Home Latest News ಜಿಲ್ಲೆಯಲ್ಲಿ ಬಿದ್ದ ಧಾರಾಕಾರ ಮಳೆಯಿಂದ ಭಾರಿ ಹಾನಿ
Latest NewschikamagalurHomenamma chikmagalur

ಜಿಲ್ಲೆಯಲ್ಲಿ ಬಿದ್ದ ಧಾರಾಕಾರ ಮಳೆಯಿಂದ ಭಾರಿ ಹಾನಿ

Share
Share

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಹಾಗೂ ಬಯಲು ಸೀಮೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭಾರಿ ಹಾನಿ ಸಂಭವಿಸುತ್ತಿದೆ. ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು ಮತ್ತೆ ತುಂಬಿ ಹರಿಯಲಾರಂಭಿಸಿದ್ದರೆ, ಬಯಲು ಸೀಮೆ ಭಾಗದಲ್ಲಿ ಕೆರೆಗಳು ಕೋಡಿ ಬಿದ್ದಿವೆ. ಅಲ್ಲದೆ ಅಲ್ಲಲ್ಲಿ ಮನೆಗಳಿಗೂ ಹಾನಿಯಾಗಿದೆ. ಇನ್ನು ಚಿಕ್ಕಮಗಳೂರು ತಾಲೂಕಿನಲ್ಲಿ ತರಕಾರಿ ಬೆಳೆಗಳು ಜಲಾವೃತಗೊಂಡಿದ್ದು, ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಹರಸಾಹಪಡುವಂತಾಗಿದೆ.

ಚಿಕ್ಕಮಗಳೂರು ತಾಲೂಕಿನ ಬಂಡಿಹಳ್ಳಿ ಗ್ರಾಮದಲ್ಲಿ ಕಳೆದ ಮರ‍್ನಾಲ್ಕು ದಿನಗಳಿಂದ ಸುರಿಯುತ್ತಿರುವ ಅತಿಯಾದ ಮಳೆಯಿಂದ ಅಕ್ಕಪಕ್ಕದ ಕೆರೆಗಳು ಕೋಡಿಬಿದ್ದು ಹತ್ತಾರು ಎಕರೆ ಕೃಷಿ ಭೂಮಿಯು ನೀರಿನಿಂದ ಮುಳುಗಡೆಗೊಂಡಿದೆ. ಭಾರಿ ಮಳೆಯಿಂದಾಗಿ ಈ ಭಾಗದಲ್ಲಿ ಬೆಳೆದಿರುವ ಹೂ ಕೋಸು, ಅಡಕೆ, ಬಾಳೆ, ಮೆಕ್ಕೆಜೋಳ ಬೆಳೆಗಳು ಸಂಪೂರ್ಣವಾಗಿ ನೀರಿನಿಂದ ಮುಳುಗಡೆಗೊಂಡು ರೈತರಿಗೆ ಕೈಗೆ ಬಂದ ತುತ್ತಾ ಬಾಯಿಗೆ ಬರದಂತಾಗಿದೆ ಎಂದು ಸ್ಥಳೀಯ ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇನ್ನು ಕಡೂರು ತಾಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಸಿಂಗಟಗೆರೆ ಹೋಬಳಿಯ ಎಸ್.ಮಾದಾಪುರ ಗ್ರಾಮದ ೧೫ ಎಕರೆ ವಿಸ್ತೀರ್ಣದ ಕೆರೆ ಒಂದೇ ದಿನದ ಮಳೆಗೆ ಭರ್ತಿಯಾಗಿ ಕೋಡಿ ಬಿದ್ದಿದೆ. ಈ ಭಾಗದಲ್ಲಿ ಆಗಾಗ್ಗೆ ಸಾಧಾರಣ ಮಳೆಯಾಗಿದ್ದರಿಂದ ಕೆರೆ ಭರ್ತಿಯಾಗಿರಲಿಲ್ಲ. ಹೀಗಾಗಿ ಬರಗಾಲದ ಛಾಯೆ ಆವರಿಸಿತ್ತು. ಇದೀಗ ಒಂದೇ ದಿನದಲ್ಲಿ ಕೆರೆ ಭರ್ತಿಯಾಗಿ ಕೋಡಿ ಬಿದ್ದಿದ್ದರಿಂದ ರೈತರು ಸಂತಸಗೊಂಡಿದ್ದಾರೆ.

ಇನ್ನು ಮಲೆನಾಡು ಭಾಗದಲ್ಲಿ ಅಡಕೆ ಕೊಯ್ಲಿಗೆ ರೈತರು ಸಿದ್ಧತೆ ಆರಂಭಿಸಿದ್ದರು. ಆದರೆ ಇದೀಗ ಧಾರಾಕಾರ ಮಳೆ ಆರಂಭಗೊAಡಿದ್ದರಿAದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಅಡಕೆ ಕೊಯ್ಲು ಮಾಡಿದಲ್ಲಿ ಅಡಕೆ ಒಣಗಿಸಲು ಸಾಧ್ಯವಾಗದ ಸ್ಥಿತಿ ಇದೆ. ಇನ್ನು ಅಡಕೆ ಕೊಯ್ಲು ಮಾಡದೇ ಹಾಗೆಯೇ ಬಿಟ್ಟಲ್ಲಿ ಮರದಲ್ಲೇ ಅಡಕೆ ಹಣ್ಣಾಗುವ ಆತಂಕ ಎದುರಾಗಿದೆ.

Heavy rains in the district cause extensive damage

Share

Leave a comment

Leave a Reply

Your email address will not be published. Required fields are marked *

Don't Miss

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್ ಎಂಬುವವರ ಮನೆ ಮುಂದೆ ನಿಲ್ಲಿಸಲಾಗಿದ್ದ ಆಟೋರಿಕ್ಷಾ ಹಾಗೂ ಅವರ ಮನೆಯ ಮೇಲೆ ಬೃಹತ್ ಮರವೊಂದು...

ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆ – ಅಂಗನವಾಡಿಗಳಿಗೆ ರಜೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಆರ್ಭಟ ಮುಂದುವರಿದಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ನಾಳೆ...

Related Articles

ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ

ಕಡೂರು: ಮುಂಗಾರು ಮಳೆಯ ಕೊರತೆಯಿಂದ ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ ಎದುರಾಗಿದ್ದು, ಕುಡಿಯುವ ನೀರು, ಜಾನುವಾರುಗಳ...

ಜು.21ಕ್ಕೆ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶ

ಚಿಕ್ಕಮಗಳೂರು : ೪೬ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶವನ್ನು ಜು.೨೧...

ಅಕ್ರಮವಾಗಿ ಸಾಗಿಸುತ್ತಿ ಕಾಡುಜಾತಿಯ ಮರಗಳ ದಿಮ್ಮಿಗಳ ವಶ

ಮೂಡಿಗೆರೆ: ಕಾಡುಜಾತಿಯ ಮರಗಳ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಾಲ್ಲೂಕಿನ ಹಂಡುಗುಳಿ ಗ್ರಾಮದ ಸಮೀಪ ಅರಣ್ಯ ಇಲಾಖೆ...

ಜವಾಹರ್ ನವೋದಯ ವಿದ್ಯಾಲಯದಲ್ಲಿ ಪ್ರವೇಶಕ್ಕೆ ಆಹ್ವಾನ

ಚಿಕ್ಕಮಗಳೂರು:  ಸೀಗೋಡುವಿನ ಪಿ.ಎಂ.ಶ್ರೀ ಜವಾಹರ ನವೋದಯ ವಿದ್ಯಾಲಯವು  ವಸತಿಯುತ ಸಹಶಿಕ್ಷಣ ವಿದ್ಯಾಲಯವಾಗಿದ್ದು, ಗ್ರಾಮೀಣ ಪ್ರದೇಶದ ಪ್ರತಿಭಾವಂತ...