆಬಾವಿಯ 12 ಅಡಿ ಆಳದ ಗುಂಡಿಯಲ್ಲಿ ಶವ ಇಳಿಸಿದ್ದರು. ಬಳಿಕ ಎಂ.ಸ್ಯಾಂಡ್ ಮತ್ತು ಗೋಣಿಚೀಲ ಹಾಕಿ ಮುಚ್ಚಿಟ್ಟು ಪತ್ನಿ ಕಾಣೆಯಾಗಿರುವ ಬಗ್ಗೆ ಠಾಣೆಯಲ್ಲಿ ನಾಪತ್ತೆ ಪ್ರಕರಣದಡಿ ದೂರು ನೀಡಿದ್ದ.

ಪ್ರಕರಣ ಕೈಗೆತ್ತಿಕೊಂಡಿದ್ದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದರು. ಮಗಳಿಗೆ ಕಿರುಕುಳ ನೀಡಿ ಕೊಲೆ ಮಾಡಿರುವ ಆರೋಪದಡಿ ಮೃತ ಭಾರತಿಯ ತಾಯಿ ನೀಡಿದ್ದ ದೂರನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ನಡೆಸಿರುವುದು ಗೊತ್ತಾಗಿತ್ತು. ಆರೋಪಿಗಳು ವಿಚಾರಣೆ ವೇಳೆಯಲ್ಲಿ ಶವಹೂತಿಟ್ಟ ಬಗ್ಗೆ ತಪ್ಪೊಪ್ಪಿಕೊಂಡು ಅ.14ರಂದು ಸ್ಥಳ ಮಹಜರು ನಡೆಸಲಾಗಿತ್ತು.

ಹೂತಿಟ್ಟ ಶವ ಹೊರತೆಗೆಯಲು ತರೀಕೆರೆ ಉಪವಿಭಾಗಾಧಿಕಾ ರಿಗೆ ಅರ್ಜಿ ಸಲ್ಲಿಸಿದ ಪೊಲೀಸರು ಅವರ ನಿರ್ದೇಶನದಂತೆ ಕಡೂರು ತಹಶೀಲ್ದಾರ್‌ ಸಿ.ಎಸ್‌.ಪೂರ್ಣಿಮಾ ಅವರಿಂದ ಕಾನೂನಾತ್ಮಕ ಅನುಮತಿ ಪಡೆದು ಅವರ ಉಪಸ್ಥಿತಿಯಲ್ಲಿಯೇ ಜೆಸಿಬಿ ಯಂತ್ರದಿಂದ ಗುಂಡಿ ತೆಗೆದು ಶವವನ್ನು ಹೊರ ತೆಗೆಯಲಾಯಿತು. ಅರೆಬರೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಶವದ ಮಾದರಿಗಳನ್ನು ಎಫ್ಎಸ್ಎಲ್ ತಂಡದ ತಜ್ಞರು ಸಂಗ್ರಹಿಸಿದರು.  ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಕೊಲೆಗೀಡಾದ ಭಾರತಿಯ ದೇಹ ಹೊರತೆಗೆಯುತ್ತಿದ್ದಂತೆ ಮೃತಳ ತಾಯಿಯ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು. ಮೃತದೇಹ ಹೊರತೆಗೆಯಲು ಪೊಲೀಸರು ಅಧಿಕಾರಿಗಳ ತಂಡ ದೊಂದಿಗೆ ಬರುತ್ತಿದ್ದಂತೆ ಸುತ್ತಮುತ್ತಲ ಗ್ರಾಮಸ್ಥರು ಜಮೀನಿನ ಬಳಿ ಸೇರಿದ್ದರು.

ತರೀಕೆರೆ ಡಿವೈಎಸ್‌ಪಿ ಪರಶುರಾಮಪ್ಪ, ಕಡೂರು ಸಿಪಿಐ ರಫೀಕ್ ಎಂ., ಪಿಎಸ್‌ಐಗಳಾದ ಸಜಿತ್‌ಕುಮಾರ್‌, ಧನಂಜಯ್, ಕಂದಾಯ ನಿರೀಕ್ಷಕ ರವಿಕುಮಾರ್, ಪೊಲೀಸ್ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.

The body was exhumed and handed over to the family.

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧ ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ’ರಾಷ್ಟ್ರೀಯ ಲೋಕ್ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಗೌ.ಪ್ರಧಾನ ಜಿಲ್ಲಾ...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ ಸಂಚಾರ) ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ದುಡುಕುತನದಿಂದ ಡಿಕ್ಕಿ ಹೊಡೆದ ಪರಿಣಾಮ...

Related Articles

ಅಮೃತ್ 2.0 ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕುಡಿಯುವ ನೀರಿನ...

ವಿಕಲಚೇತನ ವ್ಯಕ್ತಿಯ ₹8 ಲಕ್ಷ ಬ್ಯಾಂಕ್ ಸಾಲ ಕೇವಲ ₹15,000 ಕ್ಕೆ ಇತ್ಯರ್ಥ

ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ವಿಶೇಷ...

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ...

ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು

ಚಿಕ್ಕಮಗಳೂರು: ಸರ್ಕಾರದ ಅನುದಾನದ ಕೊರತೆ ನಡುವೆ ಕೆಪಿಟಿಸಿಎಲ್ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನ...